Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಪರೀಕ್ಷೆಗೆ ದೇಶದಲ್ಲೇ ಕಿಟ್...

ಕೊರೋನ ಪರೀಕ್ಷೆಗೆ ದೇಶದಲ್ಲೇ ಕಿಟ್ ಉತ್ಪಾದನೆ

ವಾರ್ತಾಭಾರತಿವಾರ್ತಾಭಾರತಿ16 April 2020 11:16 AM IST
share
ಕೊರೋನ ಪರೀಕ್ಷೆಗೆ ದೇಶದಲ್ಲೇ ಕಿಟ್ ಉತ್ಪಾದನೆ

ಹೊಸದಿಲ್ಲಿ, ಎ.16: ದೇಶದ ಮೂರು ಕಂಪೆನಿಗಳಲ್ಲಿ ಕೋವಿಡ್-19 ಪರೀಕ್ಷಾ ಕಿಟ್‌ಗಳನ್ನು ಉತ್ಪಾದಸಲು ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ) ಲೈಸನ್ಸ್ ನೀಡಿದೆ.

ನಮ್ಮ ದೇಹದಲ್ಲಿನ ಆ್ಯಂಟಿಬಾಡಿ ಕಣಗಳನ್ನು ಆಧರಿಸಿ ಕ್ಷಿಪ್ರವಾಗಿ ಕೋವಿಡ್-19 ಸೋಂಕು ಪರೀಕ್ಷೆ ನಡೆಸುವ ಕಿಟ್‌ಗಳ ಉತ್ಪಾದನೆಯನ್ನು ದಿಲ್ಲಿಯ ವ್ಯಾನ್‌ಗಾರ್ಡ್ ಡಯಾಗ್ನೋಸ್ಟಿಕ್ಸ್, ಕೇರಳದಲ್ಲಿರುವ ಸರ್ಕಾರಿ ಸಾಮ್ಯದ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್ ಮತ್ತು ಗುಜರಾತ್‌ನ ವೋಕ್ಸ್‌ಚರ್ ಬಯೋ ಲಿಮಿಟೆಡ್ ಉತ್ಪಾದನೆ ಆರಂಭಿಸಿವೆ.

ಆರ್‌ಟಿಕೆ ಕಿಟ್‌ಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲು ಭಾರತ ನಿರ್ಧರಿಸಿತ್ತು. ಆದರೆ ಇದನ್ನು ಪೂರೈಸಲು ಎಪ್ರಿಲ್ 5, ಎಪ್ರಿಲ್ 9 ಹಾಗೂ ಎಪ್ರಿಲ್ 15 ಹೀಗೆ ಹಲವು ಗಡುವು ಮುಗಿದರೂ ಇನ್ನೂ ಭಾರತಕ್ಕೆ ಆರ್‌ಟಿ ಕಿಟ್‌ಗಳು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಭಾರತದಲ್ಲೇ ಉತ್ಪಾದನೆಗೆ ಒತ್ತು ನೀಡಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ ಮೂರು ಕಂಪೆನಿಗಳು ಉತ್ಪಾದಿಸಿದ ಆರ್‌ಟಿಕೆ ಕಿಟ್‌ಗಳನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಪ್ರಮಾಣೀಕರಿಸಿತ್ತು. ಎಚ್‌ಎಲ್‌ಎಲ್ ಮತ್ತು ವೋಕ್ಸ್‌ಚರ್ ಉತ್ಪಾದಿಸಿದ ಒಂದು ಲಕ್ಷ ಕಿಟ್‌ಗಳು ಎಪ್ರಿಲ್ 20ರ ವೇಳೆಗೆ ಬಳಕೆಗೆ ಲಭ್ಯವಾಗಲಿವೆ ಎಂದು ಮೂಲಗಳು ಹೇಳಿವೆ.

ಆರ್‌ಟಿ-ಪಿಸಿಆರ್ ಕಿಟ್‌ಗಳಲ್ಲಿ ಫಲಿತಾಂಶ ಗೊತ್ತಾಗಲು ಐದು ಗಂಟೆ ಬೇಕಾಗುತ್ತದೆ. ಆದರೆ ಆರ್‌ಟಿ ಕಿಟ್‌ಗಳು ಕೇವಲ 30 ನಿಮಿಷಗಳಲ್ಲಿ ಫಲಿತಾಂಶ ನೀಡುವುದರಿಂದ ವಿಶ್ವಾದ್ಯಂತ ಈ ಕಿಟ್‌ಗಳಿಗೆ ಭಾರಿ ಬೇಡಿಕೆ ಇದೆ. ಆದರೆ ಆರ್‌ಟಿಕೆ ಫಲಿತಾಂಶ ನೆಗೆಟಿವ್ ಬಂದಲ್ಲಿ ಅದನ್ನು ದೃಢೀಕರಿಸಲು ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸುವುದು ಐಸಿಎಂಆರ್ ಮಾರ್ಗಸೂಚಿಯ ಪ್ರಕಾರ ಕಡ್ಡಾಯ.

ಜನಪ್ರಿಯ ಕಾಂಡೋಮ್ ಬ್ರಾಂಡ್ ನಿರೋಧ್ ಉತ್ಪಾದಿಸುವ ಎಚ್‌ಎಲ್‌ಎಲ್ ಲೈಫ್‌ಕೇರ್ ಲಿಮಿಟೆಡ್ ಹರ್ಯಾಣದ ಮನೇಸರ್ ಘಟಕದಲ್ಲಿ ಉತ್ಪಾದನೆ ಆರಂಭಿಸಿದೆ. ಒಂದು ವಾರದಲ್ಲಿ ಒಂದು ಲಕ್ಷ ಕಿಟ್ ಉತ್ಪಾದಿಸಲಾಗುವುದು. ಐಸಿಎಂಆರ್‌ಗೆ ನೇರವಾಗಿ ಇದನ್ನು ಪೂರೈಸಲಾಗುವುದು ಎಂದು ಕಂಪೆನಿಯ ಮೂಲಗಳು ಸ್ಪಷ್ಟಪಡಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X