Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್: 1.3 ಲಕ್ಷ ಕರೆಗಳು...

ಲಾಕ್‍ಡೌನ್: 1.3 ಲಕ್ಷ ಕರೆಗಳು ಸ್ವೀಕರಿಸಿದ ಪೊಲೀಸ್ ಸಹಾಯವಾಣಿ

ವಾರ್ತಾಭಾರತಿವಾರ್ತಾಭಾರತಿ18 April 2020 11:23 PM IST
share
ಲಾಕ್‍ಡೌನ್: 1.3 ಲಕ್ಷ ಕರೆಗಳು ಸ್ವೀಕರಿಸಿದ ಪೊಲೀಸ್ ಸಹಾಯವಾಣಿ

ಬೆಂಗಳೂರು, ಎ.18: ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಸಹಾಯವಾಣಿ ನಮ್ಮ-100ಕ್ಕೆ ಇದುವರೆಗೂ 1.03 ಲಕ್ಷಕ್ಕೂ ಅಧಿಕ ಕರೆಗಳು ಬಂದಿದ್ದು, ಈ ಪೈಕಿ ಕುಡುಕರ ಕರೆಗಳೇ ಅಧಿಕವಾಗಿವೆ.

ಸಾಮಾನ್ಯವಾಗಿ ಗಲಾಟೆ-ಗದ್ದಲ, ಅಪರಾಧವಾದಾಗ ಕಂಟ್ರೋಲ್‍ ರೂಂಗೆ ಕರೆ ಮಾಡುತ್ತಿದ್ದರು. ಆದರೆ, ಇದೀಗ ಕೊರೋನ ಸಂಬಂಧಿಸಿದ ಕರೆಗಳೇ ಅಧಿಕವಾಗುತ್ತಿವೆ. ಅದರಲ್ಲಿ ಕುಡುಕರು ಕರೆ ಮಾಡಿ ದಯವಿಟ್ಟು ನಮಗೆ ಮದ್ಯ ಕೊಡಿಸಿ, ಇಲ್ಲವಾದರೆ ಬದುಕಲು ಸಾಧ್ಯವಾಗುತ್ತಿಲ್ಲ ಎಂದು ಗೋಳಾಡುತ್ತಿದ್ದಾರೆ ಎಂದು ಕಂಟ್ರೋಲ್‍ ರೂಂ ಸಿಬ್ಬಂದಿಯೊಬ್ಬರು ಹೇಳಿದ್ದಾರೆ.

ಹೆಲ್ಪ್ ಲೈನ್ ದುರ್ಬಳಕೆ: ತುರ್ತು ಸೇವೆ ಒದಗಿಸುವ ಹೆಲ್ಪ್ ಲೈನ್‍ಗಳನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನಗತ್ಯವಾಗಿ ಕರೆ ಮಾಡಿ ಬಾರ್ ಯಾವಾಗ ಓಪನ್ ಆಗುತ್ತವೆ, ನೀವು ಯಾವಾಗ ಓಪನ್ ಮಾಡಿಸುತ್ತೀರಿ ಎಂದೆಲ್ಲಾ ಕೇಳುವವರ ಸಂಖ್ಯೆ ಅಧಿಕವಾಗುತ್ತಿದೆ. ಊಟದ ಬಳಿಕ ಬಾಳೆಹಣ್ಣು ತಿನ್ನಬೇಕು, ಹೀಗಾಗಿ, ಬಾಳೆಹಣ್ಣು ತಂದುಕೊಡಲು ಸಾಧ್ಯವಾ ಎಂದೆಲ್ಲಾ ಕೇಳುತ್ತಿದ್ದಾರೆ.

ಕೋವಿಡ್ 19 ದೂರು: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಕಂಟ್ರೋಲ್‍ರೂಂಗೆ ಪ್ರತಿದಿನ ನಾಲ್ಕು ಸಾವಿರಕ್ಕೂ ಅಧಿಕ ಕರೆಗಳು ಬರುತ್ತವೆ. ಸಾಮಾನ್ಯ ದಿನಗಳಲ್ಲಿ ಕಾನೂನು ಸುವ್ಯವಸ್ಥೆ, ರಸ್ತೆ ಅಪಘಾತ ಸೇರಿದಂತೆ ಕರೆ ಮಾಡುತ್ತಿದ್ದರು. ಇದೀಗ ಸಾರ್ವಜನಿಕರು ಕೊರೋನದಿಂದಾಗಿ ಆಗಿರುವ ಸಮಸ್ಯೆಗಳ ಬಗ್ಗೆ ಕರೆ ಮಾಡಿ ದೂರು ನೀಡುತ್ತಿದ್ದಾರೆ. ಕೊರೋನ ಸಂಬಂಧಿತ ಕರೆಗಳ ಜತೆ ಅಪರಾಧಕ್ಕೂ ಸಂಬಂಧಿಸಿದ ಕರೆಗಳು ಬರುತ್ತಿವೆ.

714 ಮಂದಿ ಸೇವೆ: ಲಾಕ್‍ಡೌನ್ ಘೋಷಣೆಯಿಂದ ಹಿರಿಯ ನಾಗರಿಕರು ಆಸ್ಪತ್ರೆಗೆ ಹೋಗಲಾರದಂತಹ ಪರಿಸ್ಥಿತಿ ಕಂಡು ಆಯುಕ್ತ ಭಾಸ್ಕರ್ ರಾವ್ ಎ.4 ರಿಂದ ಹಿರಿಯ ನಾಗರಿಕರ ತುರ್ತು ವೈದ್ಯಕೀಯ ಸೇವೆ ಹೊಯ್ಸಳ ಸೇವೆ ಪ್ರಾರಂಭಿಸಿದ್ದರು. ಅದರಂತೆ ಇದುವರೆಗೂ 714 ಮಂದಿ ಪೊಲೀಸ್ ಸೇವೆ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X