Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಸಿವಿನ ಆತಂಕದ ನಡುವೆ ಅಕ್ಕಿಯಿಂದ...

ಹಸಿವಿನ ಆತಂಕದ ನಡುವೆ ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿ: ಕೇಂದ್ರದ ನಿರ್ಧಾರಕ್ಕೆ ಸಾಮಾಜಿಕ ಹೋರಾಟಗಾರರ ವಿರೋಧ

ವಾರ್ತಾಭಾರತಿವಾರ್ತಾಭಾರತಿ22 April 2020 8:46 PM IST
share
ಹಸಿವಿನ ಆತಂಕದ ನಡುವೆ ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿ: ಕೇಂದ್ರದ ನಿರ್ಧಾರಕ್ಕೆ ಸಾಮಾಜಿಕ ಹೋರಾಟಗಾರರ ವಿರೋಧ

ಹೊಸದಿಲ್ಲಿ, ಎ.22: ಕೊರೋನ ವೈರಸ್ ಪಿಡುಗಿನ ಹಿನ್ನೆಲೆಯಲ್ಲಿ ಭಾರತೀಯ ಆಹಾರ ನಿಗಮದ ಗೋದಾಮುಗಳಲ್ಲಿರುವ ಹೆಚ್ಚುವರಿ ಅಕ್ಕಿಯನ್ನು ಹ್ಯಾಂಡ್ ಸ್ಯಾನಿಟೈಸರ್‌ಗಳಿಗೆ ಅಗತ್ಯವಾಗಿರುವ ಎಥೆನಾಲ್ ತಯಾರಿಕೆಗೆ ಬಳಸುವ ಕೇಂದ್ರದ ನಿರ್ಧಾರವನ್ನು ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡುತ್ತಿರುವ ‘ರೈಟ್ ಟು ಫುಡ್ ಕ್ಯಾಂಪೇನ್ (ಆರ್‌ಟಿಎಫ್‌ಸಿ)’ ಕಟುವಾಗಿ ಟೀಕಿಸಿದೆ.

ಯಾವುದೇ ವ್ಯಕ್ತಿಯು ಹಸಿವಿನಿಂದ ನರಳದಂತಾಗಲು ಸಾರ್ವಜನಿಕ ವಿತರಣೆ ವ್ಯವಸ್ಥೆ (ಪಿಡಿಎಸ್)ಯನ್ನು ಸಾರ್ವತ್ರಿಕಗೊಳಿಸುವಂತೆ ನಾಗರಿಕ ಸಮಾಜ ಮತ್ತು ಚಿಂತಕರು ಮಾಡಿಕೊಂಡಿರುವ ಹಲವಾರು ಬೇಡಿಕೆಗಳಿಗೆ ಸ್ಪಂದಿಸದ ಸರಕಾರವು ಹೆಚ್ಚುವರಿ ಅಕ್ಕಿಯಿಂದ ಎಥೆನಾಲ್ ತಯಾರಿಕೆಗೆ ನಿರ್ಧರಿಸಿರುವುದು ಆಘಾತ ಮತ್ತು ನಿರಾಶೆಯನ್ನುಂಟು ಮಾಡಿದೆ ಎಂದು ಹೇಳಿಕೆಯೊಂದರಲ್ಲಿ ತಿಳಿಸಿರುವ ಆರ್‌ಟಿಎಫ್‌ಸಿ, ಕೇಂದ್ರವು ಭಾರತದ ಪ್ರತಿಯೊಬ್ಬ ಪ್ರಜೆಗೂ ಬದುಕುವ ಹಕ್ಕನ್ನು ಖಾತರಿಪಡಿಸಿರುವ ಸಂವಿಧಾನದ 21ನೇ ವಿಧಿಯನ್ನು ಎತ್ತಿಹಿಡಿಯಬೇಕು. ಎಲ್ಲ ಬೆಳೆಗಳ ವಿಕೇಂದ್ರೀಕೃತ ಖರೀದಿಗೆ ಮುಂದಾಗುವ ಮತ್ತು ಎಲ್ಲರಿಗೂ ಆಹಾರ ಪೂರೈಕೆಗೆ ವ್ಯವಸ್ಥೆಗಳನ್ನು ಜಾರಿಗೆ ತರುವ ಬದಲು ಸರಕಾರವು ಅದನ್ನು ಸ್ಯಾನಿಟೈಸರ್ ಉತ್ಪಾದನೆಗೆ ಬಳಸಲು ಯೋಚಿಸಿರುವುದು ಶೋಚನೀಯ ವಾಗಿದೆ. ಎಲ್ಲರಿಗೂ ಕೈಗಳನ್ನು ತೊಳೆದುಕೊಳ್ಳಲು ಸಾಕಷ್ಟು ವ್ಯವಸ್ಥೆ ಇರಬೇಕು ಎನ್ನುವುದು ಮುಖ್ಯವಾಗಿದೆ ನಿಜ. ಇದಕ್ಕಾಗಿ ಸರಕಾರವು ಸಾಕಷ್ಟು ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಮತ್ತು ಪಿಡಿಎಸ್ ಮೂಲಕ ಸಾಬೂನುಗಳನ್ನು ವಿತರಿಸಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ ಎಂದಿದೆ.

ಕೋಟ್ಯಂತರ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಳ್ಳುವುದರೊಂದಿಗೆ ಮತ್ತು ವಲಸೆ ಕಾರ್ಮಿಕರು ವಿವಿಧ ರಾಜ್ಯಗಳಲ್ಲಿ ಆಹಾರ ಮತ್ತು ವಸತಿಯಿಲ್ಲದೆ ಅತಂತ್ರರಾಗುವುದರೊಂದಿಗೆ ಲಾಕ್‌ಡೌನ್ ಸಾಮೂಹಿಕ ಯಾತನೆಗೆ ಕಾರಣವಾಗಿದೆ. ಪಿಡಿಎಸ್ ಮೂಲಕ ಹೆಚ್ಚುವರಿ ಆಹಾರ ಧಾನ್ಯಗಳನ್ನು ವಿತರಿಸುವುದಾಗಿ ಪ್ರಕಟಿಸಲು ಸರಕಾರವು ಮೂರು ದಿನಗಳ ಸಮಯವನ್ನು ತೆಗೆದುಕೊಂಡಿದ್ದು,ಇದೂ ಪಡಿತರ ಚೀಟಿಗಳನ್ನು ಹೊಂದಿದವರಿಗಷ್ಟೇ ಸೀಮಿತವಾಗಿದೆ. ಕಳೆದ ಮೂರು ವಾರಗಳಿಂದ ದೇಶಾದ್ಯಂತ ಸಾಮೂಹಿಕ ಹಸಿವು ಮತ್ತು ಜನರು ಹಸಿವೆಯ ಸಂಕಟಕ್ಕೆ ಸಿಲುಕುತ್ತಿರುವ ವರದಿಗಳು ಬರುತ್ತಿವೆ. ಹೆಚ್ಚುವರಿ ಆಹಾರ ಧಾನ್ಯಗಳು ಈಗಲೂ ಹೆಚ್ಚಿನ ಸ್ಥಳಗಳಿಗೆ ತಲುಪಿಲ್ಲ ಎಂದಿರುವ ಆರ್‌ಟಿಎಫ್‌ಸಿ, ಪರಿಹಾರ ಕ್ರಮಗಳ ಲಾಭ ಪಡೆಯಲು ಸುಮಾರು 80 ಕೋಟಿ ಜನರ ಬಳಿ ಪಡಿತರ ಚೀಟಿಗಳಿಲ್ಲವಾದ್ದರಿಂದ ಪಡಿತರ ಪೂರೈಕೆಯನ್ನು ಸಾರ್ವತ್ರಿಕಗೊಳಿಸಬೇಕು ಎಂದು ಆಗ್ರಹಿಸಿದೆ.

  ದೇಶದಲ್ಲಿ ಸಾಕಷ್ಟು ಆಹಾರ ಧಾನ್ಯಗಳು ಲಭ್ಯವಿವೆ ಎಂದಿರುವ ಅದು,ಲಾಕ್‌ಡೌನ್ ಹೊರತಾಗಿಯೂ ದೇಶದಲ್ಲಿ ಆಹಾರದ ಕೊರತೆಯಿಲ್ಲ ಎಂದು ಗ್ರಾಹಕ ವ್ಯವಹಾರಗಳು,ಆಹಾರ ಮತ್ತು ಪಿಡಿಎಸ್ ಸಚಿವ ರಾಮವಿಲಾಸ ಪಾಸ್ವಾನ್ ಅವರೂ ಒಪ್ಪಿಕೊಂಡಿದ್ದಾರೆ ಎಂದೂ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X