Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ವರ್ಣ ನದಿಯಲ್ಲಿ ನೀರಿನ ಹರಿವು ಇಳಿಕೆ:...

ಸ್ವರ್ಣ ನದಿಯಲ್ಲಿ ನೀರಿನ ಹರಿವು ಇಳಿಕೆ: ಶಿರೂರು ಡ್ಯಾಂ ಬಳಿ ಪಂಪಿಂಗ್

ವಾರ್ತಾಭಾರತಿವಾರ್ತಾಭಾರತಿ9 April 2020 8:15 PM IST
share
ಸ್ವರ್ಣ ನದಿಯಲ್ಲಿ ನೀರಿನ ಹರಿವು ಇಳಿಕೆ: ಶಿರೂರು ಡ್ಯಾಂ ಬಳಿ ಪಂಪಿಂಗ್

ಉಡುಪಿ, ಎ.9: ಉಡುಪಿ ನಗರಸಭೆಗೆ ನೀರು ಪೂರೈಸುವ ಸ್ವರ್ಣ ನದಿಯ ಶಿರೂರು ಡ್ಯಾಂ ಸಮೀಪದ ಬೊಮ್ಮರಬೆಟ್ಟು ಗ್ರಾಪಂ ವ್ಯಾಪ್ತಿಯ ಸಾಣೆಬೆಟ್ಟು ಎಂಬಲ್ಲಿ ನೀರಿನ ಹರಿವು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಪಂಪ್‌ಗಳನ್ನು ಆಳವಡಿಸಿ, ನೀರನ್ನು ಹಾಯಿಸುವ ಕಾರ್ಯ ಇಂದಿನಿಂದ ಆರಂಭಿಸಲಾಗಿದೆ.

ಈ ಬಾರಿ ಉಡುಪಿ ನಗರಸಭೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗ ದಂತೆ ಟೆಂಡರ್ ಕರೆದು ಗುತ್ತಿಗೆದಾರರಿಗೆ ಈ ಕೆಲಸ ವಹಿಸಿಕೊಡಲಾಗಿದ್ದು, ಅದಕ್ಕಾಗಿ ಗಂಟೆಗೆ 1,117ರೂ. ಪಾವತಿಸಲಾಗುತ್ತದೆ. ಸದ್ಯ ಸಾಣೆಬೆಟ್ಟುವಿನಲ್ಲಿ ಬೆಳಗ್ಗೆ ಎರಡು ಪಂಪ್‌ ಗಳನ್ನು ಮತ್ತು ಸಂಜೆ ಒಂದು ಪಂಪ್‌ಗಳನ್ನು ಆಳವಡಿಸಿ ನೀರನ್ನು ಶಿೂರು ಡ್ಯಾಂಗೆ ಹಾಯಿಸಲಾಗುತ್ತಿದೆ.

ಇಲ್ಲಿ ಸುಮಾರು 15-20ದಿನಗಳಿಗೆ ಬೇಕಾದ ನೀರಿನ ಸಂಗ್ರಹ ಇದೆ. ನಂತರ ಶಿರೂರು ಡ್ಯಾಮ್ ಬಳಿ ಮತ್ತೆ ಎರಡು ಪಂಪ್‌ ಗಳನ್ನು ಆಳವಡಿಸಿ, ಒಟ್ಟು ಐದು ಪಂಪ್‌ಗಳ ಮೂಲಕ ನೀರು ಹಾಯಿಸುವ ಕಾರ್ಯ ಮಾಡಲಾಗುತ್ತದೆ. ಇದರಿಂದ ಬಜೆ ಡ್ಯಾಂನಲ್ಲಿ ನೀರು ಸಂಗ್ರಹ ಹೆಚ್ಚಾಗಲು ಸಹಕಾರವಾಗುತ್ತದೆ.

ಇಂದು ಸ್ಥಳಕ್ಕೆ ಆಗಮಿಸಿದ ಉಡುಪಿ ಶಾಸಕ ಕೆ.ರಘುಪತಿ ಭಟ್, ನಗರಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ್‌ರಾಜ್, ಕಿರಿಯ ಅಭಿಯಂತರ ದುರ್ಗಾ ಪ್ರಸಾದ್ ಪಂಪಿಂಗ್ ಕಾರ್ಯವನ್ನು ಪರಿಶೀಲಿಸಿದರು.

‘ಕಳೆದ ವರ್ಷ ಮಾಡಿರುವ ತಪ್ಪು ನಿರ್ಧಾರದಿಂದಾಗಿ ಮೇ ತಿಂಗಳಲ್ಲಿ ಬಜೆ ಡ್ಯಾಂ ನೀರು ಸಂಪೂರ್ಣ ಖಾಲಿ ಆಗಿತ್ತು. ನದಿಯಲ್ಲಿ ಹರಿಯುವ ನೀರು ಒಮ್ಮೆ ಸಂಪರ್ಕ ಕಡಿದುಕೊಂಡರೆ ಮತ್ತೆ ಅದನ್ನು ಬಜೆ ಡ್ಯಾಂವರೆಗೆ ತರಲು ಕಷ್ಟವಾಗುತ್ತದೆ. ಅದಕ್ಕಾಗಿ ಹರಿವು ಕಡಿಮೆಯಾಗುತ್ತಿದ್ದಂತೆ ಎಪ್ರಿಲ್ ತಿಂಗಳಲ್ಲೇ ನೀರನ್ನು ಪಂಪಿಂಗ್ ಮಾಡಿ ಹಾಯಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು.

ಸೂಕ್ತ ಸಮಯದಲ್ಲಿ ಕೆಲಸ ಆರಂಭಿಸುವುದರಿಂದ ನೀರಿನ ಸಮಸ್ಯೆ ಬಾರದಂತೆ ಕ್ರಮ ತೆಗೆದುಕೊಳ್ಳಲಾಗುವುದು. ಹೀಗೆ ಮಾಡುವುದರಿಂದ ಮೇ ಅಂತ್ಯದವರೆಗೆ ಯಾವುದೇ ಅಡೆ ತಡೆ ಇಲ್ಲದೆ ಕೊಡಲು ಸಾಧ್ಯವಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಜೆ ಡ್ಯಾಂನಲ್ಲಿ ಸದ್ಯ 4.49ಮೀಟರ್ ನೀರಿನ ಸಂಗ್ರಹ ಇದ್ದು, ಇದರಲ್ಲಿ 3.30ಮೀಟರ್ ನೀರನ್ನು ಬಳಸಬಹುದಾಗಿದೆ. ಪ್ರತಿದಿನ 8-9 ಸೆ.ಮೀ. ನೀರನ್ನು ಬಳಸಿದರೂ 35-40 ದಿನಗಳಿಗೆ ಬೇಕಾಗುವಷ್ಟು ನೀರು ಇದೆ. ಇದೀಗ ಶಿರೂರು ಡ್ಯಾಂ ಬಳಿ ನೀರು ಪಂಪಿಂಗ್ ಮಾಡುವುದರಿಂದ ಮೇ ಅಂತ್ಯದ ವರೆಗೂ ನೀರು ಸಾಕಾಗಬಹುದು.

-ಮೋಹನ್‌ರಾಜ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ನಗರಸಭೆ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X