Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫಲಿತಾಂಶಗಳಲ್ಲಿ ವ್ಯತ್ಯಾಸ: ಕೋವಿಡ್-19...

ಫಲಿತಾಂಶಗಳಲ್ಲಿ ವ್ಯತ್ಯಾಸ: ಕೋವಿಡ್-19 ರ್ಯಾಪಿಡ್ ಟೆಸ್ಟಿಂಗ್ ಕಿಟ್‌ಗಳನ್ನು 2 ದಿನ ಬಳಸದಂತೆ ರಾಜ್ಯಗಳಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 April 2020 9:44 PM IST
share
ಫಲಿತಾಂಶಗಳಲ್ಲಿ ವ್ಯತ್ಯಾಸ: ಕೋವಿಡ್-19 ರ್ಯಾಪಿಡ್ ಟೆಸ್ಟಿಂಗ್ ಕಿಟ್‌ಗಳನ್ನು 2 ದಿನ ಬಳಸದಂತೆ ರಾಜ್ಯಗಳಿಗೆ ಸೂಚನೆ

ಹೊಸದಿಲ್ಲಿ, ಎ.21: ಕೋವಿಡ್-19 ರ್ಯಾಪಿಡ್ ಟೆಸ್ಟಿಂಗ್ ಕಿಟ್‌ಗಳಿಂದ ನಡೆಸಲಾಗುವ ಪರೀಕ್ಷೆಗಳಲ್ಲಿ ವ್ಯತ್ಯಾಸಗಳು ಕಂಡು ಬರುತ್ತಿವೆ ಎಂದು ಹಲವಾರು ರಾಜ್ಯಗಳು ದೂರಿಕೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಈ ಕಿಟ್‌ಗಳನ್ನು ಬಳಸದಂತೆ ಅವುಗಳಿಗೆ ಮಂಗಳವಾರ ಸೂಚಿಸಿರುವ ಕೇಂದ್ರವು,ಈ ಪೈಕಿ ಕೆಲವು ಕಿಟ್‌ಗಳ ತಪಾಸಣೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)ಯು ತನ್ನ ತಂಡಗಳನ್ನು ರವಾನಿಸಲಿದೆ ಎಂದು ತಿಳಿಸಿದೆ.

ಶೇ.90ರಷ್ಟು ನಿಖರ ಫಲಿತಾಂಶಗಳನ್ನು ನಿರೀಕ್ಷಿಸಲಾಗಿತ್ತಾದರೂ ಜೈಪುರದ ಸವಾಯ್ ಮಾನಸಿಂಗ್ ಸರಕಾರಿ ಆಸ್ಪತ್ರೆಯಲ್ಲಿ ರ್ಯಾಪಿಡ್ ಟೆಸ್ಟಿಂಗ್‌ ಕಿಟ್‌ಗಳನ್ನು ಬಳಸಿ ನಡೆಸಲಾದ 168 ಪರೀಕ್ಷೆಗಳ ಪೈಕಿ ಕೇವಲ ಶೇ.5.4 ಪ್ರಕರಣಗಳಲ್ಲಿ ನಿಖರ ಫಲಿತಾಂಶಗಳು ದೊರಕಿವೆ. ಹೀಗಾಗಿ ರಾಜಸ್ಥಾನ ಸರಕಾರವು ಈ ಕಿಟ್‌ಗಳ ಬಳಕೆಯನ್ನು ಮಂಗಳವಾರ ಬೆಳಿಗ್ಗೆಯಿಂದಲೇ ಸ್ಥಗಿತಗೊಳಿಸಿ,ಈ ಬಗ್ಗೆ ಐಸಿಎಂಆರ್‌ಗೆ ಮಾಹಿತಿಯನ್ನು ನೀಡಿತ್ತು.

“ನಾವು ಈ ಬಗ್ಗೆ ಐಸಿಎಂಆರ್‌ಗೆ ಪತ್ರವನ್ನು ಬರೆದಿದ್ದು ಅದರ ಉತ್ತರಕ್ಕಾಗಿ ಕಾಯುತ್ತಿದ್ದೇವೆ” ಎಂದು ತಿಳಿಸಿದ ರಾಜಸ್ಥಾನದ ಆರೋಗ್ಯ ಸಚಿವ ರಘು ಶರ್ಮಾ ಅವರು, ‘ಪಿಸಿಆರ್ ಆಧಾರಿತ ಪರೀಕ್ಷೆಗಳಲ್ಲಿ ಈಗಾಗಲೇ ಪಾಸಿಟಿವ್ ವರದಿಗಳು ಬಂದಿರುವ ರೋಗಿಗಳ ಪರೀಕ್ಷೆಗೂ ಈ ಕಿಟ್‌ಗಳನ್ನು ಬಳಸಲಾಗಿತ್ತು ಮತ್ತು ಈ ಪ್ರಕರಣಗಳಲ್ಲಿಯೂ ನೆಗೆಟಿವ್ ವರದಿಗಳು ಬಂದಿವೆ. ಇದು ಕಿಟ್‌ಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ. ಐಸಿಎಂಆರ್ ನಮ್ಮ ಶಂಕೆಯನ್ನು ದೃಢಪಡಿಸಿದರೆ ಈ ಕಿಟ್‌ಗಳನ್ನು ಮರಳಿಸಲಾಗುವುದು’ ಎಂದರು.

ರಾಜಸ್ಥಾನವು ಜೈಪುರ ಮೊದಲ್ಗೊಂಡು ರಾಜ್ಯದಲ್ಲಿಯ ಹಾಟ್‌ಸ್ಪಾಟ್‌ಗಳಲ್ಲಿ ರ್ಯಾಪಿಡ್ ಟೆಸ್ಟಿಂಗ್ ಕಿಟ್‌ಗಳ ಮೂಲಕ ಪರೀಕ್ಷೆಯನ್ನು ಶುಕ್ರವಾರದಿಂದ ಆರಂಭಿಸಿತ್ತು.

ರಕ್ತದ ಮಾದರಿಗಳನ್ನು ಪರೀಕ್ಷೆಗೊಳಪಡಿಸುವ ರ್ಯಾಪಿಡ್ ಟೆಸ್ಟಿಂಗ್ ಕಿಟ್‌ಗಳು ಶಂಕಿತ ಕೊರೋನ ವೈರಸ್ ರೋಗಿಗಳ ತಪಾಸಣೆ ಮತ್ತು ರೋಗನಿರ್ಣಯವನ್ನು ತ್ವರಿತಗೊಳಿಸುವ ಉದ್ದೇಶವನ್ನು ಹೊಂದಿವೆ. ಆದರೆ ಇದು ರೋಗವನ್ನು ದೃಢಪಡಿಸುವ ಪರೀಕ್ಷೆಯಲ್ಲ ಮತ್ತು ಪಾಸಿಟಿವ್ ಫಲಿತಾಂಶದ ದೃಢೀಕರಣಕ್ಕಾಗಿ ಪಿಸಿಆರ್ ಆಧಾರಿತ ಪರೀಕ್ಷೆಯು ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X