Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಮಝಾನ್ ತಿಂಗಳಲ್ಲಿಯೂ ಲಾಕ್‍ಡೌನ್...

ರಮಝಾನ್ ತಿಂಗಳಲ್ಲಿಯೂ ಲಾಕ್‍ಡೌನ್ ಕಡ್ಡಾಯವಾಗಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ವಾರ್ತಾಭಾರತಿವಾರ್ತಾಭಾರತಿ16 April 2020 11:20 PM IST
share
ರಮಝಾನ್ ತಿಂಗಳಲ್ಲಿಯೂ ಲಾಕ್‍ಡೌನ್ ಕಡ್ಡಾಯವಾಗಿ ಪಾಲಿಸಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಉಡುಪಿ , ಎ.14 : ಕೊರೊನ ಸೋಂಕಿಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ಮೇ 3 ರವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಲಾಕ್ ಡೌನ್ ಮುಗಿಯುವವರೆಗೆ ಮಸೀದಿಗಳಲ್ಲಿ ಎಲ್ಲ ಸಾಮೂಹಿಕ ನಮಾಝ್ ಗಳನ್ನೂ ನಿಲ್ಲಿಸಲು ಸರಕಾರ ಸೂಚನೆ ನೀಡಿದೆ. ಈ ನಡುವೆ ಪ್ರಾರಂಭವಾಗಲಿರುವ  ರಮಝಾನ್ ತಿಂಗಳಲ್ಲೂ  ಲಾಕ್‍ಡೌನ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಅವರು ಕರೆ ನೀಡಿದ್ದಾರೆ. 

ರಾಜ್ಯ ಸರಕಾರ, ರಾಜ್ಯ ವಕ್ಫ್ ಬೋರ್ಡ್ ಹಾಗು ರಾಜ್ಯದ ಅಮೀರೆ ಶರೀಅತ್  ಅವರು ಈಗಾಗಲೇ ಲಾಕ್ ಡೌನ್ ಸಂದರ್ಭದಲ್ಲಿ ಮಸೀದಿಗಳಿಗೆ ತೆರಳದಂತೆ ಕರೆ ನೀಡಿದ್ದಾರೆ. ಸರಕಾರ ಹಾಗು ಸಮುದಾಯದ ಧಾರ್ಮಿಕ ಮುಖಂಡರ ಸೂಚನೆಯನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕೊರೊನ ನಿಯಂತ್ರಣದಲ್ಲಿ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮಸೀದಿಗಳಿಗೆ ತೆರಳದೆ ಪ್ರತಿ ದಿನದ ಐದು ಹೊತ್ತಿನ ನಮಾಝ್ ಅನ್ನು ಮನೆಯಲ್ಲಿ ನಿರ್ವಹಿಸಬೇಕು. ಅಲ್ಲದೆ, ತರಾವೀಹ್ ನಮಾಝ್ ಅನ್ನು ಆಯಾ ಕುಟುಂಬ ಸದಸ್ಯರು ಸೇರಿ ಮನೆಯಲ್ಲಿಯೇ ನಿರ್ವಹಿಸಬೇಕು. ದಿನನಿತ್ಯದ ಅಗತ್ಯ ವಸ್ತುಗಳ ಖರೀದಿ ವಿಚಾರದಲ್ಲಿ ಸರಕಾರ ನೀಡುವ ನಿರ್ದೇಶನಗಳನ್ನು ತಪ್ಪದೆ ಪಾಲಿಸಬೇಕು ಎಂದು ಅವರು ತಿಳಿಸಿದರು.  

ಸರಕಾರ ಸೂಚಿಸಿರುವಂತೆ ಸಹರಿ ಹಾಗೂ ಇಫ್ತಾರ್ ಕೂಟವನ್ನು ಸಂಪೂರ್ಣವಾಗಿ ನಿರ್ಬಂಧಿಸಿ. ರಮಝಾನ್ ಮಾಸದಲ್ಲಿ ಬಡವರು, ಅಗತ್ಯ ಇರುವವರಿಗೆ ನೆರವು ನೀಡಿ. ಝಕಾತ್ ಹಾಗೂ ಸದಖಾ ಮೂಲಕ  ಸಂಬಂಧಿಕರು, ನೆರೆಹೊರೆಯವರು ಹಾಗೂ ನೆರವಿನ ಅಗತ್ಯ ಇರುವಂತಹ ಸರ್ವಧರ್ಮೀಯರಿಗೆ ನೆರವು ನೀಡಿ ಎಂದು ಅವರು ಕರೆ ನೀಡಿದ್ದಾರೆ. 

ಇಫ್ತಾರ್, ತಹಜ್ಜುದ್ ಸಂದರ್ಭದಲ್ಲಿ ನಮ್ಮ ದೇಶ, ಮಾನವ ಕುಲ ಈ ಸಂಕಷ್ಟದ ಪರಿಸ್ಥಿತಿಯಿಂದ ಹೊರ ಬರುವಂತೆ ಪ್ರತಿಯೊಬ್ಬರೂ ಪ್ರಾರ್ಥನೆ ಮಾಡಬೇಕು. ನಮ್ಮ ದೇಶ ಹಾಗೂ ಸಮುದಾಯಕ್ಕೆ ಸಮಸ್ಯೆಯನ್ನುಂಟು ಮಾಡುವಂತಹ ಯಾವುದೇ ಬಗೆಯ ಚಟುವಟಿಕೆಗಳನ್ನು ಮಕ್ಕಳು ಅಥವಾ ಯುವಕರು ಸೇರಿದಂತೆ ಯಾರೂ ಮಾಡದಂತೆ ಪೋಷಕರು, ಕುಟುಂಬದ ಜವಾಬ್ದಾರಿಯುತ ಸದಸ್ಯರು ಗಮನ ಹರಿಸಬೇಕು ಎಂದು ಅವರು ತಿಳಿಸಿದ್ದಾರೆ. 

ಉಡುಪಿ ಜಿಲ್ಲೆಯ ಮುಸ್ಲಿಮರು ಮೊದಲ ಲಾಕ್ ಡೌನ್ ಸಂದರ್ಭದಲ್ಲಿ ಎಲ್ಲ ಸರಕಾರಿ ಸೂಚನೆಗಳನ್ನು ಪಾಲಿಸಿ ಸಂಪೂರ್ಣ ಸಹಕಾರ ನೀಡಿದ್ದಾರೆ. ಜೊತೆಗೆ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಈಗ ಎರಡನೇ ಹಂತದ ಲಾಕ್ ಡೌನ್ ನಲ್ಲೂ ಜಿಲ್ಲೆಯ ಮುಸ್ಲಿಮರು ಅದೇ ರೀತಿ ತಮ್ಮ ಸಹಕಾರವನ್ನು ಮುಂದುವರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X