Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಕ್‌ಡೌನ್ ವಿಸ್ತರಿಸಲು ವೈದ್ಯಕೀಯ...

ಲಾಕ್‌ಡೌನ್ ವಿಸ್ತರಿಸಲು ವೈದ್ಯಕೀಯ ಕಾರಣವಿಲ್ಲ: ರಾಜ್ಯ ಸರಕಾರ ನೇಮಿಸಿದ ತಜ್ಞರ ಸಮಿತಿ ವರದಿ

ವಾರ್ತಾಭಾರತಿವಾರ್ತಾಭಾರತಿ9 April 2020 11:08 PM IST
share
ಲಾಕ್‌ಡೌನ್ ವಿಸ್ತರಿಸಲು ವೈದ್ಯಕೀಯ ಕಾರಣವಿಲ್ಲ: ರಾಜ್ಯ ಸರಕಾರ ನೇಮಿಸಿದ ತಜ್ಞರ ಸಮಿತಿ ವರದಿ

ಬೆಂಗಳೂರು, ಎ.9: ಲಾಕ್‌ಡೌನ್ ಅನ್ನು 21 ದಿನದ ಬಳಿಕವೂ ಮುಂದುವರಿಸಲು ಯಾವುದೇ ವೈದ್ಯಕೀಯ ಕಾರಣವಿಲ್ಲ . ದೇಶದ ಜನಸಂಖ್ಯೆಯ ಕೇವಲ 6%ದಷ್ಟು ಜನರು ಮಾತ್ರ ಸಂಘಟಿತ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕಾರಣ ಭಾರತ ಸುದೀರ್ಘಾವಧಿಯ ಲಾಕ್‌ಡೌನ್‌ನ ಪರಿಣಾಮವನ್ನು ತಾಳಿಕೊಳ್ಳದು ಎಂದು ರಾಜ್ಯ ಸರಕಾರ ನೇಮಿಸಿರುವ ತಜ್ಞರ ಸಮಿತಿ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.

ಮುಂದಿನ ಕೆಲ ದಿನಗಳಲ್ಲಿ ಸೋಂಕು ತೀವ್ರಗೊಳ್ಳುವ ಸಾಧ್ಯತೆಯಿದೆ. ಆದರೆ ಕ್ರಮೇಣ ಇಳಿಮುಖವಾಗಬಹುದು. ಲಾಕ್‌ಡೌನ್ ಮುಕ್ತಾಯವಾದ ತಕ್ಷಣವೇ ದೇಶದಲ್ಲಿ ಕೊರೋನ ವಿರುದ್ಧದ ಸಮರದಲ್ಲಿ ಚುರುಕಾದ ಮತ್ತು ಅಸಾಂಪ್ರದಾಯಿಕ ಯೋಜನೆಗಳನ್ನು ಅನುಸರಿಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸುದೀರ್ಘಾವಧಿಯ ಲಾಕ್‌ಡೌನ್‌ನಿಂದ ಉದ್ಯಮಕ್ಷೇತ್ರದ ಆರ್ಥಿಕತೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪರಿಸ್ಥಿತಿಗೆ ಕಾರಣವಾಗಬಹುದು. ಮುಂದಿನ ಕನಿಷ್ಟ 6 ತಿಂಗಳವರೆಗೆ ಜೀವನ ಈ ಹಿಂದಿನಂತೆ ಇರಲಾರದು ಎಂಬ ಸಂದೇಶವನ್ನು ಎಲ್ಲರಿಗೂ ನೀಡಬಯಸುತ್ತೇವೆ ಎಂದು ಡಾ. ದೇವಿಶೆಟ್ಟಿ ಅಧ್ಯಕ್ಷತೆಯ ಸಮಿತಿ ತಿಳಿಸಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಮಂಜುನಾಥ್, ರಾಜೀವಗಾಂಧಿ ಆಸ್ಪತ್ರೆಯ ಡಾ ನಾಗರಾಜ್, ಡಾ ರವಿ ಹಾಗೂ ಡಾ ಸುದರ್ಶನ್ ಸಮಿತಿಯ ಸದಸ್ಯರಾಗಿದ್ದಾರೆ.

ತಜ್ಞರ ಸಮಿತಿಯ ಕೆಲವು ಶಿಫಾರಸುಗಳನ್ನು ಗುರುವಾರ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಸ್ತಾವಿಸಲಾಗಿದ್ದು ವರದಿಯಲ್ಲಿ ಎರಡು ವಾರಗಳ ವಿರಾಮದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಕೊನೆಗೊಳಿಸಲು ಸಲಹೆ ನೀಡಲಾಗಿದೆ.

ಸಮಿತಿಯ ವರದಿಯ ಮುಖ್ಯಾಂಶಗಳು ಹೀಗಿವೆ:

ಗಾರ್ಮೆಂಟ್ ಕಾರ್ಖಾನೆ, ಉತ್ಪಾದನಾ ಘಟಕ ಮತ್ತು ಸಣ್ಣ ಮತ್ತು ಮಧ್ಯಮ ಘಟಕಗಳನ್ನು ಲಾಕ್‌ಡೌನ್ ಮುಗಿದ ಮೊದಲ ವಾರದಲ್ಲಿ 50% ಸಿಬ್ಬಂದಿಗಳೊಂದಿಗೆ, ನಂತರದ ವಾರದಲ್ಲಿ ಇತರ 50% ಸಿಬ್ಬಂದಿಗಳೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು.

ಸಾರ್ವಜನಿಕ ಸ್ಥಳಗಳಲ್ಲಿ , ಮಾಲ್, ಜಿಮ್, ಬಾರ್, ಸಿನೆಮ ಥಿಯೇಟರ್, ಧಾರ್ಮಿಕ ಸಂಸ್ಥೆಗಳಲ್ಲಿ ಜನರ ಸಂಚಾರವನ್ನು ನಿರ್ಬಂಧಿಸಬೇಕು. ಹಲವರು ಏಕಕಾಲದಲ್ಲಿ ಬಳಸುವ ಸಾರ್ವಜನಿಕ ಶೌಚಾಲಯಗಳ ಬಳಕೆಗೆ ಎಪ್ರಿಲ್ 30ರವರೆಗೆ ಅವಕಾಶ ನೀಡಬಾರದು.

ಚೀವಿಂಗ್ ಗಮ್ ಮತ್ತು ಪಾನ್ ಮಸಾಲವನ್ನು ಬಳಸಿ ಉಗಿಯುತ್ತಿರುವ ಕಾರಣ ಇದರ ಬಳಕೆಯನ್ನು ನಿರ್ಬಂಧಿಸಬೇಕು.

ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಂದರ್ಭ ಮುಂಚೂಣಿಯಲ್ಲಿ 60 ವರ್ಷಕ್ಕಿಂತ ಮೇಲಿನ ವೈದ್ಯರನ್ನು ನಿಯೋಜಿಸಬಾರದು. ಅಗತ್ಯಬಿದ್ದರೆ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳನ್ನು ಬಳಸಿಕೊಳ್ಳಬೇಕು.

ಪ್ರಯಾಣಿಕರ ಮಧ್ಯೆ ಸಾಕಷ್ಟು ಅಂತರ ಕಾಯ್ದುಕೊಂಡು ಬಸ್ಸುಗಳ ಸಂಚಾರ ಆರಂಭಿಸಬಹುದು. ಆದರೆ ಎಪ್ರಿಲ್ 30ರವರೆಗೆ ಯಾವುದೇ ರೈಲು ಅಥವಾ ವಿಮಾನಗಳ ಪ್ರಯಾಣಕ್ಕೆ ಅವಕಾಶ ನೀಡಬಾರದು. ಅಂತರ್ ಜಿಲ್ಲಾ, ಅಂತರ್ ನಗರ ಮತ್ತು ಅಂತರ್ ರಾಜ್ಯಗಳ ಪ್ರಯಾಣವನ್ನು ನಿರ್ಬಂಧಿಸಬೇಕು. ಹವಾನಿಯಂತ್ರಿತ ವ್ಯವಸ್ಥೆ (ಎಸಿ) ಇಲ್ಲದ ಬಸ್ಸುಗಳ ಮತ್ತು ಆಟೋರಿಕ್ಷಾಗಳ ಸಂಚಾರಕ್ಕೆ ಅವಕಾಶ ನೀಡಬಹುದು.

ಜನರು ಬಳಸಿ ಬಿಸಾಡುವ ಮಾಸ್ಕ್‌ಗಳ ಬದಲು ಬಟ್ಟೆಯಿಂದ ತಯಾರಿಸಿದ, ಒಗೆದು ಮರು ಬಳಸಬಹುದಾದ ಮಾಸ್ಕ್‌ಗಳನ್ನು ಧರಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಬಳಸಿ ಬಿಸಾಡುವ ಮಾಸ್ಕ್‌ಗಳನ್ನು ಚಿಂದಿ ಆಯುವವರು ಹೆಕ್ಕಿ ಮರುಬಳಕೆಗೆ ಪೂರೈಸಿದರೆ ಅದರಿಂದ ವೈರಸ್ ಹಬ್ಬುವ ಅಪಾಯವಿದೆ ಎಂದು ಸಮಿತಿ ಎಚ್ಚರಿಸಿದೆ.

ಎಪ್ರಿಲ್ 22ರಂದು ಪರಿಸ್ಥಿತಿಯನ್ನು ಅವಲೋಕಿಸಿ, ಎಪ್ರಿಲ್ 30ರ ಬಳಿಕ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಶಿಫಾರಸು ರೂಪಿಸಲಾಗುವುದು ಎಂದು ಸಮಿತಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X