Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊರೋನ ಬಿಕ್ಕಟ್ಟಿನ ನಡುವೆ ಮಾನಸಿಕ...

ಕೊರೋನ ಬಿಕ್ಕಟ್ಟಿನ ನಡುವೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಈ ಟಿಪ್ಸ್ ಪಾಲಿಸಿ

ಡಾ. ಸ್ಮಿತಾ ಜೆ.ಡಿ.ಡಾ. ಸ್ಮಿತಾ ಜೆ.ಡಿ.21 April 2020 6:05 PM IST
share
ಕೊರೋನ ಬಿಕ್ಕಟ್ಟಿನ ನಡುವೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಕೋವಿಡ್ – 19 ಮಹಾಮಾರಿ ವಿಶ್ವಾದ್ಯಂತ ವ್ಯಾಪಕವಾಗಿ ಹಬ್ಬುತ್ತಿದೆ. ಈ ಹಿಂದೆಂದೂ ಕಂಡಿರದ ಬಿಕ್ಕಟ್ಟಿನಿಂದಾಗಿ ಸಾಮಾನ್ಯ ಜನರಲ್ಲಿ ಇದು ಮಾನಸಿಕ ಒತ್ತಡವನ್ನೂ ಹೆಚ್ಚಿಸುತ್ತದೆ. ಈ ಹಿನ್ನೆಲೆಯಲ್ಲಿ ತಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಜನಸಾಮಾನ್ಯರು ಈ ಕೆಲವು ಅತ್ಯಗತ್ಯ ವಿಷಯಗಳನ್ನು ತಿಳಿದಿರಬೇಕು.

► ಈ ಸಾಂಕ್ರಾಮಿಕವು ಯಾವುದೇ ಜನಾಂಗ ಅಥವಾ ಜಾತಿ, ಧರ್ಮಗಳಿಗೆ ಸೀಮಿತವಾಗಿಲ್ಲ. ಆದುದರಿಂದ ಕೋವಿಡ್-19ಗೆ ಬಲಿಯಾದದವರ ಕುಟುಂಬಸ್ಥರು, ಸೋಂಕಿತರು ಯಾವುದೇ ಅಪರಾಧಿ ಭಾವನೆಯಿಂದ ಬಳಲುವ ಅವಶ್ಯಕತೆಯಿಲ್ಲ. ಇದನ್ನು ಕೇವಲ ಒಂದು ವೈರಾಣುವಿನ ಸೋಂಕು ಎಂದು ಪರಿಗಣಿಸುವುದು ಅವಶ್ಯಕ.

► ಕೋವಿಡ್-19 ಸೋಂಕಿತ ವ್ಯಕ್ತಿಯನ್ನು ಮಾನಸಿಕವಾಗಿ ದುರ್ಬಲಗೊಳಿಸಬಾರದು. ಕೋವಿಡ್-19 ಸೋಂಕು ಗುಣಪಡಿಸಬಹುದಾದಂತಹ ಕಾಯಿಲೆಯಾಗಿದೆ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಾಗಿದೆ.

► ಯಾವುದೇ ಆಧಾರವಿಲ್ಲದೆ ಪ್ರಸಾರವಾಗುವ ಮಾಹಿತಿಗಳನ್ನು ಓದುವುದು, ವೀಕ್ಷಿಸುವುದನ್ನು ಕಡಿಮೆ ಮಾಡಬೇಕಾಗಿದೆ. ಇಂತಹ ಮಾಹಿತಿಗಳು ವ್ಯಕ್ತಿಯ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ.

►  ಆರೋಗ್ಯ ಕಾರ್ಯಕರ್ತರು ತಮ್ಮ ಸಂಸಾರ, ಸ್ನೇಹಿತರು, ಬಂಧು ಬಾಂಧವರಿಂದ ದೂರ ಉಳಿಯುವ ಸಂದರ್ಭ ಎದುರಾಗಿರುವುದರಿಂದ ಮಾನಸಿಕ ಒತ್ತಡದಲ್ಲಿದ್ದಾರೆ. ಅಂತಹವರು ಡಿಜಿಟಲ್ ವಿಧಾನಗಳನ್ನು ಬಳಸಿ ತಮ್ಮವರ ಜೊತೆ ಸಂಪರ್ಕ ಸಾಧಿಸಬಹುದು. ಇದರಿಂದ ಮಾನಸಿಕ ಒತ್ತಡವೂ ಕಡಿಮೆಯಾಗಬಹುದು.

► ಸಾಮಾಜಿಕ ಕಾರ್ಯಕರ್ತರು, ದಾದಿಯರು, ಆಶಾ ಕಾರ್ಯಕರ್ತೆಯರು, ಆ್ಯಂಬುಲೆನ್ಸ್ ಸಿಬ್ಬಂದಿ, ತರಬೇತಿ ಪಡೆದ ಸಿಬ್ಬಂದಿ ವರ್ಗದವರು ಸಾಮಾನ್ಯ ಜನರಿಗೆ ಸಾಮಾನ್ಯ ಮಾಹಿತಿಯೊಂದಿಗೆ, ನೈತಿಕ ಬೆಂಬಲವನ್ನು ನೀಡಬೇಕಾಗುತ್ತದೆ.

►  ದೀರ್ಘಕಾಲದ ಮಾನಸಿಕ ತೊಂದರೆಯಿಂದ ಬಳಲುತ್ತಿರುವವರ ಔಷಧೋಪಚಾರಗಳ ಬಗ್ಗೆ ನಿಗಾ ವಹಿಸಬೇಕಾಗುತ್ತದೆ.

ಮಕ್ಕಳ ಮಾನಸಿಕ ಆರೋಗ್ಯವನ್ನು ಕಾಪಾಡುವ ಬಗ್ಗೆ

► ಕೆಲವೊಮ್ಮೆ ಅನೇಕ ಕಾರಣಗಳಿಂದ ಮಕ್ಕಳು ಹೆತ್ತವರಿಂದ ದೂರವಿರುವ ಪರಿಸ್ಥಿತಿ ಒದಗಬಹುದು. ಅಂತಹ ಮಕ್ಕಳಿಗೆ ಕೋವಿಡ್ 19 ಬಿಕ್ಕಟ್ಟಿನ ಸಮಯದಲ್ಲಿ ಇತರರ ಭಾವನಾತ್ಮಕ ಬೆಂಬಲ ಅತ್ಯಗತ್ಯ.

► ಮಕ್ಕಳು ಮನೆಯಲ್ಲಿನ ದೊಡ್ಡವರನ್ನು ಅನುಕರಿಸುವವರಾಗಿರುತ್ತಾರೆ. ಆದುದರಿಂದ ಮನೆಯಲ್ಲಿನ ಹಿರಿಯರು, ತಂದೆ ತಾಯಿಯರು, ಮಕ್ಕಳು ಸಮಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ನೋಡಿಕೊಳ್ಳಬೇಕು.

ಹಿರಿಯರು ಹಾಗೂ ವೃದ್ಧರು

► ಹಿರಿಯ ಜೀವಗಳು, ಮರೆವಿನ ಕಾಯಿಲೆಗಳನ್ನು ಹೊಂದಿರುವವರು, ಒತ್ತಡದಲ್ಲಿರುವವರು, ಮೂಲೆ ಗುಂಪಾಗಿರುವವರು, ಮಕ್ಕಳುಗಳಿಂದ ದೂರವಾಗಿರುವವರು, ವಿದೇಶದಲ್ಲಿ ಮಕ್ಕಳನ್ನು ಹೊಂದಿರುವ ವೃದ್ಧರು ಇಂತಹವರಲ್ಲಿ ಮಾನಸಿಕ ಒತ್ತಡ ಹೆಚ್ಚಾಗಿದ್ದು, ಭಾವನಾತ್ಮಕ ಹಾಗೂ ನೈತಿಕ ಬೆಂಬಲದ ಅಗತ್ಯ.

► ಇವರಿಗೆ ಅಗತ್ಯ ವಸ್ತುಗಳ ಪೂರೈಕೆ, ಔಷಧೋಪಚಾರಗಳ ಅವಶ್ಯಕತೆ ಇದೆ.

ಐಸೊಲೇಶನ್ ನಲ್ಲಿ ಇರುವವರಿಗಾಗಿ

► ಐಸೊಲೇಶನ್ ನಲ್ಲಿ ಇರುವುದು ಸಮಾಜದ ಒಳಿತಿಗಾಗಿ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು. ಪ್ರತ್ಯೇಕಗೊಳ್ಳುವುದು ತಮ್ಮ ಆಪ್ತರು, ಹತ್ತಿರದವರು ಹಾಗೂ ಸಮಾಜದ ಒಳಿತಿಗಾಗಿ ನೀಡುತ್ತಿರುವ ಕೊಡುಗೆ ಎಂದು ಭಾವಿಸಬೇಕು.

► ಆಪ್ತರೊಂದಿಗೆ ಡಿಜಿಟಲ್ ಮಾಧ್ಯಮದೊಂದಿಗೆ ಸಂಪರ್ಕ ಇಟ್ಟುಕೊಳ್ಳಬಹುದಾಗಿದೆ.

► ಮಾನಸಿಕ ಒತ್ತಡದ ಸಮಯದಲ್ಲಿ ಮನಸ್ಸಿಗೆ ಆಹ್ಲಾದ ನೀಡುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

►  ಅನಾವಶ್ಯಕ ಆಧಾರ ರಹಿತ ಸುದ್ದಿಗಳಿಂದ ದೂರವಿರಿ.

► ತಮ್ಮ ಬೇಜವಾಬ್ದಾರಿತನವು ಇತರರನ್ನು ಸಂಕಷ್ಟಕ್ಕೆ ಎಡೆಮಾಡಬಹುದು ಎಂಬುದನ್ನು ಮನಗಂಡು ಜವಾಬ್ದಾರಿಯಿಂದ ವರ್ತಿಸಬೇಕು

ಡಾ. ಸ್ಮಿತಾ ಜೆ.ಡಿ.

-ತಜ್ಞ ವೈದ್ಯರು, ಗುಂಡ್ಲುಪೇಟೆ

share
ಡಾ. ಸ್ಮಿತಾ ಜೆ.ಡಿ.
ಡಾ. ಸ್ಮಿತಾ ಜೆ.ಡಿ.
Next Story
X