Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ರಮಝಾನ್ ನಲ್ಲಿ ಜವಾಬ್ದಾರಿಯುತ...

‘ರಮಝಾನ್ ನಲ್ಲಿ ಜವಾಬ್ದಾರಿಯುತ ಮುಸ್ಲಿಮರಾಗಿ, ಬಡವರಿಗೆ ಸಹಾಯ ಮಾಡಿ’

ಮುಸ್ಲಿಂ ಯುವಕರಿಂದ #BeAResponsibleMuslim ಹ್ಯಾಶ್ ಟ್ಯಾಗ್ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ21 April 2020 8:20 PM IST
share
‘ರಮಝಾನ್ ನಲ್ಲಿ ಜವಾಬ್ದಾರಿಯುತ ಮುಸ್ಲಿಮರಾಗಿ, ಬಡವರಿಗೆ ಸಹಾಯ ಮಾಡಿ’

ಜಗತ್ತಿನಾದ್ಯಂತ ಕೊರೋನ ವೈರಸ್  ವ್ಯಾಪಕವಾಗಿ ಹರಡುತ್ತಿದ್ದು, ಈ ಹಿಂದೆಂದೂ ಕಂಡಿರದ ಬಿಕ್ಕಟ್ಟನ್ನು ಜಗತ್ತು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಶ್ವದ ಹಲವೆಡೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನರು ಮನೆಗಳಿಂದ ಹೊರಗೆ ಬರುವುದನ್ನು, ಗುಂಪು ಸೇರುವುದನ್ನು , ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲೇ ಮುಸ್ಲಿಮರ ಪವಿತ್ರ ತಿಂಗಳಾದ ರಮಝಾನ್ ಕೂಡ ಹತ್ತಿರವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಮರು ಜವಾಬ್ದಾರಿಯಿಂದ ವರ್ತಿಸಿ, ಕಷ್ಟದಲ್ಲಿದ್ದವರಿಗೆ ಸಹಾಯ ಮಾಡಬೇಕು ಎಂದು ಕರೆ ನೀಡುವ #BeAResponsibleMuslim ಹ್ಯಾಶ್ ಟ್ಯಾಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮೇ 3ರವರೆಗೆ ದೇಶಾದ್ಯಂತ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಘೋಷಿಸಿದ್ದಾರೆ. ಹಾಗಾಗಿ ಈ ಬಾರಿಯ ರಮಝಾನ್ ತಿಂಗಳಲ್ಲಿ ಮುಸ್ಲಿಮರು ಸಾಮಾನ್ಯವಾಗಿ ರಮಝಾನ್ ತಿಂಗಳಿನಲ್ಲಿ ಅನುಸರಿಸುತ್ತಿದ್ದ ಕೆಲವು ಸಂಪ್ರದಾಯಗಳಿಗೆ ಕಡಿವಾಣ ಹಾಕಬೇಕು ಎನ್ನುವ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಗ್ರಾಫಿಕ್ ಡಿಸೈನ್ ಗಳ ಮೂಲಕ ದಿಲ್ಲಿಯ ‘ಮಿನಿಮಲ್ ಮುಸ್ಲಿಂ’ ಎನ್ನುವ ಯುವಕರ ತಂಡ ನಡೆಸುತ್ತಿದೆ.

ಇಫ್ತಾರ್ ಕೂಟಗಳನ್ನು ನಡೆಸಬೇಡಿ: “ನೀವು ಇಫ್ತಾರ್ ಕೂಟಗಳನ್ನು ಮಿಸ್ ಮಾಡಿಕೊಳ್ಳುತ್ತೀರಿ ಎಂದು ನಮಗೆ ತಿಳಿದಿದೆ. ಆದರೆ ನಾವು ಕೊರೋನ ವೈರಸ್ ನ್ನು ತಡೆಯಲೇಬೇಕು. ಇಫ್ತಾರ್ ಕೂಟಗಳನ್ನು ನಿಮ್ಮ ಕುಟುಂಬದ ಜೊತೆ ನಡೆಸಿ” ಎಂದು ಬರೆಯಲಾಗಿದೆ.

ತರಾವೀಹ್ ಜಮಾಅತ್ ನಡೆಸಬೇಡಿ: ನಿಮ್ಮ ಬೇಸ್ ಮೆಂಟ್ ಗಳು, ಪಾರ್ಕಿಂಗ್ ಅಥವಾ ಟೆರೇಸ್ ಗಳಲ್ಲೂ ತರಾವೀಹ್ ಜಮಾಅತ್ ನಡೆಸಬೇಡಿ. ಕೇವಲ ಕುಟುಂಬದವರು ಅಥವಾ ಮನೆಯಲ್ಲಿದ್ದವರ ಜೊತೆ ಜಮಾಅತ್ ನಡೆಸಿ.

ಝಕಾತ್ ಅಥವಾ ದಾನ.. ಡಿಜಿಟಲ್ ರೂಪದಲ್ಲಿ: ನಗದು ವ್ಯವಹಾರ ಕಡಿಮೆಗೊಳಿಸಿ, ಮದ್ರಸಗಳು, ನಿಮ್ಮ ಬಡ ಕುಟುಂಬಸ್ಥರು, ನೆರೆಹೊರೆಯವರು, ಗೆಳೆಯರು, ಅನಾಥರು, ಎನ್ ಜಿಒಗಳು ಹೀಗೆ ಎಲ್ಲರಿಗೂ ಡಿಜಿಟಲ್ ವ್ಯವಹಾರದ ಮೂಲಕ ಸಹಾಯ ಮಾಡಿ. ಸುರಕ್ಷಿತ ಅಂತರ ಕಾಪಾಡಿಕೊಂಡು ಅಗತ್ಯವಿದ್ದವರಿಗೆ ಪಡಿತರ ವಿತರಿಸಿ.

ಈದ್ ಶಾಪಿಂಗ್: ನಿಮ್ಮ ಆಸೆಗಳ ಬಗ್ಗೆ ನಮಗೆ ತಿಳಿದಿದೆ. ಆದರೆ ಮಾನವೀಯತೆಯನ್ನು ಕಾಪಾಡಲು ನಾವು ಸಣ್ಣ ತ್ಯಾಗ ನಡೆಸಲೇಬೇಕು. ನಿಮ್ಮಲ್ಲಿರುವ ಉತ್ತಮ ವಸ್ತ್ರವನ್ನೇ ಈದ್ ಗೆ ಧರಿಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X