Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಲಸೆ ಕಾರ್ಮಿಕರ ಬವಣೆ ತಪ್ಪಿಸುವಲ್ಲಿ...

ವಲಸೆ ಕಾರ್ಮಿಕರ ಬವಣೆ ತಪ್ಪಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲ : ಡಿವೈಎಫ್‌ಐ

ವಾರ್ತಾಭಾರತಿವಾರ್ತಾಭಾರತಿ19 April 2020 10:22 PM IST
share

ಮಂಗಳೂರು, ಎ.19: ದ.ಕ.ಜಿಲ್ಲೆಯಲ್ಲಿ ವಲಸೆ ಕಾರ್ಮಿಕರು ಭಾರೀ ಸಂಖ್ಯೆಯಲ್ಲಿದ್ದು, ಲಾಕ್‌ಡೌನ್ ಸಂದರ್ಭ ಅವರ ವಸತಿಗಳನ್ನು ಗುರುತಿಸಿ ಆಹಾರ, ಪಡಿತರ ತಲುಪಿಸುವಲ್ಲಿ ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಕಾರ್ಮಿಕ ಇಲಾಖೆಯ ಅಧಿಕಾರಿಗಳು ವಲಸೆ ಕಾರ್ಮಿಕರನ್ನು ಪೂರ್ಣವಾಗಿ ಕಡೆಗಣಿಸಿದ್ದಾರೆ. ಇದರಿಂದ ವಲಸೆ ಕಾರ್ಮಿಕರು ಆಹಾರ ಧಾನ್ಯಗಳಿಗೆ ಪರದಾಡುತ್ತಿದ್ದು, ದಾನಿಗಳನ್ನು ಹುಡುಕಿ ಕಂಡ ಕಂಡವರಲ್ಲಿ ಗೋಗರೆಯುವಂತಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಜಿಲ್ಲಾ ಕೇಂದ್ರ ಮಂಗಳೂರು ಸಹಿತ ಸೇರಿದಂತೆ ವಿವಿಧೆಡೆ ರಾಜ್ಯ ಮತ್ತು ಹೊರ ರಾಜ್ಯಗಳ ಸಾವಿರಾರು ವಲಸೆ ಕಾರ್ಮಿಕರಿದ್ದಾರೆ. ಲಾಕ್‌ಡೌನ್ ಸಂದರ್ಭ ಎಲ್ಲಾ ವಲಸೆ ಕಾರ್ಮಿಕರಿಗೂ ಊಟ, ವಸತಿಯ ಭರವಸೆ ನೀಡಲಾಗಿತ್ತು. ಇದ್ದಲ್ಲಿಯೇ ಇದ್ದು ಸುರಕ್ಷಿತ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿತ್ತು. ಮನೆ, ಶೆಡ್‌ಗಳ ಬಾಡಿಗೆ ವಿನಾಯತಿ, ಗುತ್ತಿಗೆದಾರರು, ಬಿಲ್ಡರ್‌ಗಳಲ್ಲಿ ಅವರ ಕೈಕೆಳಗೆ ದುಡಿಯುವ ವಲಸೆ ಕಾರ್ಮಿಕರಿಗೆ ಆಹಾರ ಪೂರೈಸುವಂತೆ ಹೇಳಲಾಗಿತ್ತು. ಆದರೆ ಲಾಕ್‌ಡೌನ್ ಶುರುವಾಗಿ ಒಂದು ತಿಂಗಳು ಪೂರ್ಣಗೊಳ್ಳುತ್ತಿದ್ದರೂ ಇನ್ನೂ ವಲಸೆ ಕಾರ್ಮಿಕರ ವಸತಿಗಳನ್ನು ಗುರುತಿಸುವಲ್ಲಿ ಕಾರ್ಮಿಕ ಇಲಾಖೆ ಪೂರ್ಣವಾಗಿ ವಿಫಲಗೊಂಡಿದೆ. ಕೆಲವು ವಸತಿಗಳಿಗಷ್ಟೆ ಆರಂಭದಲ್ಲಿ ಜಿಲ್ಲಾಡಳಿತ, ಪಾಲಿಕೆಯ ವತಿಯಿಂದ ದಿನಸಿಯ ಸಣ್ಣ ಕಿಟ್, ಸಿದ್ದಪಡಿಸಿದ ಆಹಾರ ದೊರಕಿತ್ತು. ಕೆಲವು ಗುತ್ತಿಗೆದಾರರು ತಮ್ಮ ಅಧೀನದ ಕಾರ್ಮಿಕರಿಗೆ ಆಹಾರಧಾನ್ಯ ಪೂರೈಸಿದ್ದು ಬಿಟ್ಟರೆ ಹೆಚ್ಚಿನ ಕಾರ್ಮಿಕರು ಆಹಾರಕ್ಕಾಗಿ ಕಂಡ ಕಂಡವರಲ್ಲಿ ಕೈಚಾಚುವ, ದಾನಿಗಳಿಗಾಗಿ ಕಾಯುವ ಸ್ಥಿತಿ ಇದೆ. ನಗರ ಪಾಲಿಕೆ ಸಿದ್ದಪಡಿಸಿ ನೀಡುತ್ತಿದ್ದ ಆಹಾರ ಸ್ಥಗಿತಗೊಂಡು ವಾರಗಳು ಕಳೆದಿದೆ. ಹೆಚ್ಚಿನ ಕಾರ್ಮಿಕರಿಗೆ ಜಿಲ್ಲಾಡಳಿತದ ವಾರ್‌ರೂಂ ಕುರಿತು ಅರಿವಿಲ್ಲ. ವಾರ್‌ರೂಂ ಸಂಪರ್ಕಿಸಿದರೂ ಹೆಚ್ಚಿನ ಸಂದರ್ಭದಲ್ಲಿ ನೆರವು ದೊರಕುತ್ತಿಲ್ಲ ಎಂದು ವಲಸೆ ಕಾರ್ಮಿಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಲಾಕ್‌ಡೌನ್ ಅವಧಿಯ ದಿನಗಳು ವಿಸ್ತರಣೆಗೊಂಡ ಈ ಸಂದರ್ಭ ವಲಸೆ ಕಾರ್ಮಿಕರ ಸಮಸ್ಯೆ ಬಿಗಡಾಯಿಸುತ್ತಿದೆ. ಉಳಿತಾಯದ ಹಣ, ಮಾಲಕರ ನೆರವು ನಿಂತು ಹಸಿವಿನಿಂದ ಕಂಗೆಡುವ ಸ್ಥಿತಿ ವಲಸೆ ಕಾರ್ಮಿಕರ ವಸತಿಗಳಲ್ಲಿ ಕಂಡು ಬರುತ್ತಿದೆ. ಕಾರ್ಮಿಕ ಇಲಾಖೆ ತಕ್ಷಣ ವಲಸೆ ಕಾರ್ಮಿಕರ ವಸತಿಗಳ ವಿವರಗಳನ್ನು ಗ್ರಾಮ, ವಾರ್ಡ್‌ವಾರು ಸಂಗ್ರಹಿಸಬೇಕು. ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿ ಸಹಿತ ಜಿಲ್ಲಾಡಳಿತದ ನಿಧಿಗಳ ಮೂಲಕ ವಲಸೆ ಕಾರ್ಮಿಕರಿಗೆ ಆಹಾರ, ದಿನಸಿ ವ್ಯವಸ್ಥಿತ ರೀತಿಯಲ್ಲಿ ತಲುಪುವಂತೆ ಮಾಡಬೇಕು ಎಂದು ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X