Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಮುದ್ವೇಷ ಹರಡುವುದು ಅಕ್ಷಮ್ಯ ಅಪರಾಧ:...

ಕೋಮುದ್ವೇಷ ಹರಡುವುದು ಅಕ್ಷಮ್ಯ ಅಪರಾಧ: ಜನವಾದಿ ಮಹಿಳಾ ಸಂಘಟನೆ

ವಾರ್ತಾಭಾರತಿವಾರ್ತಾಭಾರತಿ9 April 2020 6:28 PM IST
share

ಬೆಂಗಳೂರು, ಎ.9: ಕೊರೋನದಂತಹ ಜೀವಘಾತುಕ ಮಹಾರೋಗದ ವಿರುದ್ಧ ಇಡೀ ಜಗತ್ತು ಒಗ್ಗಟ್ಟಾಗಿ ನಿಂತು ವೈಜ್ಞಾನಿಕ ಮತ್ತು ಶುದ್ಧ ಮಾನವೀಯ ನೆಲೆಯಲ್ಲಿ ಇದನ್ನು ಎದುರಿಸಿ ಹಿಮ್ಮೆಟಿಸಬೇಕಿದೆ. ಇಂತಹ ಸೂಕ್ಷ್ಮ ಹೊತ್ತಲ್ಲಿಯೂ ಕ್ಷುಲ್ಲಕ ರಾಜಕಾರಣ ಮಾಡುತ್ತ ಕೋಮುದ್ವೇಷವನ್ನು ಹರಡುವುದು ಅಕ್ಷಮ್ಯ ಅಪರಾಧವಾಗುತ್ತದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

ತಬ್ಲೀಗ್ ಮರ್ಕಝ್‍ನಲ್ಲಿ ಸಂಭವಿಸಿದ ಅವಘಡವನ್ನು ಯಾರೂ ಸಮರ್ಥಿಸಬೇಕಿಲ್ಲ. ಆ ಸಮಾವೇಶವನ್ನು ಸಂಘಟಿಸಿದವರು ಒಂದಿಷ್ಟು ಎಚ್ಚರಿಕೆಯನ್ನು ವಹಿಸಲೇಬೇಕಾಗಿತ್ತು ಎನ್ನುವುದನ್ನು ಎಲ್ಲರೂ ಒಪ್ಪಬೇಕು. ಅವಘಡವಾಗಿದೆ. ಅದರಿಂದ ಹೊರಬರುವ ದಾರಿಗಾಗಿ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕಿದೆ ಎಂದು ಸಂಘಟನೆಯ ಅಧ್ಯಕ್ಷೆ ದೇವಿ ಹಾಗೂ ಪ್ರಧಾನ ಕಾರ್ಯದರ್ಶಿ ಗೌರಮ್ಮ ತಿಳಿಸಿದ್ದಾರೆ.

ದುರಂತವೆಂದರೆ, ಕೋಮುವಾದಿಗಳು ಈ ಘಟನೆಯನ್ನು ಮುಸ್ಲಿಮ್ ವಿರೋಧಿ ಅಲೆಯಾಗಿ ಹಬ್ಬಿಸುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ನಡೆಯಾಗಿದೆ. ಇದನ್ನು ಪ್ರಜ್ಞಾವಂತರು ಮತ್ತು ಸಾಮರಸ್ಯ, ಸಹಬಾಳ್ವೆಯ ಶಾಂತ ಸಮಾಜವನ್ನು ಬಯಸುವ ಎಲ್ಲರೂ ಖಂಡಿಸಬೇಕು ಎಂದು ಅವರು ಹೇಳಿದ್ದಾರೆ.

ತಬ್ಲೀಗ್ ಜಮಾಅತ್‍ನವರು ಇಡೀ ದೇಶದ ಮುಸ್ಲಿಮರ ಪ್ರತಿನಿಧಿಗಳಲ್ಲ. ತಪ್ಪಿತಸ್ಥರನ್ನು ತಪ್ಪಿತಸ್ಥರೆಂದು ಕರೆದು ಅಂಥ ಮೂರ್ಖರನ್ನು ಪತ್ತೆ ಹಚ್ಚಿ ಈ ನೆಲದ ಕಾನೂನಿಗೆ ಒಳಪಡಿಸಿ ಶಿಕ್ಷಿಸಬೇಕು. ಆದರೆ, ಮುಸ್ಲಿಮ್ ಸಮುದಾಯವನ್ನೆ ಭಯೋತ್ಪಾದಕರಂತೆ ಬಿಂಬಿಸುವುದು, ಅವರ ಬಗೆಗೆ ದ್ವೇಷ ಮಡುಗುಟ್ಟುವಂತೆ ಮಾಡುವುದು ಸಲ್ಲದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೆ ವಾಟ್ಸ್ ಆ್ಯಪ್ ಯೂನಿವರ್ಸಿಟಿಯಲ್ಲಿ ಮುಸ್ಲಿಮರ ಕುರಿತು ನೂರಾರು ಫೇಕ್ ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಮಿಡಿಯಾಗಳಂತು ಉತ್ಪ್ರೇಕ್ಷಿತ ಹೇಳಿಕೆಗಳನ್ನು ಪುಂಖಾನುಪುಂಖವಾಗಿ ಪ್ರಸಾರ ಮಾಡುತ್ತಿವೆ. ಈ ಜನಾಂಗೀಯ ದ್ವೇಷವು ಕೊರೋನಕ್ಕಿಂತ ಭಯಾನಕ ರೋಗವಾಗಿ ಪರಿಣಮಿಸುತ್ತಿದೆ. ದೈಹಿಕ ರೋಗದಿಂದ ಇಂದಲ್ಲ ನಾಳೆ ಗುಣಮುಖರಾಗುತ್ತೇವೆ. ಆದರೆ, ಧರ್ಮದ್ವೇಷದ ಮಾನಸಿಕ ರೋಗದಿಂದ ಮುಕ್ತರಾಗುವುದು ಅಷ್ಟು ಸುಲಭವಲ್ಲ ಎಂದು ಅವರು ಹೇಳಿದ್ದಾರೆ.

ಮುಸ್ಲಿಮರಿಂದ ಯಾರೂ ಏನೂ ಖರೀದಿಸಬಾರದು. ಅವರನ್ನು ಮನೆಯ ಬಳಿ ಸುಳಿಯಗೊಡಬಾರದು. ಎಲ್ಲ ಕೆಲಸಗಳಿಂದ ದೂರವಿಡಬೇಕು. ಯಾವುದೇ ರೀತಿಯ ಸಂಪರ್ಕ ಇಟ್ಟುಕೊಳ್ಳಬಾರದು ಎಂಬಂತಹ ಹೇಳಿಕೆಗಳು ಫೇಸ್‍ಬುಕ್, ವಾಟ್ಸ್ ಆ್ಯಪ್‍ಗಳಲ್ಲಿ ಎಗ್ಗಿಲ್ಲದೆ ಹರಿದಾಡುತ್ತಿವೆ. ಕೆಲವರಂತೂ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂಬಷ್ಟರ ಮಟ್ಟಿನ ಉಗ್ರ ಹೇಳಿಕೆಗಳನ್ನು ಹರಿ ಬಿಡುತ್ತಿದ್ದಾರೆ ಎಂದು ದೇವಿ ಮತ್ತು ಗೌರಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಂತಹ ಭಿತ್ತಿಪತ್ರಗಳನ್ನು ಅಂಟಿಸಿರುವ ಸುದ್ದಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಸ್ಥಳೀಯ ಜಿಲ್ಲಾಡಳಿತ ಹಾಗೂ ಮುಖ್ಯಮಂತ್ರಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣ ಈ ವಿಷಕಾರಕ ಮನಸ್ಸುಗಳನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X