Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ: ದೇಶದಲ್ಲಿ ಒಂದೇ ದಿನ 781 ಪ್ರಕರಣ...

ಕೊರೋನ: ದೇಶದಲ್ಲಿ ಒಂದೇ ದಿನ 781 ಪ್ರಕರಣ ಪತ್ತೆ

ವಾರ್ತಾಭಾರತಿವಾರ್ತಾಭಾರತಿ10 April 2020 9:11 AM IST
share
ಕೊರೋನ: ದೇಶದಲ್ಲಿ ಒಂದೇ ದಿನ 781 ಪ್ರಕರಣ ಪತ್ತೆ

ಹೊಸದಿಲ್ಲಿ, ಎ.10: ದೇಶದಲ್ಲಿ ಗುರುವಾರ ಒಂದೇ ದಿನ 781 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಭಾರತದಲ್ಲಿ ಸೋಂಕಿನ ತೀವ್ರತೆಯ ಸ್ಪಷ್ಟಚಿತ್ರಣ ಅನಾವರಣಗೊಳ್ಳುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಬುಧವಾರ ದಾಖಲಾದ 598 ಪ್ರಕರಣಗಳಿಗೆ ಹೋಲಿಸಿದರೆ ಒಂದೇ ದಿನದಲ್ಲಿ ಶೇಕಡ 30ರಷ್ಟು ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 229 ಪ್ರಕರಣಗಳು ವರದಿಯಾಗಿದ್ದು, ಯಾವುದೇ ರಾಜ್ಯದಲ್ಲಿ 150ಕ್ಕಿಂತ ಹೆಚ್ಚು ಪ್ರಕರಣ ಒಂದೇ ದಿನ ವರದಿಯಾಗಿರುವುದು ಇದೇ ಮೊದಲು. ತಮಿಳುನಾಡು (96), ರಾಜಸ್ಥಾನ (80), ಗುಜರಾತ್ (76) ಮತ್ತು ದಿಲ್ಲಿ(51) ಮತ್ತಿತರ ಕಡೆಗಳಲ್ಲಿ ಕೂಡಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ ಒಂದು ವಾರದಲ್ಲಿ 500-600 ಪ್ರಮಾಣದಲ್ಲಿ ಈ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿತ್ತು.
ಮಹಾರಾಷ್ಟ್ರದಲ್ಲಿ ಒಟ್ಟು 1,364 ಪ್ರಕರಣಗಳು ದೃಢಪಟ್ಟಿದ್ದು, ತಮಿಳುನಾಡು (834), ದಿಲ್ಲಿ (720), ತೆಲಂಗಾಣ (471), ರಾಜಸ್ಥಾನ (463), ಉತ್ತರ ಪ್ರದೇಶ (424) ನಂತರದ ಸ್ಥಾನಗಳಲ್ಲಿವೆ. ಭಾರತದ ಇತರೆಡೆ ಒಟ್ಟು 2,462 ಪ್ರಕರಣಗಳು ದೃಢಪಟ್ಟಿದ್ದು, ಇದುವರೆಗೆ ಒಟ್ಟು 483 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಈ ಸಾಂಕ್ರಾಮಿಕದಿಂದ 233 ಮಂದಿ ಜೀವ ಕಳೆದುಕೊಂಡಿದ್ದು, ಸಾವಿನ ಸಂಖ್ಯೆಯಲ್ಲೂ ಮಹಾರಾಷ್ಟ್ರಕ್ಕೆ ಅಗ್ರಸ್ಥಾನ. ಮಹಾರಾಷ್ಟ್ರದಲ್ಲಿ 97 ಮಂದಿ ಬಲಿಯಾಗಿದ್ದರೆ, ದಿಲ್ಲಿ ಹಾಗೂ ತೆಲಂಗಾಣದಲ್ಲಿ ತಲಾ 12 ಮಂದಿ, ತಮಿಳುನಾಡು ಹಾಗೂ ರಾಜಸ್ಥಾನದಲ್ಲಿ ತಲಾ 8 ಮಂದಿ, ಉತ್ತರ ಪ್ರದೇಶದಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ರಾಜ್ಯಗಳ ಸಾವಿನ ಸಂಖ್ಯೆ 107.
ಗುರುವಾರ ದೇಶಾದ್ಯಂತ ಒಟ್ಟು 31 ಮಂದಿ ಸಾವಿಗೀಡಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಗರಿಷ್ಠ ಅಂದರೆ 15 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ದಿಲ್ಲಿಯ ರಾಮ ಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಅಪೋಲೊ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳ ಆತಂಕ ಮೂಡಿಸಿದೆ. ದೇಶದ 20% ಪ್ರಕರಣಗಳು ಒಂದೇ ರಾಜ್ಯದಲ್ಲಿ ಕಂಡುಬಂದಿವೆ. ಅಂತೆಯೇ ದೇಶದಲ್ಲಿ ಸಂಭವಿಸಿದ ಒಟ್ಟು ಸಾವಿನ ಪೈಕಿ ಈ ರಾಜ್ಯದ ಪಾಲು ಶೇಕಡ 40ರಷ್ಟು. ರಾಜ್ಯದಲ್ಲಿ ಸೋಂಕಿತರ ಪೈಕಿ ಸಾವಿನ ಪ್ರಮಾಣ 7.1% ಆಗಿದೆ.
ಗುಜರಾತ್‌ನಲ್ಲಿ 24 ಗಂಟೆಗಳಲ್ಲಿ 76 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದುವರೆಗೆ ವರದಿಯಾದ ಪ್ರಕರಣಗಳ ಶೇಕಡ 29ರಷ್ಟು ಪ್ರಕರಣಗಳು ಒಂದೇ ದಿನ ಬೆಳಕಿಗೆ ಬಂದಿದ್ದು, ಅಹ್ಮದಾಬಾದ್ ನಗರದಲ್ಲೇ 143 ಪ್ರಕರಣಗಳು ಕಾಣಿಸಿಕೊಂಡಿವೆ.
100 ದಿನಗಳ ಹಿಂದೆ ದೇಶದ ಮೊದಲ ಕೋವಿಡ್-19 ಸೋಂಕು ಪ್ರಕರಣ ಪತ್ತೆಯಾಗಿದ್ದ ಕೇರಳದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ. ಇದುವರೆಗೆ 357 ಪ್ರಕರಣಗಳು ಇಲ್ಲಿ ಪತ್ತೆಯಾಗಿದ್ದು, ಇಬ್ಬರು ಜೀವ ಕಳೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X