Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್‌ಗೆ ಪ್ರತಿ ತಿಂಗಳು ಒಂದು...

ಪಿಎಂ ಕೇರ್ಸ್‌ಗೆ ಪ್ರತಿ ತಿಂಗಳು ಒಂದು ದಿನದ ಸಂಬಳ ದೇಣಿಗೆ: ಕಂದಾಯ ಇಲಾಖೆಯ ಉದ್ಯೋಗಿಗಳಿಗೆ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ20 April 2020 10:51 PM IST
share
ಪಿಎಂ ಕೇರ್ಸ್‌ಗೆ ಪ್ರತಿ ತಿಂಗಳು ಒಂದು ದಿನದ ಸಂಬಳ ದೇಣಿಗೆ: ಕಂದಾಯ ಇಲಾಖೆಯ ಉದ್ಯೋಗಿಗಳಿಗೆ ಸುತ್ತೋಲೆ

ಹೊಸದಿಲ್ಲಿ, ಎ.20: ಕೊರೋನ ವೈರಸ್ ಪಿಡುಗಿನ ವಿರುದ್ಧ ಹೋರಾಡುವ ಕೇಂದ್ರ ಸರಕಾರದ ಪ್ರಯತ್ನಕ್ಕೆ ಕೈಜೋಡಿಸಲು, 2021ರವರೆಗೆ ಪ್ರತಿ ತಿಂಗಳೂ ತಮ್ಮ ಒಂದು ದಿನದ ಸಂಬಳವನ್ನು ದೇಣಿಗೆಯಾಗಿ ನೀಡಬೇಕೆಂದು ಕೋರಿ, ಕೇಂದ್ರ ಸರಕಾರದ ವಿತ್ತ ಸಚಿವಾಲಯದ ಅಧೀನದಲ್ಲಿರುವ ಕಂದಾಯ ಇಲಾಖೆ ಯು ತನ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸುತ್ತೋಲೆ ಹೊರಡಿಸಿದೆ.

ಒಂದು ವೇಳೆ ಯಾವುದೇ ಅಧಿಕಾರಿ ದೇಣಿಗೆ ನೀಡಲು ಬಯಸದೆ ಇದ್ದಲ್ಲಿ ಹಾಗೆಂದು ಲಿಖಿತವಾಗಿ ಬರೆದುಕೊಡಬೇಕೆಂದು ಸುತ್ತೋಲೆಯಲ್ಲಿ ಸೂಚಿಸ ಲಾಗಿದೆ.

ಹಲವು ರಾಜ್ಯ ಸರಕಾರಗಳು, ತಮ್ಮ ನೌಕರರಿಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಕೋರಿ ಪತ್ರ ಬರೆದಿವೆ. ಆದರೆ ಕೇಂದ್ರ ಸರಕಾರದ ವಿತ್ತ ಸಚಿವಾಲಯವು,ತನ್ನ ನೌಕರರಿಂದ ಈ ಬಗ್ಗೆ ಒಪ್ಪಿಗೆಯನ್ನು ಪಡೆದುಕೊಂಡಿರುವ ಹಾಗೆ ನಡೆದುಕೊಳ್ಳುತ್ತಿದೆ. ಒಂದು ವೇಳೆ ಉದ್ಯೋಗಿಗಳು ದೇಣಿಗೆಯನ್ನು ನೀಡಲು ಇಚ್ಚಿಸದೇ ಇದ್ದಲ್ಲಿ ಹಾಗೆಂದು ಲಿಖಿತವಾಗಿ ಬರೆದುಕೊಡುವಂತೆ ಉದ್ಯೋಗಿಗಳನ್ನು ಕೇಳುವ ಮೂಲಕ ವಿತ್ತ ಸಚಿವಾಲಯವು ಅವರನ್ನು ಗೊಂದಲದ ಹಾಗೂ ಸಂಕಷ್ಟದ ಸನ್ನಿವೇಶಕ್ಕೆ ತಳ್ಳಿದೆ ಎಂದು ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ತಿಳಿಸಿದ್ದಾರೆ.

ಪಿಎಂ ಕೇರ್ಸ್‌ ಫಂಡ್ ಒಂದು ಖಾಸಗಿ ನಿಧಿಯಾಗಿರುವಾಗ ಅದಕ್ಕೆ ದೇಣಿಗೆ ನೀಡಬೇಕೆಂದು ಯಾಕೆ ಕೇಳಲಾಗುತ್ತಿದೆಯೆಂದೂ ಕೆಲವು ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಒಂದು ವೇಳೆ ಪಿಎಂ ಕೇರ್ಸ್‌ ನಿಧಿಗೆ ಬದಲು ಲಾಕ್‌ಡೌನ್‌ಗೆ ಸಂಬಂಧಿಸಿದ ಪರಿಹಾರ ಕಾರ್ಯಗಳಲ್ಲಿ ತೊಡಗಿರುವ ಇತರ ಸರಕಾರಿ ಏಜೆನ್ಸಿಗಳು ಅಥವಾ ಎನ್‌ಜಿಓ ಸಂಸ್ಥೆಗಳು ಸ್ಥಾಪಿಸಿರುವ ನಿಧಿಗಳಿಗೆ ದೇಣಿಗೆಯನ್ನು ನೀಡಲು ಅಧಿ ಕಾರಿಗಳು ಬಯಸಿದ್ದರೆ ಅದರಲ್ಲಿ ತಪ್ಪೇನಿದೆ ಎಂದವರು ಪ್ರಶ್ನಿಸಿದ್ದಾರೆ.

ತಮ್ಮ ಹಿರಿಯ ಅಧಿಕಾರಿಗಳಷ್ಟು ಉಳಿತಾಯವನ್ನು ಹೊಂದಿರದ ಕಿರಿಯ ಅಧಿಕಾ ರಿಗಳಿಗೂ ಪ್ರತಿ ತಿಂಗಳೂ ಒಂದು ದಿನದ ವೇತನವನ್ನು ಕಡಿತಗೊಳಿಸುವ ಔಚಿತ್ಯವನ್ನು ಅವರು ಪ್ರಶ್ನಿಸಿದ್ದಾರೆ.

‘ಪಿಎಂ-ಕೇರ್ಸ್ ಸಾರ್ವಜನಿಕ ನಿಧಿಯಲ್ಲವೆಂದು ಕೇಂದ್ರ ಸರಕಾರವು ದಿಲ್ಲಿ ಹೈಕೋರ್ಟ್‌ನಲ್ಲಿ ಹೇಳಿಕೆ ನೀಡಿರು ಬಗ್ಗೆಯೂ ಅವರು ಗಮನಸೆಳೆದಿದ್ದಾರೆ. ಇಂತಹ ಬಿಕ್ಕಟ್ಟಿನ ಸನ್ನಿವೇಶದಲ್ಲಿ ಖಾಸಗಿ ನಿಧಿಗಿ ಈ ದೇಣಿಗೆಯನ್ನು ವರ್ಗಾಯಿಸುವುದು ಪ್ರಶ್ನಾರ್ಹವಾಗಿದೆಯೆಂದು ಅವರು ಅಭಿಪ್ಪಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X