Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶೌರ್ಯ ಚಕ್ರ ಪುರಸ್ಕೃತ ಯೋಧನ ಅಂತಿಮ...

ಶೌರ್ಯ ಚಕ್ರ ಪುರಸ್ಕೃತ ಯೋಧನ ಅಂತಿಮ ಸಂಸ್ಕಾರಕ್ಕೆ ಬರಲು ಹೆತ್ತವರಿಗೆ ಸಿಗಲಿಲ್ಲ ಸೇನಾ ವಿಮಾನ !

ಕೇಂದ್ರದ ಕ್ರಮಕ್ಕೆ ವ್ಯಾಪಕ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ11 April 2020 8:24 PM IST
share
ಶೌರ್ಯ ಚಕ್ರ ಪುರಸ್ಕೃತ ಯೋಧನ ಅಂತಿಮ ಸಂಸ್ಕಾರಕ್ಕೆ ಬರಲು ಹೆತ್ತವರಿಗೆ ಸಿಗಲಿಲ್ಲ ಸೇನಾ ವಿಮಾನ !

ಹೊಸದಿಲ್ಲಿ, ಎ.11: ದೇಶದ ಮೂರನೇ ಅತ್ಯುನ್ನತ ಸೇನಾ ಪ್ರಶಸ್ತಿ ಶೌರ್ಯ ಚಕ್ರ ಪುರಸ್ಕೃತರಾಗಿದ್ದ 39 ವರ್ಷ ವಯಸ್ಸಿನ ಅಪ್ರತಿಮ ಯೋಧನ ಅಂತಿಮ ಸಂಸ್ಕಾರಕ್ಕೆ ತಲುಪಲು ಅವರ ಹೆತ್ತವರು 2,600 ಕಿ.ಮಿ.ರಸ್ತೆ ಮೂಲಕ ಪ್ರಯಾಣಿಸುವಂತೆ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಪ್ರತಿಷ್ಠಿತ 2 ಪ್ಯಾರಾ ಯುನಿಟ್ ನ ಕಮಾಂಡರ್ ಆಗಿದ್ದ ಕರ್ನಲ್ ಎನ್.ಎಸ್ ಬಾಲ್ ಅವರು ಅಪರೂಪದ ಕ್ಯಾನ್ಸರ್ ನಿಂದಾಗಿ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರ ಪತ್ನಿ, ಮತ್ತು ಮಗು ಬೆಂಗಳೂರಿನಲ್ಲೇ ಇದ್ದರೆ ತಂದೆ ತಾಯಿ ಅಮೃತ್ ಸರದಲ್ಲಿದ್ದರು. ಮೃತರ ಅಂತಿಮ ಸಂಸ್ಕಾರವನ್ನು ಬೆಂಗಳೂರಿನಲ್ಲೇ ನೆರವೇರಿಸಲು ಕುಟುಂಬ ನಿರ್ಧರಿಸಿತು. ಲಾಕ್ ಡೌನ್ ನಿಂದಾಗಿ ಬೇರೆ ವಿಮಾನಗಳು ಇಲ್ಲದೇ ಇರುವುದರಿಂದ ಬೆಂಗಳೂರಿಗೆ  ತಲುಪಲು ಸೇನಾ ವಿಮಾನ ಒದಗಿಸುವಂತೆ ಕುಟುಂಬ ಕೇಂದ್ರ ಸರಕಾರವನ್ನು ವಿನಂತಿಸಿತ್ತು. ನಿಯಮಗಳ ಪ್ರಕಾರ ಮೃತ ಯೋಧನ ಪಾರ್ಥಿವ ಶರೀರವನ್ನು ವಾಯುಪಡೆಯ ವಿಮಾನದಲ್ಲಿ ಆತನ ಊರಿಗೆ ತಲುಪಿಸಬಹುದು. ಆದರೆ ಆತನ ಮನೆಯವರಿಗೆ ಆ ಸೌಲಭ್ಯ ಕೊಟ್ಟಿರುವ ಪೂರ್ವ ನಿದರ್ಶನವಿಲ್ಲ. ಹಾಗಾಗಿ ಬಾಲ್ ಅವರ ಮನವಿಯನ್ನು ಪರಿಶೀಲಿಸಿದ ಕೇಂದ್ರ ಆ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಕೈಚೆಲ್ಲಿತು.

ಇದೀಗ ಬಾಲ್ ಅವರ ಹೆತ್ತವರು ಅಮೃತ್ ಸರದಿಂದ ವಾಹನದ ಮೂಲಕ ಹೊರಟಿದ್ದು 2600 ಕಿಮೀ ರಸ್ತೆ ಮೂಲಕ ಕ್ರಮಿಸಿ ಶನಿವಾರ ರಾತ್ರಿ ಬೆಂಗಳೂರು ತಲುಪಲಿದ್ದಾರೆ. 

ಕರ್ನಲ್ ಬಾಲ್ ಅವರು ಅಪ್ರತಿಮ ಯೋಧ ಮತ್ತು ಶ್ರೇಷ್ಠ ಸೇನಾ ನಾಯಕರಾಗಿದ್ದರು ಎಂದು ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ನಿವೃತ್ತ ಸೇನಾಧಿಕಾರಿಗಳು ಕೇಂದ್ರ ಸರಕಾರದ ಕ್ರಮವನ್ನು ಟೀಕಿಸಿದ್ದಾರೆ. " ನಿಯಮಗಳನ್ನು ಕಲ್ಲಿನ ಮೇಲೆ ಬರೆದಿರುವುದಿಲ್ಲ. ಅವುಗಳನ್ನು ಬದಲಾಯಿಸಬಹುದಿತ್ತು. ಭಾರತ ಸರಕಾರ ಸಹಾಯ ಮಾಡದೇ ಇರುವುದು ಬಹಳ ಬೇಸರ ತಂದಿದೆ ಎಂದು ನಿವೃತ್ತ ಸೇನಾ ಮುಖ್ಯಸ್ಥ ವೇದ್ ಪ್ರಕಾಶ್ ಮಲಿಕ್ ಅವರು ಟ್ವೀಟ್ ಮಾಡಿದ್ದಾರೆ. 

ತಮ್ಮ ನಿಧನದ ಒಂದು ದಿನ ಮೊದಲಷ್ಟೇ ಆಸ್ಪತ್ರೆಯ ಹಾಸಿಗೆಯಿಂದ ಕರ್ನಲ್ ಬಾಲ್ ಒಂದು ಸೆಲ್ಫಿ ಟ್ವೀಟ್ ಮಾಡಿದ್ದರು. ಚಿಕಿತ್ಸೆಗಾಗಿ ಅವರ ಬಲಗೈಯನ್ನು ಕತ್ತರಿಸಿರುವುದು ಅದರಲ್ಲಿ ಕಾಣುತ್ತಿತ್ತು. ಆದರೂ ಬಾಲ್ ಅವರು ಹಸನ್ಮುಖರಾಗಿರುವ ಆ ಚಿತ್ರ ಈಗ ಎಲ್ಲರನ್ನೂ ಕಾಡುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X