Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19 ಸ್ಯಾಂಪಲ್ ಟೆಸ್ಟಿಂಗ್‌ನಲ್ಲಿ...

ಕೋವಿಡ್-19 ಸ್ಯಾಂಪಲ್ ಟೆಸ್ಟಿಂಗ್‌ನಲ್ಲಿ ಉಡುಪಿ ನಂ.1

ವಾರ್ತಾಭಾರತಿವಾರ್ತಾಭಾರತಿ17 April 2020 8:07 PM IST
share
ಕೋವಿಡ್-19 ಸ್ಯಾಂಪಲ್ ಟೆಸ್ಟಿಂಗ್‌ನಲ್ಲಿ ಉಡುಪಿ ನಂ.1

ಉಡುಪಿ, ಎ.17: ದೇಶಾದ್ಯಂತ ಮಿಂಚಿನ ವೇಗದಲ್ಲಿ ವ್ಯಾಪಿಸುತ್ತಿರುವ ನೋವೆಲ್ ಕೊರೋನ ವೈರಸ್ (ಕೋವಿಡ್-19)ನ ಪತ್ತೆಗಾಗಿ ಸ್ಯಾಂಪಲ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ನಂ.1 ಸ್ಥಾನದಲ್ಲಿದೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ಒಂದು ಲಕ್ಷ ಜನರಲ್ಲಿ 34 ಮಂದಿಯ ಸ್ಯಾಂಪಲ್‌ಗಳ ಪರೀಕ್ಷೆ ನಡೆಯುತ್ತಿರುವುದು ಈ ಕುರಿತ ಅಂಕಿ ಅಂಶಗಳಿಂದ ಗೊತ್ತಾಗಿದ್ದು, ಇದು ಇಡೀ ರಾಜ್ಯದಲ್ಲೇ ಅತ್ಯುತ್ತಮ ಸಾಧನೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19 ಸ್ಯಾಂಪಲ್ ಟೆಸ್ಟ್‌ಗೆ ಸಂಬಂಧಿಸಿದಂತೆ ಇಂದು ಬಿಡುಗಡೆಗೊಂಡ ರಾಜ್ಯದ ಅಂಕಿಅಂಶಗಳಲ್ಲಿ ಈ ಮಾಹಿತಿ ಹೊರಬಿದ್ದಿದೆ. ಜಿಲ್ಲೆಯ ಒಟ್ಟು ಜನಸಂಖ್ಯೆ 11,77,361 ಆಗಿದ್ದರೆ, ಇವರಲ್ಲಿ ಇದುವರೆಗೆ 403 ಮಂದಿಯ ಕೊರೋನ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ. ಇದು ಪ್ರತಿ ಲಕ್ಷ ಜನಸಂಖ್ಯೆಗೆ 34 ಆಗಿದೆ. ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ಎನಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಎರಡನೇ ಸ್ಥಾನ ಬಾಗಲಕೋಟೆ ಜಿಲ್ಲೆಗೆ ಲಭಿಸಿದೆ. 18,89,752 ಜನಸಂಖ್ಯೆಯ ಈ ಜಿಲ್ಲೆಯಲ್ಲಿ ಈವರೆಗೆ 625 ಮಂದಿಯ ಸ್ಯಾಂಪಲ್ ಟೆಸ್ಟ್ ನಡೆಸಿದ್ದು, ಇದು ಲಕ್ಷ ಜನಸಂಖ್ಯೆಗೆ ತಲಾ 33 ಆಗಿದೆ. ಅದೇ ರೀತಿ 979 ಸ್ಯಾಂಪಲ್‌ಗಳ ಪರೀಕ್ಷೆ ನಡೆಸಿರುವ ಮೈಸೂರು ಸಹ ಲಕ್ಷ ಜನರಲ್ಲಿ 33 ಮಂದಿಯ ಪರೀಕ್ಷೆ ನಡೆಸಿದೆ.

ಉಳಿದಂತೆ ಬೆಂಗಳೂರು ಗ್ರಾಮೀಣ (29), ಬೆಂಗಳೂರು (28), ದಕ್ಷಿಣ ಕನ್ನಡ (20,89,649 ಜನಸಂಖ್ಯೆ, 564 ಸ್ಯಾಂಪಲ್, ಲಕ್ಷಕ್ಕೆ 27 ಮಂದಿ), ಚಿಕ್ಕಬಳ್ಳಾಪುರ (26), ಕೋಲಾರ (24), ಧಾರವಾಡ (24), ಉತ್ತರ ಕನ್ನಡ (23) ನಂತರದ ಸ್ಥಾನಗಳಲ್ಲಿವೆ ಎಂದು ಇಲಾಖೆಯ ಮಾಹಿತಿಯಲ್ಲಿ ತಿಳಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಮೂವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದ್ದು, ಇವರಲ್ಲಿ ಇಬ್ಬರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆ ಯಿಂದ ಬಿಡುಗಡೆಗೊಂಡಿದ್ದರೆ, ಒಬ್ಬರು ಈಗ ಚಿಕಿತ್ಸೆಯಲ್ಲಿದ್ದಾರೆ. ಮಾ.29ರ ನಂತರ ಜಿಲ್ಲೆಯಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X