Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.: ಕ್ರೈಸ್ತರಿಂದ ‘ಪವಿತ್ರ ಗುರುವಾರ’...

ದ.ಕ.: ಕ್ರೈಸ್ತರಿಂದ ‘ಪವಿತ್ರ ಗುರುವಾರ’ ಆಚರಣೆ

ಸಾಮಾಜಿಕ ಅಂತರ’ಕ್ಕಾಗಿ ಪಾದ ತೊಳೆಯುವ ಸಂಪ್ರದಾಯ ಕೈ ಬಿಟ್ಟ ಬಿಷಪ್

ವಾರ್ತಾಭಾರತಿವಾರ್ತಾಭಾರತಿ9 April 2020 10:45 PM IST
share
ದ.ಕ.: ಕ್ರೈಸ್ತರಿಂದ ‘ಪವಿತ್ರ ಗುರುವಾರ’ ಆಚರಣೆ

ಮಂಗಳೂರು, ಎ.9: ದ.ಕ.ಜಿಲ್ಲೆಯ ಕ್ರೈಸ್ತರು ಏಸು ಕ್ರಿಸ್ತರ ಕೊನೆಯ ಭೋಜನದ ದಿನ (ಪವಿತ್ರ ಗುರುವಾರ)ವನ್ನು ಆಚರಿಸಿದರು. ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಅನಿವಾರ್ಯತೆಯ ಕಾರಣಕ್ಕಾಗಿ ಚರ್ಚ್‌ಗಳಲ್ಲಿ ಬಲಿಪೂಜೆ ಇರಲಿಲ್ಲ.

ಮಂಗಳೂರು ಧರ್ಮ ಪ್ರಾಂತದ ಬಿಷಪ್ ರೈ.ರೆ. ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಸಂಜೆ 5 ಗಂಟೆಗೆ ರೊಜಾರಿಯೋ ಕೆಥೆಡ್ರಲ್‌ನಲ್ಲಿ ನಡೆಸಿದ ಬಲಿ ಪೂಜೆಯನ್ನು ಯೂಟ್ಯೂಬ್ ಹಾಗೂ ಖಾಸಗಿ ವಾಹಿನಿಯಲ್ಲಿ ನೇರ ಪ್ರಸಾರ ಮಾಡಲಾಗಿತ್ತು. ಅದನ್ನು ಕ್ರೈಸ್ತರು ತಮ್ಮ ಮನೆಗಳಲ್ಲಿಯೇ ವೀಕ್ಷಿಸಿ ಪ್ರಾರ್ಥನೆಯಲ್ಲಿ ಸಹಭಾಗಿಗಳಾದರು. ಕೆಥೆಡ್ರಲ್‌ನ ರೆಕ್ಟರ್ ಫಾ. ಜೆ. ಬಿ. ಕ್ರಾಸ್ತಾ ಮತ್ತು ಸಹಾಯಕ ಗುರು ಫಾ. ಫ್ಲೇವಿಯನ್ ಲೋಬೊ ಬಲಿಪೂಜೆಯಲ್ಲಿ ಉಪಸ್ಥಿತರಿದ್ದರು.

ಏಸು ಕ್ರಿಸ್ತರು ಶಿಲುಬೆಯಲ್ಲಿ ಸಾವನ್ನಪ್ಪುವ ಮುಂಚಿನ ದಿನ ರಾತ್ರಿ ತನ್ನ ಶಿಷ್ಯರ ಜತೆ ಕೊನೆಯ ಭೋಜನವನ್ನು ಸೇವಿಸಿದ್ದು, ಈ ದಿನವನ್ನು ಕ್ರೈಸ್ತ ಸಭೆ ಪವಿತ್ರ ಗುರುವಾರವನ್ನಾಗಿ ಆಚರಿಸುತ್ತಿದೆ. ಕೊನೆಯ ಭೋಜನದ ಸಂದರ್ಭ ಏಸು ಕ್ರಿಸ್ತರು ಯಾಜಕರ (ಧರ್ಮಗುರುಗಳ) ಸಂಸ್ಕಾರ ಮತ್ತು ಪರಮ ಪ್ರಸಾದದ ಸಂಸ್ಕಾರವನ್ನು ಸ್ಥಾಪಿಸಿದರು ಹಾಗೂ ತನ್ನ 12 ಮಂದಿ ಶಿಷ್ಯಂದಿರ ಪಾದಗಳನ್ನು ತೊಳೆಯುವ ಮೂಲಕ ಸೇವೆಯ ಉಪದೇಶವನ್ನು ನೀಡಿದ್ದರು. ಈ ಮೂರೂ ಸಂಭ್ರಮಗಳನ್ನು ಕ್ರೈಸ್ತ ಸಭೆ ಸಂಯುಕ್ತವಾಗಿ ಆಚರಿಸಿಕೊಂಡು ಬರುತ್ತಿದೆ. ಏಸುಕ್ರಿಸ್ತರು ತನ್ನ ಶಿಷ್ಯರ ಪಾದಗಳನ್ನು ತೊಳೆದುದರ ಸ್ಮರಣಾರ್ಥ ಬಿಷಪ್ ಅಥವಾ ಧರ್ಮಗುರುಗಳು 12 ಮಂದಿ ಕ್ರೈಸ್ತ ವಿಶ್ವಾಸಿಗಳ ಪಾದಗಳನ್ನು ತೊಳೆಯುತ್ತಿರುವುದು ಸಂಪ್ರದಾಯವಾಗಿ ಬಂದಿದೆ. ಆದರೆ ಈ ವರ್ಷ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬರ ಬೇಕಾಗಿರುವುದರಿಂದ ಪಾದಗಳನ್ನು ತೊಳೆಯುವ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿತ್ತು.

ಬಲಿ ಪೂಜೆಯ ವೇಳೆ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು. ಕೊರೋನ ಕಾಯಿಲೆಯಿಂದ ಬಳಲುತ್ತಿರುವವರು ಶೀಘ್ರ ಗುಣಮುಖರಾಗಲಿ ಹಾಗೂ ಈ ರೋಗ ಆದಷ್ಟು ಬೇಗನೆ ನಿರ್ಮೂಲನವಾಗಲಿ, ರೋಗಿಗಳಿಗೆ ಸೇವೆ ಒದಗಿಸುತ್ತಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ವರ್ಗಕ್ಕೆ ದೇವರು ಉತ್ತಮ ಆರೋಗ್ಯವನ್ನು ಹಾಗೂ ಇನ್ನಷ್ಟು ಶಕ್ತಿಯನ್ನು ದಯಪಾಲಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸಲಾಯಿತು. ಅಲ್ಲದೆ ಕೊರೋನ ಸೋಂಕಿನಿಂದ ಮೃತಪಟ್ಟವರಿಗೆ ಚಿರಶಾಂತಿಯನ್ನು ಕೋರಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X