Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಾಕ್‌ಡೌನ್: ತಲೆ ಎತ್ತಿದ ತರಕಾರಿ ಕಳ್ಳರ...

ಲಾಕ್‌ಡೌನ್: ತಲೆ ಎತ್ತಿದ ತರಕಾರಿ ಕಳ್ಳರ ಜಾಲ!

ಸಮೀರ್ ದಳಸನೂರುಸಮೀರ್ ದಳಸನೂರು17 April 2020 10:18 AM IST
share
ಲಾಕ್‌ಡೌನ್: ತಲೆ ಎತ್ತಿದ ತರಕಾರಿ ಕಳ್ಳರ ಜಾಲ!

ಬೆಂಗಳೂರು, ಎ.16: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರಕಾರ ಲಾಕ್‌ಡೌನ್ ಜಾರಿಗೊಳಿಸಿರುವ ಸಂದರ್ಭವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ದುಷ್ಕರ್ಮಿಗಳು, ರೈತರು ಮಾರುಕಟ್ಟೆಗೆ ಸಾಗಿಸುವ ತರಕಾರಿ ಮೂಟೆಗಳನ್ನು ಕಳವು ಮಾಡುತ್ತಿರುವ ಆರೋಪ ದಿನೇ ದಿನೇ ಹೆಚ್ಚಾಗುತ್ತಿವೆ.

 ರಾಜ್ಯಧಾನಿ ಬೆಂಗಳೂರು ವ್ಯಾಪ್ತಿಯೊಳಗಿನ ಮಾರುಕಟ್ಟೆಗಳಿಗೆ ಹೊರವಲಯದಿಂದ ರೈತರು ತರಕಾರಿಗಳನ್ನು ಸಾಗಿಸಿಕೊಂಡು ಬರುತ್ತಿದ್ದು, ರಾತ್ರಿ ವೇಳೆ ದುಷ್ಕರ್ಮಿಗಳು ಮೂಟೆಗಳನ್ನು ಕಳವು ಮಾಡುತ್ತಿದ್ದಾರೆ. ಲಾಕ್‌ಡೌನ್ ಹಿನ್ನೆಲೆ ತರಕಾರಿಗಳಿಗೆ ಬೇಡಿಕೆ ಇರುವ ಕಾರಣಕ್ಕೆ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ ಎನ್ನುವುದು ರೈತರು ಆರೋಪ.

ಇಲ್ಲಿನ ಸಿಂಗೇನ ಅಗ್ರಹಾರ ಮಾರುಕಟ್ಟೆಯಲ್ಲಿ ಮೂರು ದಿನಗಳ ಹಿಂದೆ, ಬರೋಬ್ಬರಿ 15 ಮೂಟೆ ಕೆಂಪು ಮೂಲಂಗಿ ಕಳವು ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆದರೆ, ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಕಾರಣ ಕೇಳಿದರೆ, ಒಂದೆರಡು ದಿನಕ್ಕಾಗಿ ಬೆಂಗಳೂರಿಗೆ ಬರುವ ನಾವು, ಪೊಲೀಸರಿಗೆ ದೂರು ನೀಡಿದರೆ ನಮಗೆ ತೊಂದರೆ ಆಗುತ್ತದೆ ಎನ್ನುತ್ತಾರೆ ರೈತರು.

ಅದೇ ರೀತಿ, ದಾಸನಪುರ ತರಕಾರಿ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಯಲ್ಲೂ ಇಂತಹ ಪ್ರರಕಣಗಳು ನಡೆಯುತ್ತಲೇ ಇರುತ್ತವೆ. ಈ ಬಗ್ಗೆ ಮಾರುಕಟ್ಟೆ ಮುಖಸ್ಥರಿಗೆ, ಭದ್ರತಾ ಸಿಬ್ಬಂದಿಗೆ ದೂರು ನೀಡಿದರೂ, ನೀವೇ ಜಾಗೃತಿ ವಹಿಸಬೇಕು ಎಂದು ಸಬೂಬು ಹೇಳುತ್ತಾರೆ ಎಂದು ದೊಡ್ಡಬಳ್ಳಾಪುರ ಮೂಲದ ರೈತ ಮಂಜನಾಥ್ ಗೌಡ ನುಡಿದರು.

ಸೌಲಭ್ಯ ಇಲ್ಲ: ಕೊರೋನ ಹಿನ್ನೆಲೆ ಕಲಾಸಿಪಾಳ್ಯದಿಂದ ಬೇರೆ ಕಡೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಇಲ್ಲಿ ಬಂದ ಮೇಲೆ ನಿತ್ಯ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಿದೆ. ಎಪಿಎಂಸಿಯಿಂದ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೂ ಇಲ್ಲಿ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಆದರೆ, ಇಲ್ಲಿ ಕೆಲ ಮಳಿಗೆಗಳಿಗೆ ದೀಪದ ವ್ಯವಸ್ಥೆಯೇ ಇಲ್ಲ. ಇದರ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕು ಎಂದು ಮಾರಾಟಗಾರರ ಆಗ್ರಹವಾಗಿದೆ.

ತರಕಾರಿ ಕಳವು

ಸಿಂಗೇನ ಅಗ್ರಹಾರ ಮಾರುಕಟ್ಟೆಯಲ್ಲಿ ಎರಡು ದಿನಗಳ ಹಿಂದೆ 15 ಚೀಲ ಕ್ಯಾರೆಟ್, 10 ಚೀಲ ಸೇರಿ ಹಲವು ತರಕಾರಿ ಚೀಲ ಕಳ್ಳತನವಾಗಿದೆ. ಬಹುತೇಕ ವರ್ತಕರು ಬೆಂಗಳೂರಿನಿಂದ ಬಂದು ವಹಿವಾಟು ನಡೆಸುತ್ತಿದ್ದಾರೆ. ಮೈದಾನದಲ್ಲಿ ಕೇವಲ ಪೆಂಡಾಲ್ ಹಾಕಿ ಮಾರಾಟಕ್ಕೆ ಅವಕಾಶ ಮಾಡಿ ಕೊಟ್ಟಿರುವುದು ಬಿಟ್ಟರೆ ಯಾವುದೇ ಸೌಕರ್ಯಗಳನ್ನು ಒದಗಿಸಿಲ್ಲ. ಪೊಲೀಸರು ಯಾವುದೋ ಒಂದು ಸಮಯದಲ್ಲಿ ಬಂದು ಹೋಗುತ್ತಾರೆ. ಸಿಸಿ ಕ್ಯಾಮರಾ ವ್ಯವಸ್ಥೆಯೂ ಇಲ್ಲಿಲ್ಲ ಎಂದು ವರ್ತಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಚಾಲಕರ ಸೋಗಿನಲ್ಲಿ ಕಳ್ಳರು

ತರಕಾರಿ ಮೂಟೆಗಳನ್ನು ಮಾರುಕಟ್ಟೆಗೆ ಬಂದ ತಕ್ಷಣ ಮಾರಾಟ ಆಗುವುದಿಲ್ಲ. ಇದಕ್ಕಾಗಿ ಜಾಸ್ತಿ ಸಮಯವೇ ಹಿಡಿಯುತ್ತದೆ.ಇನ್ನೂ, ರಾತ್ರಿ ವೇಳೆಯೇ ಕಳ್ಳತನ ಹೆಚ್ಚಾಗುತ್ತದೆ. ನಾವು ನಿದ್ರೆಗೆ ಜಾರಿದಾಗ ವಾಹನ ಚಾಲಕರ ಸೋಗಿನಲ್ಲಿರುವ ಕಳ್ಳರೇ ನಮ್ಮ ಮೂಟೆಗಳನ್ನು ಕಳ್ಳತನ ಮಾಡುತ್ತಾರೆ ಎಂದು ರೈತ ನಾಗೇಶ್ ದೂರಿದರು.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X