Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಹಾರ ಪ್ಯಾಕೇಜ್ ನೀಡದಿದ್ದರೆ 1.5 ಕೋಟಿ...

ಪರಿಹಾರ ಪ್ಯಾಕೇಜ್ ನೀಡದಿದ್ದರೆ 1.5 ಕೋಟಿ ಉದ್ಯೋಗ ನಷ್ಟ: ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ ಎಚ್ಚರಿಕೆ

ಕೊರೋನ ಲಾಕ್ ಡೌನ್

ವಾರ್ತಾಭಾರತಿವಾರ್ತಾಭಾರತಿ12 April 2020 4:28 PM IST
share
ಪರಿಹಾರ ಪ್ಯಾಕೇಜ್ ನೀಡದಿದ್ದರೆ 1.5 ಕೋಟಿ ಉದ್ಯೋಗ ನಷ್ಟ: ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ ಎಚ್ಚರಿಕೆ

ಹೊಸದಿಲ್ಲಿ, ಎ.12: ರಫ್ತು ಕ್ಷೇತ್ರಕ್ಕೆ ಪರಿಹಾರ ಪ್ಯಾಕೇಜ್‌ ನ್ನೊದಗಿಸಲು ಸರಕಾರವು ತ್ವರಿತ ಕ್ರಮವನ್ನು ತೆಗೆದುಕೊಳ್ಳದಿದ್ದರೆ ಕೊರೋನ ವೈರಸ್ ಸಾಂಕ್ರಾಮಿಕ ಪಿಡುಗಿನಿಂದ 1.5 ಕೋಟಿ ಉದ್ಯೋಗಗಳು ನಷ್ಟವಾಗಲಿವೆ ಎಂದು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (ಎಫ್‌ಐಇಒ)ವು ಎಚ್ಚರಿಕೆಯನ್ನು ನೀಡಿದೆ.

2020ನೇ ಸಾಲಿನಲ್ಲಿ ಜಾಗತಿಕ ವ್ಯಾಪಾರದ ಬಗ್ಗೆ ವಿಶ್ವ ವಾಣಿಜ್ಯ ಸಂಘಟನೆ (ಡಬ್ಲ್ಯುಟಿಒ)ಯ ನಿರಾಶಾದಾಯಕ ಮುನ್ನೋಟ ಮತ್ತು ಕೊರೋನ ವೈರಸ್‌ನಿಂದಾಗಿ ಭಾರತದ ಆರ್ಥಿಕತೆಯು ಇನ್ನಷ್ಟು ಬಡತನದ ಕೂಪಕ್ಕೆ ತಳ್ಳಲ್ಪಡುವ ಅಪಾಯವಿದೆ ಎಂಬ ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್‌ಒ)ಯ ಎಚ್ಚರಿಕೆಯನ್ನು ಎಫ್‌ಐಇಒ ಅಧ್ಯಕ್ಷ ಶರದ ಕುಮಾರ ಸರಾಫ್ ಉಲ್ಲೇಖಿಸಿದರು. ಬದುಕು ಮತ್ತು ಜೀವನೋಪಾಯ ಇವುಗಳ ಪೈಕಿ ಯಾವುದೇ ಒಂದಕ್ಕೆ ಹೆಚ್ಚು ಆದ್ಯತೆ ನೀಡಿದರೂ ಅದು ದೇಶಕ್ಕೆ ವಿನಾಶಕಾರಿಯಾಗುವುದರಿಂದ ಇವೆರಡರ ನಡುವೆ ಸಮತೋಲನವನ್ನು ಸಾಧಿಸುವ ಅಗತ್ಯವಿದೆ ಎಂದು ಹೇಳಿದರು.

ಲಾಕ್‌ ಡೌನ್ ಅವಧಿಯಲ್ಲಿಯೂ ಸಾಕಷ್ಟು ಸುರಕ್ಷಾ ನಿಯಮಗಳ ಪಾಲನೆಗೊಳಪಟ್ಟು ಕನಿಷ್ಠ ಸಿಬ್ಬಂದಿಗಳೊಡನೆ ತಯಾರಿಕೆಯನ್ನು ಆರಂಭಿಸಲು ರಫ್ತುದಾರರಿಗೆ ಅವಕಾಶ ನೀಡಬೇಕು ಎಂದು ಹೇಳಿದ ಅವರು, ವೇತನ, ಬಾಡಿಗೆ ಇತ್ಯಾದಿ ವೆಚ್ಚಗಳನ್ನು ಭರಿಸಲು ಸರಕಾರವು ಬಡ್ಡಿರಹಿತ ದುಡಿಯುವ ಬಂಡವಾಳ ಸಾಲಗಳನ್ನು ನೀಡಬೇಕು ಮತ್ತು ಮಾರ್ಚ್‌ನಿಂದ ಆರಂಭಿಸಿ ಕನಿಷ್ಠ ಮೂರು ತಿಂಗಳುಗಳ ಅವಧಿಗೆ ಇಪಿಎಫ್ ಮತ್ತು ಇಎಸ್‌ಐಸಿ ಪಾವತಿಗಳಿಂದ ಅವುಗಳಿಗೆ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.

ರಫ್ತುದಾರರ ಬಳಿ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಬೇಡಿಕೆಗಳಿವೆ ಮತ್ತು ಬೇಡಿಕೆಗಳನ್ನು ಸಕಾಲದಲ್ಲಿ ಪೂರೈಸಲು ಕನಿಷ್ಠ ಸಿಬ್ಬಂದಿಯೊಡನೆ ಫ್ಯಾಕ್ಟರಿಗಳ ಪುನರಾರಂಭಕ್ಕೆ ಅವಕಾಶ ನೀಡಬೇಕು, ಇಲ್ಲದಿದ್ದರೆ ನಿಗದಿತವಾದ ಅನಿವಾರ್ಯ ವೆಚ್ಚಗಳ ಹೊರೆಯಡಿ ಸಿಲುಕಿರುವ ಅವುಗಳ ಪೈಕಿ ಹೆಚ್ಚಿನವು ದಿವಾಳಿಯ ಅಂಚಿಗೆ ತಳ್ಳಲ್ಪಡುತ್ತವೆ. ಅವುಗಳು ಪಡೆದಿರುವ ಭಾರೀ ಸಾಲಗಳ ಪಾವತಿ ಸಾಧ್ಯವಾಗದೆ ಬ್ಯಾಂಕುಗಳ ಕೆಟ್ಟ ಸಾಲಗಳೂ ಏರಿಕೆಯಾಗುತ್ತವೆ ಎಂದು ಸರಾಫ್ ಹೇಳಿದರು.

ರಫ್ತು ಘಟಕಗಳು ಆರಂಭದಲ್ಲಿ ಅರ್ಧದಷ್ಟು ಸಿಬ್ಬಂದಿಯೊಂದಿಗೆ ಕಾರ್ಯಾಚರಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸುವಂತೆ ವಾಣಿಜ್ಯ ಸಚಿವಾಲಯವು ಗೃಹ ಸಚಿವಾಲಯಕ್ಕೆ ಸೂಚಿಸಿದೆ ಎನ್ನಲಾಗಿದೆ. ಅಲ್ಲದೆ ಅದು ಇತ್ತೀಚಿಗೆ 2015-20ರ ಅವಧಿಗಾಗಿನ ವಿದೇಶ ವ್ಯಾಪಾರ ನೀತಿ (ಎಫ್‌ಟಿಪಿ)ಯ ಸಿಂಧುತ್ವವನ್ನು 2021,ಮಾರ್ಚ್‌ವರೆಗೆ ವಿಸ್ತರಿಸಿದೆ ಮತ್ತು ಇತರ ಕೆಲವು ನಿರ್ಬಂಧಗಳನ್ನು ಸಡಿಲಿಸಿದೆ. ಎಫ್‌ಟಿಪಿ ವಿಸ್ತರಣೆಯಿಂದ ರಫ್ತುದಾರರು ಹಾಲಿ ಯೋಜನೆಗಳಡಿ ಉತ್ತೇಜನಗಳನ್ನು ಪಡೆಯುವುದನ್ನು ಮುಂದುವರಿಸಲು ಸಾಧ್ಯವಾಗುತ್ತದೆ. ಆದರೆ ಸೇವೆಗಳ ರಫ್ತು ಉತ್ತೇಜನ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಸರಕಾರವಿನ್ನೂ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X