Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್ ಎಫೆಕ್ಟ್: ಜಮೀನಿನಲ್ಲಿ...

ಲಾಕ್‍ಡೌನ್ ಎಫೆಕ್ಟ್: ಜಮೀನಿನಲ್ಲಿ ಕೊಳೆಯುತ್ತಿರುವ ಹಣ್ಣು-ತರಕಾರಿಗಳು !

ವಾರ್ತಾಭಾರತಿವಾರ್ತಾಭಾರತಿ12 April 2020 11:30 PM IST
share
ಲಾಕ್‍ಡೌನ್ ಎಫೆಕ್ಟ್: ಜಮೀನಿನಲ್ಲಿ ಕೊಳೆಯುತ್ತಿರುವ ಹಣ್ಣು-ತರಕಾರಿಗಳು !

ಬೆಂಗಳೂರು, ಎ. 12: ರಾಜ್ಯದಲ್ಲಿ ಕಲ್ಲಂಗಡಿ, ಕರ್ಬೂಜ, ದ್ರಾಕ್ಷಿ, ಮಾವು ಸೇರಿದಂತೆ ಹಣ್ಣು ಮತ್ತು ಸೊಪ್ಪು, ತರಕಾರಿ ಕಟಾವಿನ ಸಂದರ್ಭದಲ್ಲಿ ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿಧಿಸಿರುವ ಲಾಕ್‍ಡೌನ್ ದಿಗ್ಬಂಧನದ ಪರಿಣಾಮ ದೊಡ್ಡ ಪ್ರಮಾಣದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

'ಹಣ್ಣು-ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಯಾವುದೇ ಅಡ್ಡಿಯಿಲ್ಲ. ರೈತರು ಮತ್ತು ವ್ಯಾಪಾರಸ್ಥರ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗುವುದು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸಲಾಗುವುದು. ರೈತರಿಗೆ ಹಸಿರು ಪಾಸ್ ನೀಡಲಾಗುವುದು' ಎಂದು ಸರಕಾರ ಹೇಳುತ್ತಿದ್ದರೂ, ರಾಜ್ಯದಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಬೀದಿಗೆ ಎಸೆಯುತ್ತಿರುವುದು ನಿಲ್ಲುತ್ತಿಲ್ಲ.

ವ್ಯಾಪಕ ವದಂತಿಗಳು: ರಾಜ್ಯ ಗ್ರಾಮೀಣ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ರೈತರ ಜಮೀನಿನಲ್ಲಿಯೇ ಸೊಪ್ಪು, ಹಣ್ಣು-ತರಕಾರಿ ಸೇರಿದಂತೆ ಇನ್ನಿತರ ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುತ್ತಿದ್ದ ದಲ್ಲಾಳಿಗಳು ಹಳ್ಳಿಗಳತ್ತ ಮುಖ ಮಾಡುತ್ತಿಲ್ಲ. ಒಂದು ಸಮುದಾಯದ ಮೇಲಿನ ಕೊರೋನ ಬಗೆಗಿನ ಸುಳ್ಳು ಸುದ್ದಿ, ವದಂತಿಗಳೇ ಇದಕ್ಕೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.

ರಾಜ್ಯ ಸರಕಾರದ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ, ಒಂದು ಸಮುದಾಯದ ವಿರುದ್ಧ ವ್ಯವಸ್ಥಿತ ಅಪಪ್ರಚಾರದಿಂದ ರೈತರ ಹಣ್ಣು, ತರಕಾರಿ ಸೇರಿದಂತೆ ಇನ್ನಿತರ ಕೃಷಿ ಉತ್ಪನ್ನಗಳು ರೈತರ ಜಮೀನಿನಲ್ಲೇ ಕೊಳೆಯುವಂತಾಗಿದೆ. ಅಲ್ಲದೆ, ರಾಜ್ಯದಿಂದ ಹೊರ ರಾಜ್ಯಕ್ಕೆ ಹಣ್ಣು-ತರಕಾರಿ ಸಾಗಾಣಿಕೆ ನಿರ್ಬಂಧ ಹೇರಿದ ಕಾರಣಕ್ಕೆ ರೈತರು ಕಂಗಾಲಾಗುವ ದುಸ್ಥಿತಿ ಎದುರಾಗಿದೆ.

ಹಾಪ್‍ಕಾಮ್ಸ್ ಮತ್ತು ತೋಟಗಾರಿಕೆ ಇಲಾಖೆ ನೆರವು ಪಡೆದು ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಿ, ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಸರಕಾರವೇ ತಲುಪಿಸಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಅದು ವಾಸ್ತವಿಕವಾಗಿ ಅಸಾಧ್ಯ. ಹೀಗಾಗಿ ರೈತರು ಮತ್ತು ಗ್ರಾಹಕರು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾರೆ.

ಇಚ್ಛಾಶಕ್ತಿ ಇಲ್ಲ: "ದೊಡ್ಡ ಪ್ರಮಾಣದಲ್ಲಿ ಪೌಷ್ಟಿಕಾಂಶವುಳ್ಳ ಹಣ್ಣು-ತರಕಾರಿಗಳನ್ನು ರೈತರು ಮಣ್ಣು ಮಾಡುತ್ತಿರುವುದನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತದೆ. ಸರಕಾರಕ್ಕೆ ಕನಿಷ್ಟ ಇಚ್ಛಾಶಕ್ತಿ ಇದ್ದಿದ್ದರೆ ರೈತರ ಕೃಷಿ ಉತ್ಪನ್ನಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ರೈತರ ಸಮೂಹದ ನೆರವಿಗೆ ನಿಲ್ಲಬೇಕಾಗಿತ್ತು" ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.

ಕೃಷಿ, ತೋಟಗಾರಿಕೆ ಇಲಾಖೆ ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಜನರಿಗೆ ಪೂರೈಕೆ ಮಾಡುವ ಕೆಲಸ ಮಾಡಬೇಕಿತ್ತು. ಬೆಂಗಳೂರು ನಗರ ಒಂದರಲ್ಲೆ 10 ಸಾವಿರ ತಳ್ಳುಗಾಡಿ ವ್ಯಾಪಾರಿಗಳಿದ್ದಾರೆ. ಅವರಿಗೆ ಹಣ್ಣು-ತರಕಾರಿ ಪೂರೈಕೆ ಮಾಡಿದರೆ ಅವರು ಮನೆ-ಮನೆಗೆ ತಲುಪಿಸುವ ಕೆಲಸ ಮಾಡುತ್ತಾರೆ' ಎಂದು ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕೆಯೊಂದಿಗೆ ತಿಳಿಸಿದ್ದಾರೆ.

"ನಾನೇ ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಈ ವಿಚಾರ ಗಮನಕ್ಕೆ ತಂದಿರುವೆ. ಆದರೂ, ರಾಜ್ಯದಲ್ಲಿ ರೈತರ ಕೃಷಿ ಉತ್ಪನ್ನಗಳ ಖರೀದಿ ಆಗುತ್ತಿಲ್ಲ. ರೈತರ ಸಹಾಯಕ್ಕೆ ಧಾವಿಸಲು ಸರಕಾರಕ್ಕೆ ಇದಕ್ಕಿಂತ ಬೇರೆ ಅವಕಾಶ ಸಿಗಲು ಸಾಧ್ಯವೇ ಇಲ್ಲ. ಖಂಡಿತ ಇದು ನಾಗರಿಕ ಸರಕಾರ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಯಿಲೆ ಜಾತಿ ಧರ್ಮ ನೋಡಿ ಬರುವುದಿಲ್ಲ

ದಿಲ್ಲಿ ಧಾರ್ಮಿಕ ಸಭೆ ನೆಪದಲ್ಲಿ ಸಾಮಾಜಿಕ ಜಾಲತಾಣ ಮತ್ತು ಕೆಲ ಮಾಧ್ಯಮಗಳು ಒಂದು ಸಮುದಾಯದ ಬಗ್ಗೆ ವದಂತಿ ಹರಡಿದ್ದರ ಪರಿಣಾಮ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ರೈತರ ಕೃಷಿ ಉತ್ಪನ್ನಗಳು ಕೊಳೆಯುತ್ತಿವೆ. ಇಂತಹ ದ್ವೇಷದ ಮನೋಭಾವ ಒಳ್ಳೆಯ ಬೆಳವಣಿಗೆಯಲ್ಲ. ಯಾವುದೇ ಕಾಯಿಲೆ ಜಾತಿ-ಧರ್ಮ, ಬಣ್ಣ-ಭಾಷೆಗಳನ್ನು ನೋಡಿ ಬರುವುದಿಲ್ಲ. ಯಾವುದೇ ಒಂದು ಸಮುದಾಯದ ಮಾನಸಿಕ ಸ್ಥೈರ್ಯ ಕುಗ್ಗಿಸುವ ಕೆಲಸಕ್ಕೆ ಯಾರು ಕೈಹಾಕಬಾರದು'

-ಕೋಡಿಹಳ್ಳಿ ಚಂದ್ರಶೇಖರ್, ರೈತ ಸಂಘದ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X