Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್:ಎ.20ರಿಂದ ಇನ್ನಷ್ಟು...

ಲಾಕ್‌ಡೌನ್:ಎ.20ರಿಂದ ಇನ್ನಷ್ಟು ನಿರ್ಬಂಧಗಳು ಸಡಿಲ

ಕೃಷಿ ಕ್ಷೇತ್ರ,ಖಾಸಗಿ ಕಚೇರಿಗಳ ಕಾರ್ಯಾರಂಭಕ್ಕೂ ಅಸ್ತು

ವಾರ್ತಾಭಾರತಿವಾರ್ತಾಭಾರತಿ18 April 2020 10:01 PM IST
share
ಲಾಕ್‌ಡೌನ್:ಎ.20ರಿಂದ ಇನ್ನಷ್ಟು ನಿರ್ಬಂಧಗಳು ಸಡಿಲ

ಹೊಸದಿಲ್ಲಿ,ಎ.18: ದೇಶದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಕನಿಷ್ಠ ಪೀಡಿತವಾಗಿರುವ ಭಾಗಗಳಲ್ಲಿ ಎ.20ರಿಂದ ಕಾರ್ಯಾರಂಭಗೊಳ್ಳಲಿರುವ ವಾಣಿಜ್ಯ ಚಟುವಟಿಕೆಗಳು ಮತ್ತು ಸೇವೆಗಳ ಹೊಸ ಪಟ್ಟಿಯೊಂದನ್ನು ಕೇಂದ್ರ ಸರಕಾರವು ಶನಿವಾರ ಬಿಡುಗಡೆಗೊಳಿಸಿದೆ.

ಪರಿಷ್ಕೃತ ಪಟ್ಟಿಯು ಆಯುಷ್ ಸೇರಿದಂತೆ ಆರೋಗ್ಯ ಸೇವೆಗಳು, ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳು, ಸಾಗರ ಮತ್ತು ಒಳನಾಡು ಮೀನುಗಾರಿಕೆ,ಗರಿಷ್ಠ ಶೇ.50ರಷ್ಟು ಕಾರ್ಮಿಕರೊಂದಿಗೆ ಚಹಾ, ಕಾಫಿ ಮತ್ತು ರಬ್ಬರ್ ತೋಟಗಳ ಚಟುವಟಿಕೆಗಳು ಹಾಗೂ ಪಶು ಸಂಗೋಪನೆಯನ್ನು ಒಳಗೊಂಡಿದೆ.

ಹಣಕಾಸು ಮತ್ತು ಸಾಮಾಜಿಕ ಸೇವಾ ಕ್ಷೇತ್ರಗಳು,ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು,ಹೋಟೆಲ್‌ಗಳು ,ಹೋಮ್‌ಸ್ಟೇಗಳು ಮತ್ತು ಸಣ್ಣ ವಸತಿಗೃಹಗಳಂತಹ ವಾಣಿಜ್ಯಿಕ ಮತ್ತು ಖಾಸಗಿ ಉದ್ಯಮಗಳೂ ಪರಿಷ್ಕೃತ ಪಟ್ಟಿಯಲ್ಲಿವೆ.

 ಸಾರ್ವಜನಿಕರಿಗೆ ತೊಂದರೆಗಳನ್ನು ಕಡಿಮೆ ಮಾಡುವುದು ಈ ಚಟುವಟಿಕೆಗಳ ಉದ್ದೇಶವಾಗಿದೆ, ಆದರೆ ಹಾಲಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯ ಆಧಾರದಲ್ಲಿ ಅವಕಾಶ ನೀಡಲಾಗುವದು ಎಂದು ಎಚ್ಚರಿಕೆ ನೀಡಿರುವ ಸರಕಾರವು, ಕಚೇರಿಗಳು,ಕೆಲಸದ ಸ್ಥಳಗಳು ಮತ್ತು ಫ್ಯಾಕ್ಟರಿಗಳಲ್ಲಿ ಸುರಕ್ಷಿತ ಅಂತರ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶ ನೀಡಿದೆ.

ಎ.20ರಿಂದ ಕಾರ್ಯಾರಂಭಗೊಳ್ಳಲಿರುವ ಚಟುವಟಿಕೆಗಳ ಪಟ್ಟಿಯನ್ನು ಶನಿವಾರ ಟ್ವೀಟಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ನಿಯಂತ್ರಣ ವಲಯಗಳಲ್ಲಿ ಈ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  ಶನಿವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆಯನ್ನು ನಡೆಸಿದ ಸಚಿವರ ಸಮಿತಿಯು,ಗೃಹ ಸಚಿವಾಲಯವು ಎ.15ರಂದು ಬಿಡುಗಡೆಗೊಳಿಸಿದ್ದ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ತಿಳಿಸಿದೆ. ಈ ಚಟುವಟಿಕೆಗಳಿಗೆ ಅನುಮತಿ ನೀಡುವಲ್ಲಿ ಅಂತಿಮ ನಿರ್ಧಾರ ಆಯಾ ರಾಜ್ಯ ಸರಕಾರಗಳದ್ದೇ ಆಗಿರುತ್ತದೆ ಮತ್ತು ಅಗತ್ಯವಾದರೆ ಅವು ಕಠಿಣ ನಿರ್ಬಂಧಗಳನ್ನು ಹೇರಬಹುದು ಎಂದೂ ಸಮಿತಿಯು ತಿಳಿಸಿದೆ.

 ಸರಕಾರವು ಈ ವಾರ ಬಿಡುಗಡೆಗೊಳಿಸಿದ್ದ ಮೊದಲ ಪಟ್ಟಿಯು ಎ.20ರಿಂದ ಇ-ಕಾಮರ್ಸ್ ಜಾಲತಾಣಗಳ ಮೂಲಕ ಮೊಬೈಲ್ ಫೋನ್‌ಗಳು,ಟಿವಿ ಮತ್ತು ಫ್ರಿಜ್‌ಗಳು, ಲ್ಯಾಪ್‌ಟಾಪ್‌ಗಳು, ಬಟ್ಟೆಗಳು, ಶಾಲಾಮಕ್ಕಳ ಸ್ಟೇಷನರಿ ವಸ್ತುಗಳು ಇತ್ಯಾದಿಗಳ ಮಾರಾಟವನ್ನು ಒಳಗೊಂಡಿತ್ತು. ಅಗತ್ಯ ಸೇವೆಗಳೆಂದು ಗುರುತಿಸಲಾದ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಾಗೂ ಇತರ ಕೆಲವು ವಾಣಿಜ್ಯಿಕ ಚಟುವಟಿಕೆಗಳಿಗೂ ಅನುಮತಿಯನ್ನು ನೀಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X