Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಹೊಸ ಎಫ್‌ಡಿಐ ನಿಯಮಕ್ಕೆ ಚೀನಾ...

ಭಾರತದ ಹೊಸ ಎಫ್‌ಡಿಐ ನಿಯಮಕ್ಕೆ ಚೀನಾ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 April 2020 11:50 PM IST
share
ಭಾರತದ ಹೊಸ ಎಫ್‌ಡಿಐ ನಿಯಮಕ್ಕೆ ಚೀನಾ ಆಕ್ರೋಶ

ಹೊಸದಿಲ್ಲಿ, ಎ.20: ಭಾರತವು ವಿದೇಶಿ ನೇರ ಬಂಡವಾಳ ನೀತಿಗೆ ತಿದ್ದುಪಡಿ ತಂದು ರೂಪಿಸಿರುವ ಹೊಸ ನಿಯಮ ವಿಶ್ವ ವ್ಯಾಪಾರ ಸಂಘಟನೆ(ಡಬ್ಲುಟಿಒ)ಯ ತಾರತಮ್ಯರಹಿತ ಮತ್ತು ಮುಕ್ತ ವ್ಯಾಪಾರ ತತ್ವದ ಉಲ್ಲಂಘನೆಯಾಗಿದೆ ಎಂದು ಚೀನಾ ಸೋಮವಾರ ಆಕ್ರೋಶ ವ್ಯಕ್ತಪಡಿಸಿದೆ.

  ಕೆಲವು ನಿರ್ದಿಷ್ಟ ದೇಶಗಳಿಗೆ ಸಂಬಂಧಿಸಿ ಹೆಚ್ಚುವರಿ ನಿರ್ಬಂಧಗಳನ್ನು ಭಾರತ ರೂಪಿಸಿರುವುದು ವಿಶ್ವ ವ್ಯಾಪಾರ ಸಂಘಟನೆಯ ತಾರತಮ್ಯರಹಿತ ತತ್ವದ ಉಲ್ಲಂಘನೆಯಾಗಿದ್ದು, ಉದಾರೀಕರಣ ಮತ್ತು ವ್ಯಾಪಾರ ಹಾಗೂ ಹೂಡಿಕೆಯ ಸಾಮಾನ್ಯ ಧೋರಣೆಗೆ ವಿರುದ್ಧವಾಗಿದೆ. ಈ ತಾರತಮ್ಯ ನೀತಿಯನ್ನು ಭಾರತ ಪರಿಷ್ಕರಿಸುತ್ತದೆ ಮತ್ತು ವಿವಿಧ ದೇಶಗಳಿಂದ ಹರಿದು ಬರುವ ಹೂಡಿಕೆಯನ್ನು ಸಮಾನವಾಗಿ ಪರಿಗಣಿಸುವುದರ ಜೊತೆಗೆ ಮುಕ್ತ, ನ್ಯಾಯೋಚಿತ ಮತ್ತು ನ್ಯಾಯಸಮ್ಮತ ವ್ಯಾಪಾರ ವಾತಾವರಣವನ್ನು ನಿರ್ಮಿಸುವುದಾಗಿ ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಚೀನಾದ ರಾಯಭಾರ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

 ಕೊರೋನ ವೈರಸ್ ಸೋಂಕಿನಿಂದ ಉದ್ಭವಿಸಿರುವ ಆರ್ಥಿಕ ಹಿನ್ನಡೆಯ ಪರಿಸ್ಥಿತಿಯ ಲಾಭ ಪಡೆದುಕೊಂಡು ಭಾರತದ ಸಂಸ್ಥೆಗಳಲ್ಲಿ ಹೆಚ್ಚುವರಿ ಹೂಡಿಕೆ ಮಾಡಿ ಅದರ ನಿಯಂತ್ರಣ ಪಡೆಯುವ ಚೀನಾದ ತಂತ್ರದ ಹಿನ್ನೆಲೆಯಲ್ಲಿ, ಶನಿವಾರ ಕೇಂದ್ರ ಸರಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ನಿಯಮವನ್ನು ಬಿಗಿಗೊಳಿಸಿದೆ. ಚೀನಾದ ನಡೆಯಿಂದ ಶಂಕೆಗೊಂಡಿರುವ ಆಸ್ಟ್ರೇಲಿಯಾ ಮತ್ತು ಜರ್ಮನಿ ದೇಶಗಳೂ ತಮ್ಮ ವಿದೇಶಿ ನೇರ ಬಂಡವಾಳ ಹೂಡಿಕೆ ನೀತಿಯನ್ನು ಬಿಗಿಗೊಳಿಸಿವೆ.

ಹೊಸ ನಿಯಮದ ಪ್ರಕಾರ, ಭಾರತದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ದೇಶಗಳು ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವ ಮುನ್ನ ಸರಕಾರದ ಅನುಮತಿ ಪಡೆಯಬೇಕಿದೆ. ಹಳೆಯ ನಿಯಮದಲ್ಲಿ, ಭಾರತದ ನೆರೆರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಪಾಕಿಸ್ತಾನ ಮೂಲದ ಹೂಡಿಕೆಗೆ ಮಾತ್ರ ಹೆಚ್ಚಿನ ನಿಬರ್ಂಧವಿತ್ತು. ಹೊಸ ನಿಯಮದಲ್ಲಿ ಚೀನಾ, ನೇಪಾಳ, ಭೂತಾನ್ ಮತ್ತು ಮ್ಯಾನ್ಮಾರ್‌ಗಳನ್ನೂ ಸೇರಿಸಲಾಗಿದೆ.

ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಪ್ರಕ್ರಿಯೆ ಎರಡು ರೀತಿಯಲ್ಲಿ ನಡೆಯುತ್ತಿದೆ. ಮೊದಲನೆಯದು, ಸ್ವಯಂಚಾಲಿತ ವಿಧಾನ. ಈ ವಿಧಾನದಲ್ಲಿ ವಿದೇಶಿ ಸಂಸ್ಥೆಗಳು ಹೂಡಿಕೆ ಮಾಡಲು ಕೇಂದ್ರ ಸರಕಾರದ ಅನುಮತಿಯ ಅಗತ್ಯವಿಲ್ಲ. ಎರಡನೆಯದು, ಸರಕಾರದ ಅನುಮತಿ ಪಡೆದು ಹೂಡಿಕೆ ಮಾಡುವುದು. ಶನಿವಾರ ಕೇಂದ್ರ ಸರಕಾರ, ಚೀನಾದ ಸಂಸ್ಥೆಗಳು ಸ್ವಯಂಚಾಲಿತ ವಿಧಾನದಲ್ಲಿ ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

 ಎಫ್‌ಡಿಐ ನೀತಿಯಲ್ಲಿ ಕೇಂದ್ರ ಸರಕಾರ ಬದಲಾವಣೆ ಮಾಡಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ನನ್ನ ಎಚ್ಚರಿಕೆಯನ್ನು ಪರಿಗಣಿಸಿ ಎಫ್‌ಡಿಐ ನೀತಿಯಲ್ಲಿ ಬದಲಾವಣೆ ಮಾಡಿರುವುದಕ್ಕೆ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಚೀನಾವು ಭಾರತದ ಸಂಸ್ಥೆಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದೆ. ಎಚ್‌ಡಿಎಫ್‌ಸಿಯ 1.01% ಶೇರುಗಳನ್ನು ಚೀನಾ ಖರೀದಿಸಿರುವುದು ಇದಕ್ಕೆ ಉತ್ತಮ ಉದಾಹರಣೆ ಎಂದು ಎಪ್ರಿಲ್ 12ರಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X