Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪಡಿತರ ಸೋರಿಕೆ ಬಗ್ಗೆ ಸದ್ಯ...

"ಪಡಿತರ ಸೋರಿಕೆ ಬಗ್ಗೆ ಸದ್ಯ ಚಿಂತಿಸದಿರಿ, ಎಲ್ಲರಿಗೂ ಆಹಾರ ಒದಗಿಸಿ"

ಕೇಂದ್ರಕ್ಕೆ ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ, ಅಮರ್ತ್ಯಸೇನ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 April 2020 10:10 PM IST
share
ಪಡಿತರ ಸೋರಿಕೆ ಬಗ್ಗೆ ಸದ್ಯ ಚಿಂತಿಸದಿರಿ, ಎಲ್ಲರಿಗೂ ಆಹಾರ ಒದಗಿಸಿ

ಹೊಸದಿಲ್ಲಿ, ಎ.16: ಕೊರೋನ ವೈರಸ್ ಹಾವಳಿ ತಡೆಗೆ ದೇಶಾದ್ಯಂತ ಲಾಕ್‌ಡೌನ್ ಹೇರಿರುವ ಈ ಸಮಯದಲ್ಲಿ, ಸರಕಾರವ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಸೋರಿಕೆಯಾಗುವ ಸಾಧ್ಯತೆ ಬಗ್ಗೆ ಚಿಂತಿಸದೆ, ಪ್ರತಿಯೊಬ್ಬರಿಗೂ ಆಹಾರ ಒದಗಿಸುವ ಬಗ್ಗೆ ಗಮನಹರಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞರಾದ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ ರಾಜನ್ ಹಾಗೂ ನೊಬೆಲ್ ಪುರಸ್ಕೃತರಾದ ಅಭಿಜಿತ್ ಬ್ಯಾನರ್ಜಿ, ಅಮರ್ತ್ಯ ಸೇನ್ ಪ್ರತಿಪಾದಿಸಿದ್ದಾರೆ.

‘‘ದೊಡ್ಡ ಪ್ರಮಾಣದಲ್ಲಿ ಪಡಿತರ ವಿತರಣೆ ಜಾರಿಗೊಳಿಸುವಾಗ ಸಾಕಷ್ಟು ತಪ್ಪು ಹೆಜ್ಜೆಗಳನ್ನು ಇಡುವ ಸಾಧ್ಯತೆಯಿದೆಯೆಂದು ನಾವು ಭಾರತೀಯರು ಚಿಂತಿಸುತ್ತಾ ಇರುತ್ತೇವೆ. ಆದರೆ ಕೊರೋನ ಪಿಡುಗು ಹಾಗೂ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಷ್ಟ್ರವು ಲಾಕ್‌ಡೌನ್‌ನ ಆಗಿರುವಾಗ, ಜನತೆಯ ಜೀವ ಹಾಗೂ ಜೀವನ ಎರಡೂ ಅಪಾಯದಲ್ಲಿ ಸಿಲುಕಿರುವಾಗ ಆ ಬಗ್ಗೆ ಚಿಂತಿಸುತ್ತಾ ಕೂರುವುದು ತಪ್ಪಾಗುತ್ತದೆ’’ ಎಂದು ಈ ಮೂವರು ಅರ್ಥಶಾಸ್ತ್ರರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ದಿನ ಪತ್ರಿಕೆಗೆ ಬರೆದಿರುವ ಲೇಖನದಲ್ಲಿ ತಿಳಿಸಿದ್ದಾರೆ.

ಭಾರತೀಯ ಆಹಾರ ನಿಗಮದಲ್ಲಿ 2020ರ ಮಾರ್ಚ್‌ನಲ್ಲಿ 77 ದಶಲಕ್ಷ ಟನ್ ಆಹಾರಧಾನ್ಯ ದಾಸ್ತಾನು ಇತ್ತು, ಇದು ಅಗತ್ಯವಿರುವ ದಾಸ್ತಾನಿಗಿಂತ ಮೂರು ಪಟ್ಟು ಅಧಿಕವಾಗಿದೆ. ‘‘ರಾಷ್ಟ್ರೀಯ ತುರ್ತುಸ್ಥಿತಿಯ ಸಮಯದಲ್ಲಿ ಈಗ ಇರುವ ದಾಸ್ತಾನಿನ ಕೆಲವು ಭಾಗವನ್ನು ನೀಡುವುದು ವಿವೇಕಯುತವಾಗಿದೆ’’ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಕೇಂದ್ರ ಸರಕಾರವು ತನ್ನ ದಾಸ್ತಾನಿನ ಮೂಲಕ ಮೂರು ತಿಂಗಳುಗಳ ಅವಧಿಗೆ ಮಾತ್ರವೇ ಹೆಚ್ಚುವರಿ ಪಡಿತರವನ್ನು ವಿತರಿಸಿದರೆ ಸಾಕಾಗದು. ಯಾಕೆಂದರೆ ದೇಶದ ಅರ್ಥಿಕತೆಯು ತನ್ನ ಕಾಲ ಮೇಲೆ ನಿಂತುಕೊಳ್ಳಬೇಕಾದರೆ ಸಾಕಷ್ಟು ಸಮಯದ ಅಗತ್ಯವಿರುತ್ತದೆ. ಇದಕ್ಕಿಂತಲೂ ಮುಖ್ಯವಾಗಿ ದೇಶಾದ್ಯಂತ ಗಣನೀಯ ಸಂಖ್ಯೆಯ ಬಡವರನ್ನು ಒಂದಲ್ಲ ಒಂದು ಕಾರಣದಿಂದಾಗಿ ಪಡಿತರ ವಿತರಣಾ ವ್ಯವಸ್ಥೆಯಿಂದ ಹೊರಗಿಡಲಾಗಿದೆ. ಈಗ ಸರಕಾರ ವಿತರಿಸ ಹೊರಟಿರುವ ಹೆಚ್ಚುವರಿ ಆಹಾರಧಾನ್ಯವು ಪಡಿತರ ಚೀಟಿಯನ್ನು ಹೊಂದಿರುವರಿಗಷ್ಟೇ ದೊರೆಯಲಿದೆಯೆಂದು ಅವರು ಹೇಳಿದ್ದಾರೆ.

ಇದರ ಬದಲಿಗೆ ಸರಕಾರವು ಕನಿಷ್ಠ ಮಟ್ಟದ ಪರಿಶೀಲನೆಯೊಂದಿಗೆ ತಾತ್ಕಾಲಿಕ ಪಡಿತರ ಚೀಟಿಗಳನ್ನು ಆರು ತಿಂಗಳ ಅವಧಿಗೆ ನೀಡಬೇಕೆಂದು ಅವರು ಆಗ್ರಹಿಸಿದರು.

ಲಾಕ್‌ಡೌನ್‌ನಿಂದ ತತ್ತರಿಸಿರುವ ಜನಸಾಮಾನ್ಯರ ಹಸಿವನ್ನು ಹೋಗಲಾಡಿಸುವ ಜೊತೆಗೆ ಕೇಂದ್ರ ಸರಕಾರವು ರೈತರು ಹಾಗೂ ಅಂಗಡಿ ಮಾಲಕರು ಪ್ರಸಕ್ತ ಎದುರಿಸುತ್ತಿರುವ ಅನಿರೀಕ್ಷಿತ ಆದಾಯ ನಷ್ಟವನ್ನು ಬಗೆಹರಿಸಬೇಕೆಂದು ರಘುರಾಮ್ ರಾಜನ್, ಅಭಿಜಿತ್ ಬ್ಯಾನರ್ಜಿ ಹಾಗೂ ಅಮರ್ತ್ಯ ಸೇನ್ ಜಂಟಿ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X