ಆಲಿಕಲ್ಲು ಸಹಿತ ಮಳೆ: ಬೆಳೆ ನಷ್ಟ ಸಮೀಕ್ಷೆ ನಡೆಸಿ ಪರಿಹಾರ ನೀಡಲು ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು, ಎ. 9: ಮೂರು ದಿನಗಳಿಂದ ರಾಜ್ಯದಲ್ಲಿ ಗಾಳಿ ಮತ್ತು ಆಲಿಕಲ್ಲು ಸಹಿತ ಸುರಿಯುತ್ತಿರುವ ಪೂರ್ವ ಮುಂಗಾರು ಮಳೆಯಿಂದಾಗಿ ಕೊಪ್ಪಳ, ಬಳ್ಳಾರಿ, ರಾಯಚೂರು, ಮೈಸೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭತ್ತ, ಬಾಳೆ, ಕಬ್ಬು ಮತ್ತಿತರ ಬೆಳೆ ಹಾನಿಗೊಳಗಾಗಿದ್ದು, ಕೂಡಲೇ ಸಮೀಕ್ಷೆ ನಡೆಸಿ, ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ ಇನ್ನೂ ಮೂರು-ನಾಲ್ಕು ದಿನಗಳು ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ವರ್ಷ ಪ್ರವಾಹ ಮತ್ತು ಈಗಿನ ಕೊರೋನ ವೈರಸ್ ಸೋಂಕಿನ ಪರಿಣಾಮ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ಸರಕಾರ ರೈತರಿಗೆ ನೆರವಿಗೆ ಧಾವಿಸಬೇಕು ಎಂದು ಸಿದ್ಧರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.
Next Story