Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನೆರವು ನೀಡಲು ಸ್ವಯಂಸೇವಕಿಯಾದ ಫುಟ್ಬಾಲ್...

ನೆರವು ನೀಡಲು ಸ್ವಯಂಸೇವಕಿಯಾದ ಫುಟ್ಬಾಲ್ ಕೋಚ್

ವಾರ್ತಾಭಾರತಿವಾರ್ತಾಭಾರತಿ16 April 2020 12:56 PM IST
share
ನೆರವು ನೀಡಲು ಸ್ವಯಂಸೇವಕಿಯಾದ ಫುಟ್ಬಾಲ್ ಕೋಚ್

ಹೊಸದಿಲ್ಲಿ, ಎ.15: ಗೋಕುಲಂ ಕೇರಳ ಎಫ್‌ಸಿ ಭಾರತೀಯ ಮಹಿಳಾ ಲೀಗ್ ಪ್ರಶಸ್ತಿ ಜಯಿಸಲು ಮಾರ್ಗದರ್ಶನ ನೀಡಿರುವ ಫುಟ್ಬಾಲ್ ಕೋಚ್ ಪ್ರಿಯಾ ಪಿ.ವಿ. ಪ್ರಸ್ತುತ ಅಗತ್ಯವಿರುವವರಿಗೆ ಔಷಧಿ ಹಾಗೂ ಆಹಾರವನ್ನು ಪೂರೈಸುವ ಸಹಾಯವಾಣಿ ಕೇಂದ್ರದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಕೊರೋನ ವೈರಸ್‌ನಿಂದಾಗಿ ಲಾಕ್‌ಡೌನ್ ಆಗಿರುವ ಕೇರಳ ರಾಜ್ಯದಲ್ಲಿ ಪರಿಹಾರ ಕಾರ್ಯಾಚರಣೆಗೆ ಸಹಾಯ ಮಾಡುತ್ತಿದ್ದಾರೆ.

ಭಾರತ ಹಾಗೂ ಜಮ್ಶೆಡ್‌ಪುರ ಎಫ್‌ಸಿ ಆಟಗಾರ ಸಿ.ಕೆ. ವಿನೀತ್ ಕಾರ್ಯ ನಿರ್ವಹಿಸುತ್ತಿರುವ ಕಣ್ಣೂರಿನ ಸಹಾಯ ವಾಣಿ ಕೇಂದ್ರದಲ್ಲಿ ಪ್ರಿಯಾ ಕೂಡಾ ಕೆಲಸ ಮಾಡುತ್ತಿದ್ದಾರೆ.

ಎಲ್ಲ ಔಷಧಿಗಳ ಕೋರಿಕೆಯನ್ನು ಪೂರೈಸುವುದು ಸಹಾಯವಾಣಿಯ ಅತ್ಯಂತ ದೊಡ್ಡ ಸವಾಲಾಗಿದೆ.

‘‘ನಾವು ಪ್ರತಿ ದಿನ ಸಹಾಯ ವಾಣಿಯಲ್ಲಿ 150ರಿಂದ 200 ಫೋನ್ ಕರೆಗಳನ್ನು ಸ್ವೀಕರಿಸುತ್ತಿದ್ದೇವೆ. ಹೆಚ್ಚಿನವರು ಔಷಧಕ್ಕಾಗಿ ಕರೆ ಮಾಡುತ್ತಾರೆ. ಔಷಧಕ್ಕಾಗಿ ಯಾವುದೇ ಕೋರಿಕೆ ಬಂದರೆ ಅದನ್ನು ನೆರವೇರಿಸುವುದನ್ನು ದೃಢಪಡಿಸುತ್ತೇವೆ. ಔಷಧವನ್ನು ಅಗತ್ಯವಿರುವವರಿಗೆ ತಲುಪಿಸುತ್ತೇವೆ’’ ಎಂದು ಈ ಮೊದಲು ಅಂಡರ್-19 ಫುಟ್ಬಾಲ್ ತಂಡಕ್ಕೆ ಕೋಚ್ ಆಗಿದ್ದ ಪ್ರಿಯಾ ಪತ್ರಿಕಾ ಪ್ರಕಟನೆಯೊಂದರಲ್ಲಿ ತಿಳಿಸಿದ್ದಾರೆ.

 ‘‘ನಾವು ಈ ತನಕ ಔಷಧಕ್ಕಾಗಿ ಬಂದಿರುವ ಮನವಿಗಳನ್ನು ತಿರಸ್ಕರಿಸಿಲ್ಲ. ದಿನಸಿ ಹಾಗೂ ಆಹಾರ ವಸ್ತುಗಳಿಗಾಗಿ ಬಂದಿರುವ ಮನವಿಯನ್ನು ಪುರಸ್ಕರಿಸಿದ್ದೇವೆ. ಕೆಲವೊಮ್ಮೆ ವಸ್ತುಗಳನ್ನು ಹಲವು ಜನರಿಗೆ ವಿತರಿಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಇದನ್ನು ವಿಭಜಿಸಿ ಎಲ್ಲರಿಗೂ ಸಿಗುವಂತೆ ಮಾಡುತ್ತೇವೆ’’ ಎಂದು ಪ್ರಿಯಾ ಹೇಳಿದ್ದಾರೆ.

ಸಹಾಯವಾಣಿ ಕೇಂದ್ರದಲ್ಲಿ ಸುತ್ತ ಮುತ್ತಲಿನ ವಿದ್ಯಾರ್ಥಿಗಳು ಹಾಗೂ ಇತರ ವೃತ್ತಿಪರರ ಮನವಿಯನ್ನು ಸ್ವೀಕರಿಸಲಾಗುತ್ತದೆ. ಕಣ್ಣೂರು ಸಹಾಯವಾಣಿಯ ಕೇಂದ್ರಸ್ಥಾನವಾಗಿದೆ. ಪ್ರಿಯಾ ಹಾಗೂ ವಿನೀತ್ ಹತ್ತಿರದ ಜಿಲ್ಲೆಗಳಿಂದ ಸಾಕಷ್ಟು ಕರೆಗಳನ್ನು ಸ್ವೀಕರಿಸುತ್ತಿದ್ದಾರೆ.

‘‘ನಾವು ಕಣ್ಣೂರಿನ ಮುಖ್ಯಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ವಿವಿಧ ಜಿಲ್ಲೆಗಳಲ್ಲಿ ಕೂಡ ಹೆಲ್ಪ್‌ಲೈನ್‌ಗಳಿವೆ. ಔಷಧಗಳು, ದಿನಸಿಗಳು ಹಾಗೂ ಸರಬರಾಜು ಎಕ್ಸಿಕೂಟಿವ್‌ಗಳ ತನ್ನದೇ ಜಾಲವನ್ನು ಹೊಂದಿವೆ. ಈ ಜಿಲ್ಲೆಗಳ ಪೈಕಿ ಯಾವುದರಿಂದಲೂ ಕರೆ ಬಂದರೆ ಸಂಬಂಧಪಟ್ಟ ಹೆಲ್ ್ಪಲೈನ್ ಸೆಂಟರ್‌ಗೆ ಕರೆಯನ್ನು ವರ್ಗಾಯಿಸುತ್ತೇವೆ’’ ಎಂದರು.

ಸ್ಥಳೀಯ ಫುಟ್ಬಾಲ್ ಕ್ಲಬ್ ಗೋಕುಲಂ ಕೇರಳದ ಮುಖ್ಯ ಕೋಚ್ ಆಗಿದ್ದ ಪ್ರಿಯಾ 2019-20ರ ಐಡಬ್ಲುಎಲ್ ಪ್ರಶಸ್ತಿ ಜಯಿಸಲು ನೆರವಾಗಿದ್ದರು. ಹೆಲ್ಪ್‌ಲೈನ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಕುಟುಂಬ ಸದಸ್ಯರಿಂದ ದೂರ ಉಳಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X