ಹುಬ್ಬಳ್ಳಿ: ಐವರು ಪತ್ರಕರ್ತರು ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್ ಗೆ
ಹುಬ್ಬಳ್ಳಿ: ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಪತ್ರಕರ್ತರು ತಮ್ಮಲ್ಲಿ ಕೊರೊನದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಏ.9 ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾಗಿ ಅವರು ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಸ್ಮಶಾನದ ಕಾವಲುಗಾರನಿಗೆ ( ಪಿ- 363) ಕೋವಿಡ್ ಸೋಂಕು ಇರುವುದು ಏ.18 ರಂದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಎಲ್ಲಾ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.
ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.
Next Story





