Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನಾಗೆ ಚೀನಾ ಜವಾಬ್ದಾರಿಯಾಗಿದ್ದರೆ...

ಕೊರೋನಾಗೆ ಚೀನಾ ಜವಾಬ್ದಾರಿಯಾಗಿದ್ದರೆ ಪರಿಣಾಮ ಎದುರಿಸಲೇಬೇಕು: ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ19 April 2020 10:55 PM IST
share
ಕೊರೋನಾಗೆ ಚೀನಾ ಜವಾಬ್ದಾರಿಯಾಗಿದ್ದರೆ ಪರಿಣಾಮ ಎದುರಿಸಲೇಬೇಕು: ಟ್ರಂಪ್

ವಾಶಿಂಗ್ಟನ್,ಎ.20:ಕೊರೋನಾ ವೈರಸ್ ಹಾವಳಿಯನ್ನು ನಿಯಂತ್ರಿಸಲು ಹೆಣಗಾಡುತ್ತಿರುವ ಅಮೆರಿಕವು ಈ ಭೀಕರ ಸೋಂಕುರೋಗದ ಉಗಮಸ್ಥಾನ ವಾಗಿರುವ ಚೀನಾದ ವಿರುದ್ಧ ಶನಿವಾರ ಕಿಡಿಕಾರಿದೆ.

ಒಂದು ವೇಳೆ ಕೊರೋನಾ ವೈರಸ್ ಸೋಂಕಿನ ಹರಡುವುದಕ್ಕೆ ಚೀನಾವು ಜವಾಬ್ದಾರನಾಗಿದ್ದರೆ ಅದರ ಪರಿಣಾಮವನ್ನು ಅದು ಎದುರಿಸಬೇಕಾದೀತೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಶ್ವೇತಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ‘‘ಒಂದು ವೇಳೆ ಅವರು (ಚೀನಾ) ಗೊತ್ತಿದ್ದೂ ಗೊತ್ತಿದ್ದೂ ಕೊರೋನಾ ವೈರಸ್ ಹರಡಲು ಜವಾಬ್ದಾರರಾಗಿದ್ದಲ್ಲಿ ಅದರ ಪರಿಣಾಮವನ್ನವರು ಎದುರಿಸಲೇಬೇಕು. 1917ರಿಂದೀಚೆಗೆ ಯಾರೂ ಕಂಡು ಕೇಳರಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊವೀಡ್ 19 ಹರಡುವಿಕೆಗೆ ಮುನ್ನ ಚೀನಾದ ಜೊತೆಗೆ ಅಮೆರಿಕದ ಸಂಬಂಧ ಉತ್ತಮವಾಗಿತ್ತು. ಆದರೆ ಈಚೆಗೆ ಹಠಾತ್ತನೇ ಈ ಸಂಬಂಧದಲ್ಲಿ ತುಂಬಾ ವ್ಯತ್ಯಾಸವಾಗಿದೆ’’ ಎಂದು ಅವರು ಹೇಳಿದರು.

 “ಚೀನಾದ ಬಗ್ಗೆ ನೀವು ತುಂಬಾ ಆಕ್ರೋಶಗೊಂಡಿದ್ದೀರೇ” ಎಂಬ ಸುದ್ದಿಗಾರರ ಪ್ರಶ್ನೆಗೆ ಹೌದೆಂದು ಉತ್ತರಿಸಿದ ಟ್ರಂಪ್, ಪರಿಸ್ಥಿತಿ ಕೈಮೀರಿ ನಡೆದುಹೋದ ತಪ್ಪಿಗೂ, ಉದ್ದೇಶಪೂರ್ವಕವಾಗಿ ಎಸಗಿದ ತಪ್ಪಿಗೂ ಭಾರೀ ವ್ಯತಾಸವಿದೆ ಎಂದರು. ಆದರೆ ಈ ಎರಡೂ ಸನ್ನಿವೇಶಗಳಲ್ಲಿಯೂ ಕೊರೋನ ವೈರಸ್ ಹಾವಳಿಯ ಬಗ್ಗೆ ಚೀನಾದಲ್ಲಿ ಪರಿಶೀಲನೆ ನಡೆಸಲು ಅಮೆರಿಕಕ್ಕೆ ಅವಕಾಶ ನೀಡಬೇಕಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ ಎಂದು ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದರು.

   ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಾಟಿಕ್ ಪಕ್ಷದ ಆಕಾಂಕ್ಷಿ ಅಭ್ಯರ್ಥಿಯಾದ ಜೋಬಿಡೆನ್ ಅವರ ಗೆಲುವಿಗಾಗಿ ಚೀನಾ ಪ್ರಯತ್ನಿಸುತ್ತಿದೆ ಎಂದ ವರು ಆಪಾದಿಸಿದರು. ಒಂದು ವೇಳೆ ಜೊಬಿಡೆನ್ ಗೆದ್ದರೆ,ಚೀನವು ಅಮೆರಿಕದ ಮೇಲೆ ಒಡೆತನವನ್ನು ಸಾಧಿಸಲಿದೆ ಎಂರು. ತನ್ನ ಆಡಳಿತದ ದೃಢವಾದ ವಾಣಿಜ್ಯ ನೀತಿಗಳಿಂ ಚೀನಾದಿಂದ ಅಮೆರಿಕಕ್ಕೆು ಬಿಲಿಯಗಟ್ಟೆ ಡಾಲರ್ ಲಾಭವಾಗಿದೆ ಯೆಂದು ಟ್ರಂಪ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X