Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಬ್ರಿ: ತಹಶೀಲ್ದಾರ್‌ರಿಂದ ಅಂಗಡಿಗಳ...

ಹೆಬ್ರಿ: ತಹಶೀಲ್ದಾರ್‌ರಿಂದ ಅಂಗಡಿಗಳ ತಪಾಸಣೆ, ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 April 2020 9:18 PM IST
share

ಹೆಬ್ರಿ, ಎ.9: ಕೊರೋನ ಮಹಾಮಾರಿಯ ಹಿನ್ನಲೆಯಲ್ಲಿ ಸರಕಾರ ಲಾಕ್ ಡೌನ್ ಘೋಷಿಸಿದ್ದು, ಇದರಿಂದ ಜನಸಾಮಾನ್ಯರು ಕೆಲಸವಿಲ್ಲದೆ, ಕ್ಯೆಯಲ್ಲಿ ಕಾಸೂ ಇಲ್ಲದೆ ಕಂಗಾಲಾಗಿದ್ದರೆ, ಇನ್ನೊಂದು ಕಡೆ ಅಗತ್ಯ ವಸ್ತುಗಳ ಹೆಸರಿನಲ್ಲಿ ಅಂಗಡಿಯನ್ನು ಚಾಲು ಮಾಡುವ ಜಿನಸಿ ಅಂಗಡಿಗಳ ಮಾಲಕರು ಜನರನ್ನು ಸುಲಿಗೆ ಮಾಡುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಹೆಬ್ರಿ ತಹಶೀಲ್ದಾರ್ ಕೆ.ಮಹೇಶ್ಚಂದ್ರ ಹಲವು ಅಂಗಡಿಗೆ ತೆರಳಿ ತಪಾಸಣೆ ನಡೆಸಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಅತಿ ಅಗತ್ಯವಾದ ತರಕಾರಿ, ಹಣ್ಣು ಹಂಪಲು ಸಹಿತ ದಿನಬಳಕೆಯ ವಸ್ತುಗಳನ್ನು ಅತೀ ದುಬಾರಿ ಬೆಲೆ ಮಾರಾಟ ಮಾಡುತ್ತಿರುವ ಬಗ್ಗೆ ಹೆಬ್ರಿ ತಹಶೀಲ್ಧಾರ್‌ಗೆ ಸಾರ್ವಜನಿಕರಿಂದ ಬಂದ ಖಚಿತ ದೂರಿನ ಹಿನ್ನಲೆಯಲ್ಲಿ ಕಂದಾಯ ಅಧಿಕಾರಿಗಳ ತಂಡದೊಂದಿಗೆ ಮುನಿಯಾಲಿನ ಕೆಲಕಡೆ ಮತ್ತು ಮಡಾಮಕ್ಕಿಯ ಅಂಗಡಿಗಳಿಗೆ ದಿಡೀರ್ ಬೇಟ ನೀಡಿ ಪರಿಶೀಲಿಸಿ ಖಡಕ್ ವಾರ್ನಿಂಗ್ ನೀಡಿದ ಘಟನೆ ಗುರುವಾರ ನಡೆದಿದೆ.

ಮಾರುಕಟ್ಟೆಯಲ್ಲಿ ಸಾಮಾನ್ಯವಾಗಿ ಕೆಜಿಗೆ 9-10ರೂ.ಗೆ ಸಿಗುವ ಟೊಮ್ಯಾಟೊವನ್ನು ಅಂಗಡಿಯವರು 45, 50, 60, 65ರೂ. ಹೀಗೆ ನಾನಾ ದರದಲ್ಲಿ ಮಾರಿ ಜನರನ್ನು ಕಳೆದ 15 ದಿನಗಳಿಂದ ಸುಲಿಗೆ ಮಾಡುತಿದ್ದರು. ಇದರಿಂದ ಬೇಸತ್ತ ಗ್ರಾಮೀಣ ಪ್ರದೇಶದ ಮನೆಮಂದಿ, ಜನಸಾಮಾನ್ಯರು, ಕೂಲಿಕಾರ್ಮಿಕರು ತಹಶೀಲ್ದಾರ್‌ಗೆ ದೂರು ನೀಡಿದ್ದರೆಂದು ತಿಳಿದುಬಂದಿದೆ.

ಖಡಕ್ ಎಚ್ಚರಿಕೆ: ಜನಸಾಮಾನ್ಯರು ಕೊರೋನ ಲಾಕ್‌ಡೌನ್‌ನಿಂದ ಆರ್ಥಿಕ ಮುಗ್ಗಟ್ಟಿನೊಂದಿಗೆ ಭಾರೀ ಸಮಸ್ಯೆ ಎದುರಿಸುತಿದ್ದಾರೆ. ಆದುದರಿಂದ ಯಾವುದೇ ದಿನಬಳಕೆಯ ದಿನಸಿ ಸಾಮಾನು, ತರಕಾರಿಯನ್ನು ದುಬಾರಿ ಬೆಲೆಗೆ ಮಾರಾಟ ಮಾಡಬಾರದು. ಕನಿಷ್ಠ ಬೆಲೆಗೆ ಮಾರಬೇಕು. ಮಾರುವ ಬೆಲೆಯನ್ನು ಗ್ರಾಹಕರಿಗೆ ಕಾಣುವಂತೆ ಅಂಗಡಿಯ ಎದುರು ದರ ಪಟ್ಟಿಯನ್ನು ಅಂಟಿಸಬೇಕು ಎಂದು ಹೆಬ್ರಿ ತಾಲೂಕು ವ್ಯಾಪ್ತಿಯ ಎಲ್ಲಾ ಅಂಗಡಿಗಳ ಮಾಲಕರಿಗೆ ಮಹೇಶ್ಚಂದ್ರ ಖಡಕ್ ಎಚ್ಚರಿಕೆ ನೀಡಿದರು. ಒಂದು ವೇಳೆ ದುಬಾರಿ ಬೆಲೆಗೆ ಮಾರಾಟ ಮಾಡಿ ಸಾರ್ವಜನಿಕರಿಂದ ದೂರು ಬಂದರೆ ಕಠಿಣ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಅಧಿಕಾರಿಗಳ ದಿಢೀರ್ ಭೇಟಿ: ತಾಲೂಕಿನ ಮಡಾಮಕ್ಕಿ ಮತ್ತಿತರ ಪ್ರದೇಶ ದಲ್ಲಿ ಅಂಗಡಿ ಮಾಲಕರು ತರಕಾರಿಗಳ ಸಹಿತ ದಿನಬಳಕೆಯ ವಸ್ತುಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಹೆಬ್ರಿ ತಹಶೀಲ್ಧಾರ್ ಕೆ. ಮಹೇಶ್ಚಂದ್ರ ಮತ್ತವರ ತಂಡ,ಅಂಗಡಿ ಮುಂಗಟ್ಟುಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮುನಿಯಾಲು ಚಟ್ಕಲ್‌ಪಾದೆಯ ದಿನಸಿ ಅಂಗಡಿಗೆ ಹೆಬ್ರಿ ಅಜೆಕಾರು ಕಂದಾಯ ನಿರೀಕ್ಷಕ ಮಂಜುನಾಥ ನಾಯಕ್, ಹೆಬ್ರಿ ತಹಶೀಲ್ಧಾರ್‌ರ ಸೂಚನೆ ಮೇರೆಗೆ ತೆರಳಿ ದುಬಾರಿ ಬೆಲೆಗೆ ಮಾರಾಟ ಮಾಡದಂತೆ ಅಂಗಡಿ ಮಾಲಕರಿಗೆ ಎಚ್ಚರಿಕೆ ನೀಡಿದರು.

ವರಂಗ ಗ್ರಾಮ ಲೆಕ್ಕಾಧಿಕಾರಿ ರಾಚಪ್ಪಜೀ ನೇತೃತ್ವದಲ್ಲಿ ಇನ್ನೊಂದು ತಂಡವೂ ಇದೇ ರೀತಿ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿಗಳನ್ನು ಸಂಗ್ರಹಿಸಿತು. ಅಲ್ಲದೇ ದಿನಬಳಕೆ ಸಾಮಾಗ್ರಿಗಳ ಮತ್ತು ತರಕಾರಿಗಳ ದರದ ಪಟ್ಟಿಯನ್ನು ಅಂಗಡಿಯ ಗೋಡೆಗೆ ಅಂಟಿಸುವಂತೆ ತಾಕೀತು ಮಾಡಿತು ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X