Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಾಕ್‌ಡೌನ್ ಸಂಕಷ್ಟ: ರೈತರ ಕೈ ಹಿಡಿಯದ...

ಲಾಕ್‌ಡೌನ್ ಸಂಕಷ್ಟ: ರೈತರ ಕೈ ಹಿಡಿಯದ ಆನ್‌ಲೈನ್ ಸಂಸ್ಥೆಗಳು!

ಸಮೀರ್ ದಳಸನೂರುಸಮೀರ್ ದಳಸನೂರು20 April 2020 11:49 AM IST
share
ಲಾಕ್‌ಡೌನ್ ಸಂಕಷ್ಟ: ರೈತರ ಕೈ ಹಿಡಿಯದ ಆನ್‌ಲೈನ್ ಸಂಸ್ಥೆಗಳು!

ಬೆಂಗಳೂರು: ಕೊರೋನ ಸೋಂಕು ಹರಡುವ ಆತಂಕದ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರಕಾರಗಳು ಜಾರಿಗೊಳಿಸಿರುವ ಲಾಕ್‌ಡೌನ್ ಪರಿಣಾಮ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (ಎಪಿಎಂಸಿ) ಸರಿಯಾಗಿ ವಹಿವಾಟು ನಡೆಯದೇ ರೈತರು ಬೆಳೆದ ತರಕಾರಿ, ಹೂವು, ಹಣ್ಣುಗಳ ಬೆಲೆ ನೆಲಕಚ್ಚಿದೆ.

ಆದರೆ, ರೈತರಿಗೆ ಮತ್ತೊಂದು ಪ್ರಮುಖ ವೇದಿಕೆ ಎಂದೇ ನಂಬಿದ್ದ ಆನ್‌ಲೈನ್ ಮಾರಾಟ ಸಂಸ್ಥೆಗಳಾದ ರಿಲಯನ್ಸ್ ಫ್ರೆಶ್, ಬಿಗ್ ಬಾಸ್ಕೆಟ್, ಬಿಗ್ ಬಜಾರ್, ಉಡಾನ್ ಸೇರಿ ಬಹುತೇಕ ಸಂಸ್ಥೆಗಳು ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಮುಂದೆ ಬರದೆ ರೈತರು ಕಷ್ಟಕರ ಪರಿಸ್ಥಿತಿಗೆ ಸಿಲುಕುವಂತೆ ಆಗಿದೆ.

ಸಾವಿರಾರು ಟನ್ ನಿತ್ಯ ವಹಿವಾಟು ನಡೆಸುತ್ತಿದ್ದ ಸಂಸ್ಥೆಗಳೇ ಈಗ ವ್ಯಾಪಾರವಿಲ್ಲದೇ ರೈತರ ಬಳಿ ಖರೀದಿಸಲು ಹಿಂದೇಟು ಹಾಕುತ್ತಿವೆ. ಅಷ್ಟೇ ಅಲ್ಲದೆ, ವಾಹನ ಸಂಚಾರ ಸಂಪೂರ್ಣ ನಿಂತಿದೆ ಎನ್ನುವ ಕಾರಣ ಹೇಳಿ, ತರಕಾರಿ ಖರೀದಿ ಮಾಡದೇ ಜಾರಿಕೊಳ್ಳುತ್ತಿದ್ದಾರೆಂದು ಆರೋಪಗಳು ಕೇಳಿಬರುತ್ತಿವೆ. ತರಕಾರಿ ಹಾಗೂ ಹಣ್ಣುಗಳನ್ನು ನೇರ ರೈತರಿಂದ ಅಂದಿನ ಮಾರುಕಟ್ಟೆ ದರದಲ್ಲಿ ಖರೀದಿಸಿ ರೈತರ ಬಳಿ ಯಾವುದೇ ಕಮಿಷನ್ ಪಡಿಯದೇ ವಹಿವಾಟು ನಡೆಸುತ್ತಿದ್ದ ಸಂಸ್ಥೆಗಳು ಇಂದು ವ್ಯಾಪಾರವಿಲ್ಲದೆ, ರೈತರ ಬಳಿ ಖರೀದಿಸುತ್ತಿಲ್ಲ. ಇದರೊಂದಿಗೆ ತರಕಾರಿ ಹಾಗೂ ಹಣ್ಣುಗಳಿಗೆ ಬೆಲೆ ಇಲ್ಲದಂತಾಗಿದೆ.

ಬೆಲೆ ಇಲ್ಲ:  ಉತ್ತಮ ಗುಣಮಟ್ಟದ ಟೊಮ್ಯಾಟೊ 14 ಕೆ.ಜಿ ಬಾಕ್ಸ್‌ಗೆ 50 ರಿಂದ 60 ರೂ.ಗೆ ಮಾರಾಟವಾಗುತ್ತಿದೆ. ಕೆಲವೆಡೆ ಕೆ.ಜಿ.ಗೆ ಕನಿಷ್ಠ 3 ರೂ.ಯಿಂದ 5 ರೂ.ವರೆಗೂ ಮಾರುಕಟ್ಟೆ ಸಗಟು ದರದಲ್ಲಿ ಮಾರಾಟವಾಗುತ್ತಿದೆ.

 ಉತ್ತಮ ಗುಣಮಟ್ಟದ ಕ್ಯಾಪ್ಸಿಕಂ ಕೆ.ಜಿ.ಗೆ 6 ರಿಂದ 10 ರೂ.ಗೆ ಮಾರಾಟವಾಗಿದೆ. ಆನ್‌ಲೈನ್ ಮಾರಾಟ ಸಂಸ್ಥೆಗಳು ಇದನ್ನು ಖರೀದಿಸಲು ಮುಂದೆಬರುತ್ತಿಲ್ಲ ಎಂದು ಮಾಲೂರಿನ ರೈತ ವೆಂಕಟಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ತರಕಾರಿಗೆ ಎಂಆರ್‌ಪಿ ಇಲ್ಲ: ಸೋಪು, ಬ್ರಷ್ ಸೇರಿದಂತೆ ಇತರ ಪದಾರ್ಥಗಳಿಗೆ ಎಂಆರ್‌ಪಿ (ಗರಿಷ್ಠ ಚಿಲ್ಲರೆ ದರ) ಎಂದು ಇರುತ್ತದೆ. ಆದರೆ, ತರಕಾರಿ, ಹೂವು, ಹಣ್ಣುಗಳಿಗೆ ಈ ವ್ಯವಸ್ಥೆ ಇಲ್ಲ. ರೈತರಿಂದ ಖರೀದಿಸಿದ ಬೆಲೆ ಮೇಲೆ ಇಂತಿಷ್ಟು ಶೇಕಡ ದರದಲ್ಲಿ ಮಾರಾಟ ಮಾಡುವಂತೆ ಆಗಬೇಕು. ರೈತರಿಗೂ ಒಂದು ನಿಗದಿತ ಬೆಲೆ ಸಿಗುತ್ತದೆ. ರೈತರಿಂದ 5 ರೂ.ಗೆ ಖರೀದಿಸಿ 50 ರೂ.ವರೆಗೂ ಕೆಲವರು ಮಾರಾಟ ಮಾಡುತ್ತಾರೆ. ಇದನ್ನು ಸರಕಾರದಿಂದಲೇ ಸರಿಪಡಿಸಬೇಕಿದೆ ಎನ್ನುತ್ತಾರೆ ದೇವನಹಳ್ಳಿ ರೈತ ಕುಮಾರ್.

ಕೊರೋನ ಸೋಂಕು ಹಿನ್ನೆಲೆಯಲ್ಲಿ ಯಾವುದೇ ಸಮಾರಂಭಗಳು ನಡೆಯುತ್ತಿಲ್ಲ. ತರಕಾರಿಗಳು ರಫ್ತು ಆಗುತ್ತಿಲ್ಲ. ಆನ್‌ಲೈನ್ ಸಂಸ್ಥೆಗಳಿಗೂ ವ್ಯಾಪಾರವಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

- ಅರುಣ್, ರೈತ

ಆನ್ ಲೈನ್ ರೈತರ ಪರ

ಆನ್‌ಲೈನ್ ಸಂಸ್ಥೆ ರಿಲಯನ್ಸ್ ಫ್ರೆಶ್, ಬಿಗ್‌ಬಾಸ್ಕೆಟ್, ಬಿಗ್ ಬಜಾರ್, ಉಡಾನ್ ಸೇರಿ ಹಲವು ಸಂಸ್ಥೆಗಳು ರೈತರಿಂದ ಖರೀದಿಸಿದ ತರಕಾರಿ ಹಣ್ಣುಗಳಿಗೆ ಕಮಿಷನ್ ಪಡೆಯುವುದಿಲ್ಲ. ಖರೀದಿಸಿ ಒಂದು ವಾರದೊಳಗೆ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಇದರಿಂದ ಅನೇಕ ರೈತರಿಗೆ ಅನುಕೂಲವಾಗುತ್ತದೆ. ರೈತರಿಂದ ಖರೀದಿಸುವ ತರಕಾರಿ, ಹಣ್ಣುಗಳನ್ನು ಪ್ರತ್ಯೇಕವಾಗಿ 2 ಕೆಜಿ ಅಥವಾ 3 ಕೆಜಿ ಪ್ಯಾಕೆಟ್‌ಗಳಲ್ಲಿ ಮಾರಾಟ ಮಾಡಲಾಗುತ್ತದೆ. ಸಾಗಾಣಿಕೆ ವೆಚ್ಚ ಹಾಗೂ ಮತ್ತಿತರ ಖರ್ಚುಗಳನ್ನು ಸೇರಿಸಿ ಗ್ರಾಹಕರಿಗೆ ಮಾರಾಟ ಮಾಡುತ್ತೇವೆ ಎಂದು ತರಕಾರಿ ಹಾಗೂ ಹಣ್ಣು ಸಂಗ್ರಹಣಾ ವಿಭಾಗದ ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದರು.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X