Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ ಎಪಿಎಂಸಿ ಪ್ರಾಂಗಣದಲ್ಲಿ...

ಕುಂದಾಪುರ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿಗೆ ಮುಗಿಬಿದ್ದ ಜನ : ಪೊಲೀಸರಿಂದ ಲಘು ಲಾಠಿ ಪ್ರಹಾರ

ವ್ಯಾಪಾರಸ್ಥರಿಗೆ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ11 April 2020 8:48 PM IST
share
ಕುಂದಾಪುರ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿಗೆ ಮುಗಿಬಿದ್ದ ಜನ : ಪೊಲೀಸರಿಂದ ಲಘು ಲಾಠಿ ಪ್ರಹಾರ

ಕುಂದಾಪುರ, ಎ.11: ಕೊರೋನ ನಿಯಂತ್ರಣಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಂದಾಪುರದ ಶನಿವಾರದ ಸಂತೆ ಬದಲು ಎಪಿಎಂಸಿ ಪ್ರಾಂಗಣದಲ್ಲಿ ಸ್ಥಳೀಯ ಸಣ್ಣ ರಖಂ ವ್ಯಾಪಾರಿಗಳಿಗೆ ಮಾತ್ರ ಖರೀದಿಸಲು ಅವಕಾಶ ಮಾಡಿಕೊಡಲಾದ ಮಾರುಕಟ್ಟೆಗೆ ಇಂದು ಬೆಳಗ್ಗೆ ಜನ ಮುಗಿ ಬಿದ್ದ ಘಟನೆ ನಡೆಯಿತು.

ಕೊರೋನ ಭೀತಿಯಿಂದ ಇಲ್ಲಿನ ವಾರದ ಸಂತೆಯನ್ನು ಮೂರು ವಾರಗಳ ಹಿಂದೆಯೇ ಬಂದ್ ಮಾಡಲಾಗಿತ್ತು. ಅದರ ಬದಲು ಸ್ಥಳೀಯ ಸಣ್ಣ ವ್ಯಾಪಾರಿ ಗಳಿಗೆ ಹಣ್ಣು, ತರಕಾರಿ, ಇನ್ನಿತರ ಅಗತ್ಯ ವಸ್ತುಗಳನ್ನು ರಖಂ ದರದಲ್ಲಿ ಮಾತ್ರ ಖರೀದಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂತೆಯ ಗೇಟು ತೆರೆಯುತ್ತಿದ್ದಂತೆ ವ್ಯಾಪಾರಿಗಳು ಮಾತ್ರವಲ್ಲದೆ ಸುತ್ತಮುತ್ತಲಿನ ಪರಿಸರದ ಸಾಕಷ್ಟು ಮಂದಿ ಕೂಡ ಪ್ರಾಂಗಣದೊಳಗೆ ಆಗಮಿಸಿ ತರಕಾರಿಗಳನ್ನು ಖರೀದಿಸಿದರು.

ಹೊರ ಜಿಲ್ಲೆಗಳಿಂದ ಆಗಮಿಸಿದ ಹಣ್ಣು- ತರಕಾರಿ, ಇತರೆ ಸಾಮಾಗ್ರಿಗಳ ವಾಹನಗಳಿಗೆ ಪ್ರಾಂಗಣದೊಳಗೆ ಹೋಗಲು ಅವಕಾಶ ಕಲ್ಪಿಸಲಾಯಿತು. ಇದನ್ನು ಗಮನಿಸಿದ ಸ್ಥಳೀಯರು ಸಂತೆ ನಡೆಯಲಿದೆ ಎಂದು ಭಾವಿಸಿ ಪ್ರಾಂಗಣ ದೊಳಗೆ ನುಗ್ಗಿದರು. ನಂತರ ಗೇಟು ಬಂದ್ ಮಾಡಿ, ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಯಿತು.

ಆದರೂ ಕೆಲವರು ವ್ಯಾಪಾರಿಗಳ ಸೋಗಿನಲ್ಲಿ, ಇನ್ನು ಕೆಲವರು ಬೇಲಿ ಹಾರಿ ಕೊಂಡು ಮತ್ತು ಕೆಲವರು ಒಳ ದಾರಿಗಳಿಂದ ಸಂತೆಯೊಳಗೆ ಬರುತ್ತಿರುವುದು ಕಂಡು ಬಂತು. ಅಲ್ಲದೆ ಕೆಲವರು ಎಪಿಎಂಸಿ ಕಂಪೌಂಡ್ ಒಳಗಿರುವ ವ್ಯಾಪಾರಸ್ಥರಿಗೆ ಚೀಟಿ ಕೊಟ್ಟು, ಹೊರಗೆ ನಿಂತು ಸಾಮಾನುಗಳನ್ನು ಖರೀದಿಸಿ ದರು. ಸ್ಥಳದಲ್ಲಿದ್ದ ಎಪಿಎಂಸಿ ಕಾರ್ಯದರ್ಶಿ ದೀಪ್ತಿ ಎಸ್. ಜನರ್ನು ನಿಯಂತ್ರಿಸಲು ಪ್ರಯತ್ನಿಸಿದರು.

ಸುದ್ದಿ ತಿಳಿದ ತತ್‌ಕ್ಷಣ ಸಂತೆ ಮಾರುಕಟ್ಟೆಗೆ ಆಗಮಿಸಿದ ಕುಂದಾಪುರ ಠಾಣಾ ಧಿಕಾರಿ ಹರೀಶ್ ಆರ್. ನೇತೃತ್ವದ ಪೊಲೀಸರು, ಜನರಿಗೆ ಸಂತೆಯಲ್ಲಿ ಜನ ಸೇರುವಂತಿಲ್ಲ ಎಂದು ಮನದಟ್ಟು ಮಾಡುವ ಕೆಲಸ ಮಾಡಿದರು. ಆದರೂ ಜನ ಬರುವುದು ನಿಲ್ಲದಿದ್ದಾಗ ಪೊಲೀಸರು ಗುಂಪು ಕೂಡಿ ತರಕಾರಿ ಖರೀದಿ ಸುತ್ತಿದ್ದ ಜನರನ್ನು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ಕುಂದಾಪುರದ ಸಹಾಯಕ ಆಯುಕ್ತ ಕೆ.ರಾಜು. ಈ ಬಗ್ಗೆ ಪರಿಶೀಲನೆ ನಡೆಸಿದರು. 10ಕೆ.ಜಿ.ಗಿಂತ ಕಡಿಮೆ ಪ್ರಮಾಣದಲ್ಲಿ ತರಕಾರಿಗಳನ್ನು ಖರೀದಿಸುವ ವ್ಯಾಪಾರಿಗಳಿಗೆ ಯಾವುದನ್ನು ಕೂಡ ಮಾರಾಟ ಮಾಡಬಾರದೆಂದು ಪ್ರಾಂಗಣದ ವ್ಯಾಪಾರಸ್ಥರಿಗೆ ಎಸಿ ಸೂಚನೆ ನೀಡಿದರು. ಲಾಕ್‌ಡೌನ್ ಮಧ್ಯೆ ಸಂತೆಗೆ ಆಗಮಿಸುತ್ತಿದ್ದ ಜನರಿಗೂ ಅವರು ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X