Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ರೋಗಿಗಳ ದಾಖಲಾತಿಗೆ ಕೋವಿಡ್-19...

ಮುಸ್ಲಿಂ ರೋಗಿಗಳ ದಾಖಲಾತಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ ಎಂದ ಆಸ್ಪತ್ರೆಯ ವಿರುದ್ಧ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 April 2020 9:38 PM IST
share
ಮುಸ್ಲಿಂ ರೋಗಿಗಳ ದಾಖಲಾತಿಗೆ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯ ಎಂದ ಆಸ್ಪತ್ರೆಯ ವಿರುದ್ಧ ಪ್ರಕರಣ

ಮೀರತ್,ಎ.19: ಉತ್ತರ ಪ್ರದೇಶದ ಮೀರತ್‌ನ ಖಾಸಗಿ ಕ್ಯಾನ್ಸರ್ ಆಸ್ಪತ್ರೆಯೊಂದು ಶುಕ್ರವಾರ ಸ್ಥಳೀಯ ವೃತ್ತಪತ್ರಿಕೆಯಲ್ಲಿ ಜಾಹೀರಾತನ್ನು ಪ್ರಕಟಿಸಿ,ಕೊರೋನ ವೈರಸ್ ಸೋಂಕು ಇಲ್ಲವೆಂಬ ಪರೀಕ್ಷಾ ವರದಿಯನ್ನು ತರದ ಹೊಸ ಮುಸ್ಲಿಂ ರೋಗಿಗಳನ್ನು ದಾಖಲು ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ನಂತರ ಪೊಲೀಸರು ಆಸ್ಪತ್ರೆಯ ಮಾಲಿಕರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಹೊಸ ಮುಸ್ಲಿಮ್ ರೋಗಿಗಳು ಮತ್ತು ಅವರನ್ನು ನೋಡಿಕೊಳ್ಳುವವರು ಕೊರೋನ ವೈರಸ್ ನೆಗೆಟಿವ್ ಪರೀಕ್ಷಾ ವರದಿಗಳನ್ನು ಸಲ್ಲಿಸದಿದ್ದರೆ ಅವರನ್ನು ದಾಖಲು ಮಾಡಿಕೊಳ್ಳುವುದಿಲ್ಲ ಎಂದು ವೆಲೆಂಟಿಸ್ ಹಾಸ್ಪಿಟಲ್ ತನ್ನ ಜಾಹೀರಾತಿನಲ್ಲಿ ತಿಳಿಸಿತ್ತು.

  ಹಲವಾರು ರೋಗಿಗಳು ಮಾಸ್ಕ್ ಬಳಕೆಯಂತಹ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಮತ್ತು ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ಇತರ ರೋಗಿಗಳ ಸುರಕ್ಷತೆಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದಿರುವ ಜಾಹೀರಾತು, ಕೆಲವು ಮುಸ್ಲಿಮರ ಅಜ್ಞಾನದಿಂದಾಗಿ ಪ್ರತಿಯೊಬ್ಬರೂ ತೊಂದರೆ ಅನುಭವಿಸುವಂತಾಗಿದೆ. ಆದರೆ ಆಸ್ಪತ್ರೆಯ ನಿರ್ಧಾರವು ಸಾರ್ವಜನಿಕರ ಮತ್ತು ಮುಸ್ಲಿಂ ಬಾಂಧವರ ಹಿತಾಸಕ್ತಿಯಿಂದ ಕೂಡಿದೆ. ಆಸ್ಪತ್ರೆಯು ರೋಗಿಗಳ ನಡುವೆ ಯಾವುದೇ ತಾರತಮ್ಯ ಮಾಡುವುದಿಲ್ಲ ಮತ್ತು ಅದು ಈ ಹಿಂದೆ ಹಲವಾರು ಮುಸ್ಲಿಮರಿಗೆ ಚಿಕಿತ್ಸೆ ನೀಡಿದೆ ಎಂದು ಸಮಜಾಯಿಷಿ ಕೊಟ್ಟಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವವರನ್ನು ದಾಖಲಿಸಿಕೊಳ್ಳಲಾಗುವುದು. ಆದರೆ ಅವರ ಗಂಟಲಿನ ದ್ರಾವಣವನ್ನು ಪರೀಕ್ಷೆಗಾಗಿ ಮೀರತ್ ಮೆಡಿಕಲ್ ಕಾಲೇಜಿಗೆ ಕಳಹಿಸಲಾಗುವುದು ಮತ್ತು ರೋಗಿಗಳು 4,500 ರೂ.ಪರೀಕ್ಷಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದಿರುವ ಜಾಹೀರಾತು,ಮುಸ್ಲಿಮ್ ವೈದ್ಯರು,ಅರೆ ವೈದ್ಯಕೀಯ ಸಿಬ್ಬಂದಿಗಳು, ನ್ಯಾಯಾಧೀಶರು, ಪೊಲೀಸ್ ಸಿಬ್ಬಂದಿಗಳು ,ಶಿಕ್ಷಕರು ಮತ್ತು ನಿಬಿಡ ಜನಸಾಂದ್ರತೆಯ ಪ್ರದೇಶಗಳಲ್ಲಿ ವಾಸವಿರದವರಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ ಎಂದಿದೆ.

ಮೀರತ್‌ನ ಕೋವಿಡ್-19 ರೋಗಿಗಳು ಮಾರ್ಚ್‌ನಲ್ಲಿ ದಿಲ್ಲಿಯಲ್ಲಿ ನಡೆದಿದ್ದ ತಬ್ಲೀಗಿ ಜಮಾತ್ ಸಮಾವೇಶದೊಂದಿಗೆ ಗುರುತಿಸಿಕೊಂಡಿದ್ದಾರೆ ಎಂದೂ ಆಸ್ಪತ್ರೆಯು ಹೇಳಿದೆ.

ಕುತೂಹಲದ ವಿಷಯವೆಂದರೆ ಇದೇ ಜಾಹೀರಾತಿನಲ್ಲಿ ಹಿಂದು ಮತ್ತು ಜೈನರನ್ನೂ ಗುರಿಯಾಗಿಸಿಕೊಳ್ಳಲಾಗಿದೆ. ಇವೆರಡೂ ಸಮುದಾಯಗಳ ಶ್ರೀಮಂತ ವರ್ಗಗಳನ್ನು ‘ಜಿಪುಣರು’ಎಂದು ಆರೋಪಿಸಿರುವ ಆಸ್ಪತ್ರೆಯು ಪ್ರಧಾನಿ ನರೇಂದ್ರ ಮೋದಿಯವರ ಪಿಎಂ ಕೇರ್ಸ್ ಫಂಡ್‌ಗೆ ದೇಣಿಗೆಗಳನ್ನು ನೀಡುವಂತೆ ಆಗ್ರಹಿಸಿದೆ.

ಜಾಹೀರಾತಿಗೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಸ್ಪತ್ರೆಯು ಇನ್ನೊಂದು ಜಾಹೀರಾತನ್ನು ಪ್ರಕಟಿಸಿ ಸ್ಪಷ್ಟನೆಯನ್ನು ನೀಡಿದೆ. ಆದರೆ ಆಸ್ಪತ್ರೆಯ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X