Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುರ್ತು ಸೇವೆಗೆ ಮಂಗಳೂರು ವಿಮಾನ ನಿಲ್ದಾಣ...

ತುರ್ತು ಸೇವೆಗೆ ಮಂಗಳೂರು ವಿಮಾನ ನಿಲ್ದಾಣ ಸದಾ ಸಿದ್ಧ : ಜೈಶಂಕರ್

ಕೊರೋನ ವೈರಸ್ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ12 April 2020 10:24 PM IST
share

ಮಂಗಳೂರು, ಎ.12: ಕೊರೋನ ನಿಗ್ರಹದ ನಿಟ್ಟಿನಲ್ಲಿ ದೇಶದ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೂ ವಿಮಾನ ಸಂಚಾರ ಬಂದ್ ಆಗಿದೆ. ಆದರೂ, ತುರ್ತು ಸಂದರ್ಭದಲ್ಲಿ ಯಾವುದೇ ವಿಮಾನ, ಹೆಲಿಕಾಪ್ಟರ್ ಬರುವುದಿದ್ದರೂ ಏರ್‌ಪೋರ್ಟ್‌ನ ಅನುಮತಿ ಪಡೆದು ಲ್ಯಾಂಡ್ ಆಗಲು ಬೇಕಾದ ವ್ಯವಸ್ಥೆ ಸದ್ಯ ಜಾರಿಯಲ್ಲಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸದ್ಯ ಬೆರಳೆಣಿಕೆ ಸಿಬ್ಬಂದಿ ವರ್ಗ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಅನಿವಾರ್ಯ ಸಂದರ್ಭದಲ್ಲಿ ಯಾವುದೇ ವಿಮಾನ, ಹೆಲಿಕಾಪ್ಟರ್‌ಗಳು ಆಗಮಿಸುವುದಾದರೆ ಅದಕ್ಕೆ ಈ ಸಿಬ್ಬಂದಿ ವರ್ಗವು ಕರ್ತವ್ಯ ನಿರ್ವಹಿಸಲು ಸಿದ್ಧವಾಗಿದೆ. ದಿನದ 24 ಗಂಟೆಗೆ ಸದಾ ಸನ್ನದ್ಧ ಸ್ಥಿತಿಯಲ್ಲಿರುವ ಏರ್‌ಪೋರ್ಟ್‌ನ ಎಟಿಸಿ (ಏರ್ ಟ್ರಾಫಿಕ್ ಕಂಟ್ರೋಲ್) ಸದ್ಯ ಲಾಕ್‌ಡೌನ್ ಮಧ್ಯೆಯೂ ಮಧ್ಯಾಹ್ನದವರೆಗೆ ಕಾರ್ಯಾಚರಣೆಯಲ್ಲಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಕಾರ್ಯನಡೆಸುತ್ತಿದ್ದು, ತುರ್ತಾಗಿ ವಿಮಾನ ಲ್ಯಾಂಡ್ ಆಗಬೇಕಿದ್ದರೆ ಈ ವೇಳೆಯಲ್ಲಿ ಬರಬಹುದು. ಅದಕ್ಕೂ 1 ತಾಸು ಮುನ್ನ ವಿಮಾನ ನಿಲ್ದಾಣದ ಅನುಮತಿ ಪಡೆಯಬೇಕಾಗಿದೆ. ಚೆನ್ನೈ ಹಾಗೂ ತಿರುವನಂತಪುರ ವಿಮಾನ ನಿಲ್ದಾಣದ ಎಟಿಸಿ 24 ಗಂಟೆಯೂ ಈಗಲೂ ಕಾರ್ಯಾಚರಿಸುತ್ತಿದೆ. 

ಲಾಕ್‌ಡೌನ್ ಬಳಿಕ ನೌಕಾಪಡೆ ಹಾಗೂ ವಾಯುಪಡೆಯ ಕೆಲವು ಹೆಲಿಕಾಪ್ಟರ್‌ಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿವೆ. ಇವು ಹಳೆ ಏರ್‌ಪೋರ್ಟ್‌ನ ರನ್ ವೇ ಭಾಗದಲ್ಲಿ ಲ್ಯಾಂಡ್ ಆಗಿವೆ. ವಿಮಾನ ಸಂಚಾರ ಸಂಪೂರ್ಣ ಸ್ಥಗಿತವಾದ ಕಾರಣದಿಂದ ವಿಮಾನಗಳನ್ನು ವಿವಿಧ ಏರ್‌ಪೋರ್ಟ್‌ಗಳಲ್ಲಿ ಸದ್ಯ ನಿಲ್ಲಿಸಲಾಗಿದೆ. ಅದೇ ರೀತಿ ಮಂಗಳೂರು ಏರ್‌ಪೋರ್ಟ್‌ನಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ನ ಕೆಲವು ವಿಮಾನಗಳನ್ನು ನಿಲ್ಲಿಸಲಾಗಿದೆ. ವಿಮಾನ ನಿಲ್ದಾಣದ ಅಗ್ನಿಶಾಮಕದಳದ ಸಿಬ್ಬಂದಿಯು ಸದಾ ಸೇವೆಯಲ್ಲಿದ್ದಾರೆ. ಲಾಕ್‌ಡೌನ್ ಬಳಿಕ ವಿಮಾನ ನಿಲ್ದಾಣದ ಹೊರಭಾಗದ ಗುಡ್ಡಕ್ಕೆ ಬೆಂಕಿ ಬಿದ್ದು ಆತಂಕ ಸೃಷ್ಟಿಯಾಗಿತ್ತು. ಈ ಸಂದರ್ಭ ಏರ್‌ಪೋರ್ಟ್‌ನ ಅಗ್ನಿಶಾಮಕದಳ ಹಾಗೂ ಮಂಗಳೂರಿನ ಅಗ್ನಿಶಾಮಕ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿತ್ತು ಎಂದು ತಿಳಿದು ಬಂದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಿಸುವ ಸಮಯದಲ್ಲಿ ಪ್ರತೀ ದಿನ 26 ಆಗಮನ ಹಾಗೂ 26 ನಿರ್ಗಮನ ವಿಮಾನ ನಿರ್ವಹಣೆಯಾಗುತ್ತಿತ್ತು. ಆದರೆ ಕೊರೋನ ಹಿನ್ನೆಲೆಯಲ್ಲಿ ಮಾರ್ಚ್ ಎರಡನೇ ವಾರದಲ್ಲೇ ಆಗಮನ ಮತ್ತು ನಿರ್ಗಮನದಲ್ಲಿ ವ್ಯತ್ಯಯವಾಗಿತ್ತು.

ಮಂಗಳೂರು ಏರ್‌ಪೋರ್ಟ್‌ನ ಏರ್‌ಲೈನ್ಸ್, ಹೊಟೇಲ್, ಟವರ್, ಲೋಡರ್, ಟರ್ಮಿನಲ್, ಆಡಳಿತ ವಿಭಾಗ ಸೇರಿದಂತೆ ಬೇರೆ ಬೇರೆ ವಲಯದ ಮೂರೂ ಪಾಳಿಗಳಲ್ಲಿ ಪ್ರತೀ ದಿನ 1,500ಕ್ಕೂ ಅಧಿಕ ಜನರು ಕಾರ್ಯನಿರ್ವಹಿಸುತ್ತಾರೆ. ಇದರಲ್ಲಿ ಭದ್ರತಾ ಪಡೆ, ಅಗ್ನಿಶಾಮಕದಳ, ಟವರ್ ಸೇರಿದಂತೆ ನಿಲ್ದಾಣದ ಸಿಬ್ಬಂದಿ, ಸ್ವಚ್ಚತಾ ವಿಭಾಗ ಸಹಿತ 300ರಷ್ಟು ಜನರು ಕರ್ತವ್ಯಕ್ಕೆ ಸದ್ಯ ಹಾಜರಾಗುತ್ತಿದ್ದಾರೆ. ಸದಾ ಪ್ರಯಾಣಿಕರಿಂದ ಗಿಜಿಗುಡುತ್ತಿದ್ದ ಏರ್‌ಪೋರ್ಟ್ ಸದ್ಯ ಪ್ರಯಾಣಿಕರೇ ಇಲ್ಲದೆ ಬಿಕೋ ಎನ್ನುತ್ತಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಮಾನಯಾನ ಸ್ಥಗಿತಗೊಂಡಿದ್ದರೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಿವಾರ್ಯ ಸಂದರ್ಭ ಯಾವುದೇ ವಿಮಾನ, ಹೆಲಿಕಾಪ್ಟರ್‌ಗಳು ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಸಂಬಂಧಿಸಿದ ಅನುಮತಿ ಪಡೆದು ಆಗಮಿಸಲು ಅವಕಾಶವಿದೆ. ಉಳಿದಂತೆ ಪ್ರಯಾಣಿಕರಿಲ್ಲದ ಹಿನ್ನೆಲೆಯಲ್ಲಿ ನಿಲ್ದಾಣದಲ್ಲಿ ಸಿಬ್ಬಂದಿಯ ಸಂಖ್ಯೆ ಕಡಿಮೆ ಇದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಣಿಜ್ಯ ವ್ಯವಸ್ಥಾಪಕ ಜೈಶಂಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X