Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಲಾಕ್ ಡೌನ್ ನಿಂದ ಕಾರಲ್ಲೇ 21 ದಿನಗಳ...

ಲಾಕ್ ಡೌನ್ ನಿಂದ ಕಾರಲ್ಲೇ 21 ದಿನಗಳ ಹೀನಾಯ ಜೀವನ

ಗುಜರಾತ್-ಮಹಾರಾಷ್ಟ್ರ ಗಡಿಯಲ್ಲಿ ಸಿಲುಕಿರುವ ಪುತ್ತೂರಿನ ಯುವಕರು

ರಶೀದ್ ವಿಟ್ಲರಶೀದ್ ವಿಟ್ಲ13 April 2020 11:27 PM IST
share
ಲಾಕ್ ಡೌನ್ ನಿಂದ ಕಾರಲ್ಲೇ 21 ದಿನಗಳ ಹೀನಾಯ ಜೀವನ

ಭಾರತ ಲಾಕ್ ಡೌನ್ ಆಗುವ 2 ದಿನಗಳ ಮೊದಲು ಗುಜರಾತಿನ ರಾಜ್ ಕೋಟಿನಿಂದ ನಿಸ್ಸಾನ್ ಮೈಕ್ರಾ ಕಾರಿನಲ್ಲಿ ಹೊರಟ ಪುತ್ತೂರಿನ ಇಬ್ಬರು ಯುವಕರು ಗುಜರಾತ್-ಮಹಾರಾಷ್ಟ್ರ ಗಡಿ ಪ್ರದೇಶ ಗುಜರಾತಿನ ವಲ್ಸಾಡ್ ಜಿಲ್ಲೆಯ ಅಂಬರ್'ಗಾವ್ ಭಿಲಾಡ್ ತಾಲೂಕಿನ ಆರ್.ಟಿ.ಒ. ಚೆಕ್ ಪೋಸ್ಟ್ ಬಳಿ ಸಿಲುಕಿದ್ದಾರೆ. ವಾಪಸ್ ರಾಜ್ ಕೋಟಿಗೆ ಹೋಗಲಾಗದೇ ಈಕಡೆ ಪುತ್ತೂರಿಗೂ ಬರಲಾಗದೆ ಕಳೆದ 21 ದಿವಸ ದಾರಿಬದಿ ಕಾರಿನಲ್ಲೇ ಉಳಿಯುವ ಹೀನಾಯ ಪರಿಸ್ಥಿತಿ ಎದುರಾಗಿದೆ.

ಲಾಕ್ ಡೌನ್ ಘೋಷಣೆಯಾಗುವ ಮೊದಲು ರಾಜ್ ಕೋಟ್ ನಿಂದ ಕಾರಿನಲ್ಲಿ ಹೊರಟ ಪುತ್ತೂರು ತಾಲೂಕು ಸಾಮೆತ್ತಡ್ಕದ ಆಶಿಕ್ ಹುಸೈನ್ ಹಾಗೂ ಅವರ ಸ್ನೇಹಿತ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ನಿವಾಸಿ ಮುಹಮ್ಮದ್ ತಾಕೀನ್ ಮರೀಲ್ ಸುಮಾರು 500 ಕಿ.ಮೀ.ಗೂ ಅಧಿಕ ಪ್ರಯಾಣಿಸಿದ ಬಳಿಕ ಲಾಕ್ ಡೌನ್ ನ ಅಡಕತ್ತರಿಗೆ ಸಿಲುಕಿದ್ದಾರೆ.

ಆಶಿಕ್ ಹುಸೈನ್ ಅಡಕೆ ವ್ಯಾಪಾರದ ಉದ್ದೇಶದಿಂದ ಹಾಗೂ ರಾಜ್ ಕೋಟ್ ನಲ್ಲಿ ಹೊಸ ಅಂಗಡಿ ತೆರೆಯುವ ಸಲುವಾಗಿ ಒಂದು ತಿಂಗಳ ಹಿಂದೆ ಸ್ನೇಹಿತನ ಜೊತೆ ತೆರಳಿದ್ದರು. ಆದರೆ ಇದೇ ಸಂದರ್ಭ ಕೊರೋನ ವೈರಸ್ ಹರಡುವಿಕೆಯ ಭೀತಿ ತಲೆದೋರಿದ್ದು ಭಾರತದಾದ್ಯಂತ ಲಾಡ್ ಡೌನ್ ವಿಧಿಸಲಾಯಿತು. ಈ ವೇಳೆ ಊರಿಗೆ ಹೊರಟ ಯುವಕರು ಗುಜರಾತ್-ಮಹಾರಾಷ್ಟ್ರ ಗಡಿಯಲ್ಲಿ ಯಾವ ಕಡೆಯೂ ಪ್ರಯಾಣಿಸಲಾಗದೆ ಸಿಲುಕಿದ್ದಾರೆ. ಕಾರಿನಲ್ಲೇ ವಾಸ ಮಾಡುತ್ತಿರುವ ಇಬ್ಬರು ಯುವಕರ ಕರುಣಾಜನಕ ಕಥೆ ಹೇಳಿತೀರದು. ಸ್ನಾನ ಶೌಚಾಗೃಹಕ್ಕೆ ಹತ್ತಿರದ ಅಂಬರ್ ಹೋಟೆಲಿನವರಲ್ಲಿ ಮನವಿ ಮಾಡಿ ಅವಲಂಬಿಸಿರುವ ಇವರು ಆ ರೆಸ್ಟೋರೆಂಟ್ ನಲ್ಲಿ ಸ್ಥಳ ಇಲ್ಲದ ಕಾರಣ ಕಾರಿನಲ್ಲೇ ಮಲಗುವ ಪರಿಸ್ಥಿತಿ ಎದುರಾಗಿದೆ. ದಿನದ ಮೂರು ಹೊತ್ತು ಸ್ಥಳೀಯ ಸಮಾಜ ಸೇವಕರಾದ ಸಯ್ಯದ್ ಕಶ್ಯಪ್ ಎಂಬವರು ಆಹಾರ ನೀಡುತ್ತಿದ್ದಾರೆ. ತುರ್ತು ಅಗತ್ಯದ ಔಷಧಿಯೂ ವಿತರಿಸುತ್ತಾರೆ. ಯುವಕರು ಪುತ್ತೂರಿಗೆ ಬರಲು ಕೆಲವರನ್ನು ಸಂಪರ್ಕಿಸಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.

ನಮ್ಮ ಕರ್ನಾಟಕ ಸರಕಾರ, ದ.ಕ. ಜಿಲ್ಲಾಡಳಿತ ಈ ಬಗ್ಗೆ ಮಾನವೀಯತೆ ಮೆರೆದು ಆ ಯುವಕರನ್ನು ಊರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕಿದೆ. ಗುಜರಾತಿನ ವಲ್ಸಾಡ್ ಜಿಲ್ಲಾಡಳಿತವನ್ನು ಸಂಪರ್ಕಿಸಿ ಪುತ್ತೂರಿಗೆ ಕರೆಸಲು ಸರಕಾರಕ್ಕೆ, ಜಿಲ್ಲಾಡಳಿತಕ್ಕೆ ಅಸಾಧ್ಯವಾದುದೇನಲ್ಲ. ಇಲ್ಲಿನ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಮನಸ್ಸಿದ್ದರೆ ವಿಶೇಷ ಸಮಸ್ಯೆ ಎಂದು ಪರಿಗಣಿಸಿ ಕರೆತರಲು ಖಂಡಿತಾ ಸಾಧ್ಯವಿದೆ. ತಮಿಳುನಾಡಿನ ಮಧುರೈ ಎಸಿ ಅವರು (ಅಬಕಾರಿ) ಮಹಾರಾಷ್ಟ್ರದ ಟಸ್ಗಾಂವ್ ಗೆ ತೆರಳಲು ಇಬ್ಬರಿಗೆ ಎ.8ರಂದು ವಾಹನ ಪಾಸ್ ನೀಡಿದ್ದು ಪುರಾವೆಯಿದೆ. ಅವರು ಮಹಾರಾಷ್ಟ್ರ ತಲುಪಿದ್ದಾರೆ ಕೂಡಾ. ಇಟಲಿಯಿಂದ ಬೆಂಗಳೂರಿಗೆ ಬಂದು ಸಿಲುಕಿದ್ದ ಮಂಗಳೂರಿನ ಯುವತಿಯನ್ನು ಶಾಸಕರಾದ ಯು.ಟಿ.ಖಾದರ್ ಮಂಗಳೂರಿನ ಅವರ ಮನೆ ತಲುಪಿಸಿದ್ದನ್ನು ಕೂಡಾ ಇಲ್ಲಿ ಸ್ಮರಿಸಬಹುದು. ಇಂತಹ ಉದಾಹರಣೆಗಳು ಹಲವಾರು ಇವೆ. ನಮ್ಮ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೂಡಾ ಪುತ್ತೂರಿನ ಈ ಇಬ್ಬರು ಯುವಕರ ಸಮಸ್ಯೆಯನ್ನು ಅರಿತು ತಕ್ಷಣ ಸ್ಪಂದಿಸುವ ಅನಿವಾರ್ಯತೆ ಇದೆ.

share
ರಶೀದ್ ವಿಟ್ಲ
ರಶೀದ್ ವಿಟ್ಲ
Next Story
X