Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಮರಿಗೆ ಕಿರುಕುಳ...

ಮುಸ್ಲಿಮರಿಗೆ ಕಿರುಕುಳ ನೀಡುತ್ತಿರುವುದನ್ನು ತಡೆಯಿರಿ: ಅಮಿತ್ ಶಾಗೆ ಅಲ್ಪಸಂಖ್ಯಾತರ ಆಯೋಗ ಪತ್ರ

ವಾರ್ತಾಭಾರತಿವಾರ್ತಾಭಾರತಿ19 April 2020 11:47 PM IST
share
ಮುಸ್ಲಿಮರಿಗೆ ಕಿರುಕುಳ ನೀಡುತ್ತಿರುವುದನ್ನು ತಡೆಯಿರಿ: ಅಮಿತ್ ಶಾಗೆ ಅಲ್ಪಸಂಖ್ಯಾತರ ಆಯೋಗ ಪತ್ರ

ಹೊಸದಿಲ್ಲಿ, ಎ.19: ಕೊರೋನ ಸೋಂಕು ಹಿನ್ನೆಲೆಯಲ್ಲಿ ಇದೀಗ ದೇಶದಲ್ಲಿ ಮುಸ್ಲಿಮರಿಗೆ ಕಿರುಕುಳ ನೀಡುವ ಪ್ರಕರಣ ಹೆಚ್ಚುತ್ತಿದ್ದು ಇದನ್ನು ತಡೆಗಟ್ಟಲು ದಿಲ್ಲಿ ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ದಿಲ್ಲಿಯ ಅಲ್ಪಸಂಖ್ಯಾತರ ಆಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಆಗ್ರಹಿಸಿದೆ.

ಕೊರೋನ ವೈರಸ್ ಸೋಂಕಿಗೆ ಸಂಬಂಧಿಸಿ ಮಾಧ್ಯಮದಲ್ಲಿ ಹೇಳಿಕೆ ನೀಡುವ ಸಂದರ್ಭ ಸರಕಾರಿ ಅಧಿಕಾರಿಗಳು ತೋರುವ ನಿರ್ಲಕ್ಷದಿಂದಾಗಿ ಜನಸಾಮಾನ್ಯರು ತಬ್ಲೀಗಿ ಕಾರ್ಯಕರ್ತರನ್ನು ಸಾಮಾನ್ಯ ಮುಸ್ಲಿಮರೊಂದಿಗೆ ಸಮೀಕರಿಸುತ್ತಿದ್ದಾರೆ. ಎಲ್ಲಾ ತಬ್ಲೀಗಿಗಳೂ ಮುಸ್ಲಿಮರು. ಆದರೆ ಎಲ್ಲಾ ಮುಸ್ಲೀಮರೂ ತಬ್ಲೀಗಿಗಳಲ್ಲ . ಆದರೆ ಪೊಲೀಸರು ಹಾಗೂ ಅಧಿಕಾರಿಗಳು ಈ ಪ್ರಕರಣವನ್ನು ನಿರ್ವಹಿಸಿದ ರೀತಿಯಿಂದ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮುಸ್ಲಿಮರು ಕಿರುಕುಳಕ್ಕೆ ಒಳಗಾಗುವಂತಾಗಿದೆ ಎಂದು ಆಯೋಗದ ಅಧ್ಯಕ್ಷ ಝಫರುಲ್ ಇಸ್ಲಾಮ್‌ಖಾನ್ ಹಾಗೂ ಸದಸ್ಯ ಕರ್ತಾರ್ ಸಿಂಗ್ ಕೊಚ್ಚಾರ್ ಹೇಳಿದ್ದಾರೆ.

ದಿಲ್ಲಿಯ ನಿಜಾಮುದ್ದೀನ್‌ನಲ್ಲಿ ತಬ್ಲೀಗಿ ಜಮಾಅತ್ ನಡೆಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರದ ಜಮಾಅತ್ ಸದಸ್ಯರಿಗೂ ಕಿರುಕುಳ ನೀಡಲಾಗುತ್ತಿದೆ. ತಬ್ಲೀಗಿ ಜಮಾಅತ್‌ನ ಆಡಳಿತದ ಒಂದು ಭಾಗದವರು ಕೊರೋನ ವೈರಸ್‌ನ ಭೀಕರತೆ ಮತ್ತು ಇದರಿಂದ ಉಂಟಾಗಬಹುದಾದ ಪರಿಣಾಮವನ್ನು ಊಹಿಸಲು ವಿಫಲವಾಗಿದೆ. ಆದರೆ ಇದರಲ್ಲಿ ಯಾವುದೇ ಪಿತೂರಿಯಿಲ್ಲ. ತುರ್ಕ್‌ಮಾನ್ ಗೇಟ್‌ನಲ್ಲಿ ಕೇಂದ್ರಕಚೇರಿ ಹೊಂದಿರುವ ಜಮಾಅತ್‌ನ ಇನ್ನೊಂದು ಭಾಗದವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನೂ ಮಾರ್ಚ್ ಆರಂಭದಲ್ಲೇ ರದ್ದುಮಾಡಿದ್ದರು. ಅಲ್ಲದೆ ಇಂತಹ ಹಲವಾರು ಘಟನೆಗಳು ದಿಲ್ಲಿ ಮತ್ತು ದೇಶದೆಲ್ಲೆಡೆ ನಡೆದಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

 ತಬ್ಲೀಗ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರನ್ನು ಕ್ವಾರಂಟೈನ್‌ಗೆ ಒಳಪಡಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಅವರೊಂದಿಗೆ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಿ ಕ್ವಾರಂಟೈನ್‌ಗೆ ಒಳಪಡಿಸುವಂತೆ ಆದೇಶಿಸಿದ್ದರಲ್ಲೂ ತಪ್ಪಿಲ್ಲ. ಆದರೆ ಈ ಸರಿಯಾದ ಕಾರ್ಯಕ್ರಮ, ಸರಕಾರಿ ಅಧಿಕಾರಿಗಳ ಅಸಂವೇದನಾಶೀಲ ಹೇಳಿಕೆ ಮತ್ತು ಮಾಧ್ಯಮಗಳ ವೈಭವೀಕರಿಸಿದ ವರದಿಯಿಂದಾಗಿ ಎರಡು ಹೊಸ ತಪ್ಪು ಹಾದಿಯಲ್ಲಿ ಸಾಗಿತು ಎಂದು ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X