Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒತ್ತಡದಲ್ಲಿ ಆಡುವಾಗ ಕಣ್ಣೀರು ಹಾಕಿದ್ದೆ...

ಒತ್ತಡದಲ್ಲಿ ಆಡುವಾಗ ಕಣ್ಣೀರು ಹಾಕಿದ್ದೆ : ಸುನೀಲ್ ಚೆಟ್ರಿ

ವಾರ್ತಾಭಾರತಿವಾರ್ತಾಭಾರತಿ19 April 2020 1:46 PM IST
share
ಒತ್ತಡದಲ್ಲಿ ಆಡುವಾಗ ಕಣ್ಣೀರು ಹಾಕಿದ್ದೆ : ಸುನೀಲ್ ಚೆಟ್ರಿ

ಹೊಸದಿಲ್ಲಿ, ಎ.19: ‘‘ತನ್ನ ವೃತ್ತಿಜೀವನದ ಆರಂಭದಲ್ಲಿ ಕೋಲ್ಕತಾದಲ್ಲಿ ಫುಟ್ಬಾಲ್ ಪಂದ್ಯ ಆಡುತ್ತಿದ್ದಾಗ ಹೆಚ್ಚಿನ ಒತ್ತಡದಲ್ಲಿದ್ದೆ. ಹಲವು ಬಾರಿ ಕಣ್ಣೀರಿಟ್ಟಿದ್ದೆ. ಒಂದು ಹಂತದಲ್ಲಿ ಕ್ರೀಡೆಯನ್ನು ತ್ಯಜಿಸುವ ಯೋಚನೆಯನ್ನು ಮಾಡಿದ್ದೆ’’ಎಂದು ಭಾರತದ ಓರ್ವ ಶ್ರೇಷ್ಠ ಫುಟ್ಬಾಲ್ ಆಟಗಾರ ಸುನೀಲ್ ಚೆಟ್ರಿ ಬಹಿರಂಗಪಡಿಸಿದರು.

ಚೆಟ್ರಿ ತನ್ನ 17ನೇ ವಯಸ್ಸಿನಲ್ಲಿ ಕೋಲ್ಕತಾದ ಪ್ರಮುಖ ಫುಟ್ಬಾಲ್ ಕ್ಲಬ್ ಮೋಹನ್ ಬಗಾನ್ ಪರ ಮೊದಲ ವೃತ್ತಿಪರ ಒಪ್ಪಂದಕ್ಕೆ ಸಹಿ ಹಾಕಿದ್ದರು. ಕಿರಿಯ ವಯಸ್ಸಿನಲ್ಲಿ ಒತ್ತಡದಿಂದ ಹೊರಬರುವುದು ಅವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು.

 ‘‘ಮೊದಲ ವರ್ಷ ಚೆನ್ನಾಗಿತ್ತು. ಪಂದ್ಯಗಳಲ್ಲಿನ 20 ಅಥವಾ 30 ನಿಮಿಷಗಳ ವಿರಾಮವನ್ನು ಬಳಸಿಕೊಳ್ಳುತ್ತಿದ್ದೆ. ನಾನು ಭವಿಷ್ಯದ ಭೈಚುಂಗ್ ಭುಟಿಯಾ ಎಂದು ಜನರು ಹೊಗಳಾರಂಭಿಸಿದ್ದರು. ಕೋಲ್ಕತಾದಲ್ಲಿನ ಫುಟ್ಬಾಲ್ ನಿಮಗೆ ಬೇಗನೆ ಪಾಠ ಕಲಿಸುತ್ತದೆ’’ಎಂದರು.

‘‘ನೀವು ಸೋಲಲು ಆರಂಭಿಸಿದರೆ ಜನರು ಸಹಿಸಿಕೊಳ್ಳುತ್ತಿರಲಿಲ್ಲ. ಆಗ ನಾನು ಅಳುತ್ತಿದ್ದೆ. ಕೋಲ್ಕತಾದಲ್ಲಿ ಸೋಲು ಒಂದು ಆಯ್ಕೆಯಲ್ಲ. ಹಲವು ಆಟಗಾರರು ಫುಟ್ಬಾಲ್‌ನ್ನು ತ್ಯಜಿಸಿದ್ದರು. ನನ್ನನ್ನು ಬೆಚ್ಚಿಬೀಳಿಸಿದ ಉದಾಹರಣೆಗಳಿವೆ. ಒಮ್ಮೆ ನಾನು ತಂದೆಯನ್ನು ಮನೆಗೆ ತೆರಳುವಂತೆ ಹೇಳಿದ್ದೆ. ನಾನು ಫುಟ್ಬಾಲ್‌ನ್ನು ತ್ಯಜಿಸುವ ಯೋಚನೆ ಮಾಡಿದ್ದೆ. ಆದರೆ ನನ್ನ ಕುಟುಂಬ ಬೆಂಬಲಕ್ಕೆ ನಿಂತಿತ್ತು. ಹೀಗಾಗಿ ಈ ಕ್ರೀಡೆಯಲ್ಲಿ ಮುಂದುವರಿದಿದ್ದೇನೆ’’ಎಂದು 35ರ ಹರೆಯದ ಚೆಟ್ರಿ ಹೇಳಿದ್ದಾರೆ.

‘‘ನನಗೆ ಕುಟುಂಬ ಸದಸ್ಯರು ಸಾಕಷ್ಟು ಬೆಂಬಲ ನೀಡಿದ್ದಾರೆ. ಪ್ರತಿ ಬಾರಿಯೂ ನನ್ನ ತಂದೆ ನನ್ನೊಂದಿಗೆ ಇರುತ್ತಿದ್ದರು. ನಾವಿಬ್ಬರೂ ಮಾತನಾಡಿದ ಬಳಿಕ ಎಲ್ಲವೂ ಸುಲಭವಾಗುತ್ತಿತ್ತು. ಇದೀಗ ನಾನು 18 ವರ್ಷಗಳಿಂದ ಫುಟ್ಬಾಲ್ ಆಡುತ್ತಿದ್ದೇನೆ’’ಎಂದು ಚೆಟ್ರಿ ಹೇಳಿದರು.

ಚೆಟ್ರಿ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರಣ ಸಿಕಂದರಾಬಾದ್‌ನಲ್ಲಿ ಚೆಟ್ರಿ ಜನಿಸಿದ್ದರು. ಆ ಬಳಿಕ ಹೊಸದಿಲ್ಲಿಯಲ್ಲಿ ಚೆಟ್ರಿ ಕುಟುಂಬ ನೆಲೆ ನಿಂತಿತ್ತು. ಚೆಟ್ರಿ ತಾಯಿ ನೇಪಾಳ ರಾಷ್ಟ್ರೀಯ ತಂಡದ ಪರ ಆಡಿದ್ದರು. ಚೆಟ್ರಿಯ ತಂದೆ ತನ್ನ ಬೆಟಾಲಿಯನ್ ತಂಡದಲ್ಲಿದ್ದರು.

‘‘ನನಗೆ ಕ್ರೀಡೆ ಕಷ್ಟವೆನಿಸಲಿಲ್ಲ. ನಾನು ಹಲವಾರು ಕ್ರೀಡೆಗಳನ್ನು ಆಡುತ್ತಿದ್ದೆ. ನನ್ನ ಕೈ-ಕಣ್ಣಿನ ಸಮನ್ವಯಕ್ಕೆ ಹಲವು ಕ್ರೀಡೆಗಳು ನೆರವಿಗೆ ಬಂದಿದೆ ಎಂದು ಈಗ ಅರ್ಥವಾಗುತ್ತಿದೆ. ನನ್ನ ತಾಯಿಯೇ ನನ್ನ ದೊಡ್ಡ ಸ್ಪರ್ಧಿಯಾಗಿದ್ದರು. ಚೈನೀಸ್ ಚೆಕರ್ಸ್, ಚೆಸ್, ಕೇರಂ, ವಾಲಿಬಾಲ್, ಬ್ಯಾಡ್ಮಿಂಟನ್, ಫುಟ್ಬಾಲ್ ಹಾಗೂ ಕುಸ್ತಿ ಸ್ಪರ್ಧೆಯಲ್ಲಿ ಅಮ್ಮನನ್ನು ಸೋಲಿಸಲು ಯತ್ನಿಸುತ್ತಿದ್ದೆ’’ ಎಂದು ಪೋರ್ಚುಗಲ್ ಸೂಪರ್‌ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಬಳಿಕ ವಿಶ್ವದಲ್ಲಿ ಸಕ್ರಿಯ ಫುಟ್ಬಾಲ್ ಆಟಗಾರರ ಪೈಕಿ ಗರಿಷ್ಠ ಗೋಲು ಗಳಿಸಿದ ಎರಡನೇ ಆಟಗಾರನಾಗಿರುವ ಚೆಟ್ರಿ ಹೇಳಿದರು.

ಚೆಟ್ರಿ 2005ರಲ್ಲಿ ಪಾಕಿಸ್ತಾನ ವಿರುದ್ಧ ಆಡುವುದರೊಂದಿಗೆ ಅಂತರ್‌ರಾಷ್ಟ್ರೀಯ ಫುಟ್ಬಾಲ್‌ಗೆ ಕಾಲಿಟ್ಟಿದ್ದರು. ಭುಟಿಯಾ ಹಾಗೂ ರೆನೆಡಿ ಸಿಂಗ್ ಅವರು ಚೆಟ್ರಿಗೆ ರಾಷ್ಟ್ರೀಯ ತಂಡದಲ್ಲಿ ಆರಂಭಿಕ ದಿನಗಳಲ್ಲಿ ಅನಗತ್ಯ ಒತ್ತಡ ಉಂಟಾಗದಂತೆ ನೋಡಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X