Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೃಷಿ ಉತ್ಪನ್ನಗಳ ಸಾಗಾಣಿಕೆಗೆ...

ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಚೆಕ್‌ಪೋಸ್ಟ್‌ಗಳಲ್ಲಿ ತಡೆ ಬೇಡ:ಉಡುಪಿ ಡಿಸಿಗೆ ಜಿಲ್ಲಾ ಕೃಷಿಕ ಸಂಘ ಮನವಿ

ವಾರ್ತಾಭಾರತಿವಾರ್ತಾಭಾರತಿ12 April 2020 8:57 PM IST
share

ಉಡುಪಿ, ಎ.12: ಜಿಲ್ಲೆಗೆ ಅಗತ್ಯವಿರುವ ಹಲವು ಆಹಾರ, ದವಸಧಾನ್ಯಗಳ ಸಹಿತ ಬಾಳೆಹಣ್ಣು, ತರಕಾರಿಗಳು ಶಿವಮೊಗ್ಗ, ಶೃಂಗೇರಿ, ಕೊಪ್ಪ ಹಾಗೂ ಚಿಕ್ಕ ಮಗಳೂರು ಪ್ರದೇಶಗಿಂದ ಬರುತ್ತಿವೆ. ಇವುಗಳು ಹುಲಿಕಲ್ ಘಾಟಿ, ಆಗುಂಬೆ, ಕುದುರೆಮುಖ, ಮಾಳ ಚೆಕ್‌ಪೋಸ್ಟ್ ಮೂಲಕ ಜಿಲ್ಲೆಯನ್ನು ಪ್ರವೇಶಿಸುತ್ತವೆ. ಇದೀಗ ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಇವುಗಳ ಸಂಚಾರಕ್ಕೆ ಈಗಲೂ ತೊಂದರೆಯಾಗುತ್ತಿದೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘ ಹೇಳಿದೆ.

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪತ್ರವೊಂದನ್ನು ಬರೆದಿರುವ ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ಲಾಕ್‌ಡೌನ್‌ ನಿಂದಾಗಿ ಜಿಲ್ಲೆ ಯ ಕೃಷಿಕರಿಗೆ ಉಂಟಾಗಿರುವ ಸಮಸ್ಯೆಗಳು, ಅದರಿಂದ ಮುಂದಾಗಬಹುದಾದ ಆಹಾರ ಸಾಮಾಗ್ರಿಗಳ ಕೊರತೆ- ಸಮಸ್ಯೆಗಳ ಬಗ್ಗೆ ಆರಂಭದಲ್ಲೇ ನಾವು ತಮ್ಮ ಗಮನಕ್ಕೆ ತಂದಾಗ, ತಕ್ಷಣವೇ ಸ್ಪಂದಿಸಿರುವುದಕ್ಕೆ ಜಿಲ್ಲೆಯ ಕೃಷಿಕರ ಪರವಾಗಿ ಧನ್ಯವಾದಗಳನ್ನು ಸಲ್ಲಿಸು ತ್ತೇವೆ ಎಂದವರು ಹೇಳಿದ್ದಾರೆ.

ಆದರೆ ಈಗಲೂ ಈ ಆಹಾರ ವಸ್ತುಗಳನ್ನು ಸಾಗಿಸುವಾಗ ಚೆಕ್ ಪೋಸ್ಟ್‌ಗಳಲ್ಲಿ ತೋಟಗಾರಿಕೆ, ಕೃಷಿ ಇಲಾಖೆ ಅಥವಾ ಎಪಿಎಂಸಿಯ ಪಾಸ್ ತೋರಿಸಿದರೆ ಸಾಲುವುದಿಲ್ಲ. ಪೊಲೀಸ್ ಇಲಾಖೆ ಅನುಮತಿ ಪತ್ರ ಕೇಳುತ್ತ ಈಗಲೂ ತಡೆ ಒಡ್ಡುತ್ತಿದ್ದಾರೆಂಬ ಮಾಹಿತಿಗಳಿವೆ. ಹೀಗೆ ಚೆಕ್‌ಪೋಸ್ಟ್‌ ಗಳಲ್ಲಿ ಸಾಗಾಟ ವಾಹನ ಗಳು ದಿನಗಟ್ಟಲೆ ನಿಲುಗಡೆಯಾದರೆ ದವಸ-ಧಾನ್ಯಗಳಿಗೆ ಸಮಸ್ಯೆಯಾಗ ದಿದ್ದರೂ, ತರಕಾರಿ, ಬಾಳೆಹಣ್ಣುಗಳು ಒಂದೆರಡು ದಿನಗಳಲ್ಲೆ ಹಣ್ಣಾಗಿ ಕೊಳೆತು ಹೋಗುತ್ತವೆ. ಇದು ಅತ್ತ ಕೃಷಿಕರಿಗೆ ನಷ್ಟ ಉಂಟುಮಾಡಿದರೆ, ಇತ್ತ ಆಹಾರ ವಸ್ತುಗಳ ಕೊರತೆ, ಜನರ ನೂಕು ನುಗ್ಗಾಟ, ಬೆಲೆ ಏರಿಕೆ ಸಮಸ್ಯೆಯನ್ನು ಹೆಚ್ಚಿಸುತ್ತದೆ ಎಂದವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಆದ್ದರಿಂದ ನಿರ್ದಿಷ್ಟ ಬೆಳೆಗಳು, ತರಕಾರಿ, ಹಣ್ಣು ಹಂಪಲುಗಳನ್ನು ನಮೂದಿಸಿ ಅವುಗಳ ಸಾಗಾಟಕ್ಕಾಗಿ ಕೃಷಿ ಸಂಬಂಧಿ ಯಾವುದೇ ಒಂದು ಇಲಾಖೆ -ಕೃಷಿ ಇಲಾಖೆ/ ತೋಟಗಾರಿಕಾ ಇಲಾಖೆ/ಎಪಿಎಂಸಿ- ನೀಡಿರುವ ಕೃಷಿ ಉತ್ಪನ್ನಗಳ ಪಾಸ್ ಚೆಕ್‌ಪೋಸ್ಟ್‌ಗಳಲ್ಲಿ ಮಾನ್ಯವಾಗುವ ರೀತಿ ಕ್ರಮ ಕೈಗೊಳ್ಳುವಂತೆ ವಿನಂತಿಸಿಕೊಳ್ಳುತ್ತೇವೆ ಎಂದವರು ಹೇಳಿದ್ದಾರೆ.

ಈ ಮಧ್ಯೆ ಪಾಸುಗಳ ದುರುಪಯೋಗ, ಕೊರೋನ ಬಗ್ಗೆ ಜಿಲ್ಲಾಡಳಿತ/ಸರಕಾರ ರೂಪಿಸಿರುವ ನಿಯಮ ನಡಾವಳಿಗಳ ಉಲ್ಲಂಘನೆಯಾದಲ್ಲಿ ಮಾತ್ರ ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಮಾಹಿತಿ/ಆದೇಶ ಚೆಕ್‌ಪೋಸ್ಟ್ ಸಿಬ್ಬಂದಿಗಳಿಗೆ ನೀಡುವಂತೆ ರವೀಂದ್ರ ಗುಜ್ಜರಬೆಟ್ಟು ಜಿಲ್ಲಾಧಿಕಾರಿಳಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X