Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಬಳಿಕ ಜಾರ್ಖಂಡ್‌ನಲ್ಲಿ...

ಲಾಕ್‌ಡೌನ್ ಬಳಿಕ ಜಾರ್ಖಂಡ್‌ನಲ್ಲಿ ಹಸಿವೆಗೆ 3 ಬಲಿ: ಆರೋಪ

ಕುಟುಂಬಿಕರ ಆರೋಪ ನಿರಾಕರಿಸಿದ ರಾಜ್ಯ ಸರಕಾರ

ವಾರ್ತಾಭಾರತಿವಾರ್ತಾಭಾರತಿ12 April 2020 10:09 PM IST
share
ಲಾಕ್‌ಡೌನ್ ಬಳಿಕ ಜಾರ್ಖಂಡ್‌ನಲ್ಲಿ ಹಸಿವೆಗೆ 3 ಬಲಿ: ಆರೋಪ

ಹೊಸದಿಲ್ಲಿ, ಎ.12: ಜಾರ್ಖಂಡ್‌ನ ಗರ್ವಾ ಜಿಲ್ಲೆಯ 32 ವರ್ಷದ ಮಹಿಳೆ ಚಂದ್ರಾವತಿ ದೇವಿ ಹಾಗೂ ಆಕೆಯ ಕುಟುಂಬದ 8 ಮಂದಿ, ಕಳೆದ ಮೂರು ದಿನಗಳಿಂದ ಬರಿಹೊಟ್ಟೆಯಲ್ಲಿಯೇ ದಿನಕಳೆಯುತ್ತಿದ್ದಾರೆ. ಕೊರೋನ ವೈರಸ್ ಹಾವಳಿ ತಡೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ ಬಳಿಕ ಈ ಕುಟುಂಬವು ಹಸಿವಿನಿಂದ ನರಳುತ್ತಿದೆ. ಒಂದು ವೇಳೆ ತನಗೆ ಇನ್ನೂ ಆಹಾರ ಸಿಗದೆ ಹೋದಲ್ಲಿ ತಾನು ಹಾಗೂ ತನ್ನ ಕುಟುಂಬ ಹಸಿವಿನಿಂದ ಸಾಯುವುದಂತೂ ಖಂಡಿತ ಎಂಬ ಭಯ ಆಕೆಯನ್ನು ಕಾಡುತ್ತಿದೆ.

ಚಂದ್ರಾವತಿಯ ಕುಟುಂಬ ಮಾತ್ರವಲ್ಲ ಜಾರ್ಖಂಡ್‌ನ ಅನೇಕ ದಿನಗೂಲಿ ಕಾರ್ಮಿಕ ಕುಟುಂಬಗಳು ಕೂಡಾ ಲಾಕ್‌ಡೌನ್ ನಂತಹ ಹೊಟ್ಟೆಗೆ ಹಿಟ್ಟಿಲ್ಲದೆ ಯಾತನೆ ಪಡುತ್ತಿವೆ.

ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾದಾಗಿನಿಂದ ಜಾರ್ಖಂಡ್‌ನಲ್ಲಿ ಮೂವರು ಹಸಿವಿನಿಂದ ಸಾವನ್ನಪ್ಪಿದ್ದಾರೆಂದು ಅವರ ಕುಟುಂಬಿಕರು ಆಪಾದಿಸಿದ್ದಾರೆ. ಆದರೆ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಅವನ್ನು ಹಸಿವಿನಿಂದ ಸಂಭವಿಸಿದ ಸಾವುಗಳೆಂದು ಒಪ್ಪಲು ನಿರಾಕರಿಸಿವೆ.

ರಾಷ್ಟ್ರೀಯ ಸುದ್ದಿವಾಹಿನಿಯೊಂದು ಈ ಮೂರು ಕುಟುಂಬಗಳನ್ನು ಸಂದರ್ಶಿಸಿತ್ತು. ಮಾರ್ಚ್ 24ರ ಲಾಕ್‌ಡೌನ್ ಬಳಿಕ ಕೇವಲ ಈ ಕುಟುಂಬಗಳು ಮಾತ್ರವಲ್ಲದೆ ಜಾರ್ಖಂಡ್‌ನ ಹಲವಾರು ಮಂದಿ ಕಡುಬಡತನದಲ್ಲಿ ಸಿಲುಕಿರುವುದನ್ನು, ಪಡಿತರ ಆಹಾರವಿಲ್ಲದೆ ಮತ್ತು ಆದಾಯವಿಲ್ಲದೆ ಕಂಗಾಲಾಗಿರುವುದನ್ನು ಪತ್ತೆಹಚ್ಚಿತ್ತು.

ಜಾರ್ಖಂಡ್‌ ನಲ್ಲಿ ದುರ್ಬಲವರ್ಗಗಳು ಅದರಲ್ಲೂ ವಿಷಯವಾಗಿ ದುರ್ಬಲ ಬುಡಕಟ್ಟು ಸಮುದಾಯಗಳು ಅಧಿಕ ಸಂಖ್ಯೆಯಲ್ಲಿರುವ 50 ತಹಶೀಲುಗಳ ಪೈಕಿ 15 ತಹಶೀಲುಗಳು, ಹಸಿವು ಹಾಗೂ ಆಹಾರ ಕೊರತೆಯ ಸಮಸ್ಯೆಗಳನ್ನು ಎದುರಿಸುತ್ತಿವೆ. 50 ಬ್ಲಾಕ್‌ಗಳ ಪೈಕಿ 21ರಲ್ಲಿ ಹಲವು ಪಡಿತರ ಚೀಟಿದಾರರು ತಮ್ಮ ಎಪ್ರಿಲ್ ತಿಂಗಳ ಪಡಿತರಕ್ಕಾಗಿ ಕಾದು ಕುಳಿತಿದ್ದಾರೆ. ಕನಿಷ್ಠ ನಾಲ್ಕು ಬ್ಲಾಕ್‌ಗಳಲ್ಲಿ ಮಾರ್ಚ್ ತಿಂಗಳ ಪಡಿತರ ಇನ್ನಷ್ಟೇ ಬಿಡುಗಡೆಗೊಳ್ಳಬೇಕಿದೆ.

ಪಡಿತರ ವಿತರಿಸುವ ಪ್ರದೇಶಗಳಲ್ಲಿ ಜನರ ಪಡಿತರದಲ್ಲಿ ಡೀಲರ್‌ಗಳು ಪಾಲು ಪಡೆಯುವುದನ್ನು ಕೂಡಾ ಸುದ್ದಿವಾಹಿನಿ ತಂಡವು ಪತ್ತೆಹಚ್ಚಿದೆ. ಪಡಿತರ ಚೀಟಿದಾರರಿಗೆ ಅವರು ಲಭಿಸುವುದಕ್ಕಿಂತ ಕಡಿಮೆ ಪ್ರಮಾಣದಲ್ಲಿ ವ್ಯಾಪಾರಿಗಳು ಪಡಿತರವನ್ನು ವಿತರಿಸುತ್ತಿದ್ದು, ಉಳಿದ ಪ್ರಮಾಣವನ್ನು ತಮ್ಮ ಕೈಯಲ್ಲೇ ಇಟ್ಟುಕೊಳ್ಳುವ ಪ್ರವೃತ್ತಿ ಜಾರ್ಖಂಡ್‌ನ ಬುಡಕಟ್ಟು ಪ್ರದೇಶಗಳಲ್ಲಿ ವ್ಯಾಪಕವಾಗಿದೆ ಎಂದು ಸುದ್ದಿವಾಹಿನಿ ತಿಳಿಸಿದೆ.

ಬೊಕಾರೊ ಜಿಲ್ಲೆಯಲ್ಲಿ 17 ವರ್ಷದ ಅಂಗವಿಕಲ ಬಾಲಕಿ ಹಸಿವಿನಿಂದ ಸಾವನ್ನಪ್ಪಿದ್ದಾಗಿ ಆಕೆಯ ಹೆತ್ತವರು ಹೇಳಿದ್ದಾರೆ. ಆದರೆ ಜಿಲ್ಲಾಡಳಿತ ಅದನ್ನು ಅಲ್ಲಗಳೆದಿತ್ತು. ಸ್ಥಳಕ್ಕೆ ಭೇಟಿ ನೀಡಿದ ಸಾಮಾಜಿಕ ಕಾರ್ಯಕರ್ತರು, ಈ ಕುಟುಂಬವು ಕಡುಬಡತನದಿಂದ ನರಳುತ್ತಿದ್ದುದಾಗಿ ಹೇಳಿದ್ದಾರೆ. ಈ ಕುಟುಂಬದ ಬಳಿಕ ಪಡಿತರ ಚೀಟಿ ಇರಲಿಲ್ಲ ಮತ್ತು ಆಕೆಯ ತಂದೆ ಜೀತನ್ ತಿಂಗಳಿಗ ಕೇವಲ 500 ರೂ. ಸಂಪಾದಿಸುತ್ತಿದ್ದನು. ಲಾಕ್‌ಡೌನ್ ಆನಂತರವಂತೂ ಆತನಿಗೆ ಕೆಲಸವೇ ದೊರೆತಿರಲಿಲ್ಲವೆಂದು, ಆದಿವಾಸಿ ಮೂಲವಾಸಿ ಮಂಚ್‌ನ ಸದಸ್ಯ, ಟೀಕಾವಾಡಿ ಗ್ರಾಮದ ನಿವಾಸಿ ಅನಿಲ್ ಹಾನ್ಸ್‌ಡಾ ಹೇಳುತ್ತಾರೆ.

ಜಾರ್ಖಂಡ್‌ನ ರಾಮ್‌ಘರ್ ಜಿಲ್ಲೆಯ ಸಂಗ್ರಾಮ್‌ಪುರ ಗ್ರಾಮದಲ್ಲಿ 72 ವರ್ಷ ವಯಸ್ಸಿನ ಉಪಾಸಿ ದೇವಿ ಕೊನೆಯುಸಿರೆಳೆದಿದ್ದಾರೆ ಉಪಾಸಿ ದೇವಿ ಹಸಿವಿನಿಂದ ಮೃತಪಟ್ಟಿದ್ದಾಗಿ ಆಕೆಯ ಕುಟುಂಬಿಕರು ಆಪಾದಿಸಿದ್ದಾರೆ. ಆಕೆಯ ಪುತ್ರ 48 ವರ್ಷದ ಪುತ್ರ ಜಗನ್ ನಾಯಕ್ ಕಳೆದ ಕೆಲವು ದಿನಗಳಿಂದ ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಆದರೆ ಕಳೆದ ತಿಂಗಳು ಲಾಕ್‌ಡೌನ್ ಆರಂಭಗೊಂಡ ಬಳಿಕ ಆತನಿಗೆ ಸಂಪಾದನೆ ಇರಲಿಲ್ಲ.

ಹಸಿವಿನಿಂದಲೇ ತನ್ನ ತಾಯಿ ಮೃತಪಟ್ಚಿದ್ದಾರೆಂದು ಜಗನ್ ನಾಯಕ್ ಹೇಳಿದ್ದರೂ ರಾಮ್‌ಘರ್‌ನ ಬಿಡಿಓ ಹಾಗೂ ಸ್ಥಳೀಯ ಶಾಸಕಿ ಮಮತಾ ದೇವಿ ಅದನ್ನು ಅಲ್ಲಗಳೆದಿದ್ದಾರೆ.

ಆದರೆ ಜಾರ್ಖಂಡ್‌ನಲ್ಲಿ ಹಸಿವಿನಿಂದ ಸಾವು ಸಂಭವಿಸಿರುವುದನ್ನು ರಾಜ್ಯ ಸರಕಾರ ತಳ್ಳಿಹಾಕಿರುವುದು ಇದು ಮೊದಲೇನಲ್ಲ. ಹೇಮಂತ ಸೊರೇನ್ ನೇತೃತ್ವದ ಜಾರ್ಖಂಡ್ ಮುಕ್ತಿ ಮೋರ್ಚಾ- ಕಾಂಗ್ರೆಸ್ ಸರಕರವು ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಹಸಿವಿನಿಂದ ಸಾವು ಸಂಭವಿಸಿರುವುದನ್ನು ನಿರಾಕರಿಸುತ್ತಲೇ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X