ಲಾಕ್ ಡೌನ್ : ಬಂಟ್ವಾಳ ತಾಲೂಕಿನಾದ್ಯಂತ ರಮಾನಾಥ ರೈಯಿಂದ ಕಿಟ್ ವಿತರಣೆ

ಬಂಟ್ವಾಳ, ಎ.22: ಕೊರೋನ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಬಂಟ್ವಾಳ ತಾಲೂಕಿನಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದೆ.
ಎಪ್ರಿಲ್ ತಿಂಗಳ ಆರಂಭದಿಂದ ಕಿಟ್ ವಿತರಣಾ ಕಾರ್ಯ ನಡೆಯುತ್ತಿದ್ದು ಈಗಾಗಲೇ ತಾಲೂಕಿನ ಹಲವು ಗ್ರಾಮಗಳ ಸಾವಿರಾರು ಕುಟುಂಬಗಳಿಗೆ ಕಿಟ್ ಗಳನ್ನು ವಿತರಿಸಲಾಗಿದೆ. ಲಾಕ್ ಡೌನ್ ನಿಂದ ಬಡ, ಮಧ್ಯಮ ವರ್ಗ ಹಾಗೂ ವಲಸೆ ಕಾರ್ಮಿಕರಿಗೆ ಆಹಾರದ ಸಮಸ್ಯೆ ಉಂಟಾಗಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ - 19 ನೂಡಲ್ ಅಧಿಕಾರಿ ಪೊನ್ನುರಾಜ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಎಪಿಲ್, ಬಿಪಿಎಲ್ ಪಡಿತರ ಚೀಟಿದಾರರಿಗೆ ಕೂಡಲೇ ಪಡಿತರ ದೊರೆಯುವಂತೆ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಸಾಮಗ್ರಿ ಸಹಿತ ಅಗತ್ಯ ವಸ್ತುಗಳನ್ನು ಪೂರೈಸುವಂತೆ ರಮಾನಾಥ ರೈ ಆಗ್ರಹಿಸಿದ್ದರು.
ಈಗಾಗಲೇ ಸಜಿಪ ಮೂಡ, ಬೊಳ್ಳಾಯಿ, ಕುರ್ಯಾಳ, ಅಜ್ಜಿಬೆಟ್ಟು, ಬಿಮೂಡ, ಬಡಗಬೆಳ್ಳೂರು, ಕಾವಳಪಡೂರು, ಮಣಿನಾಲ್ಕೂರು, ಅನಂತಾಡಿ, ಕಾವಳಮೂಡೂರು, ಕುಕ್ಕಿಪಾಡಿ, ಕಳ್ಳಿಗೆ, ಮಂಚಿ, ಪಾಣೆಮಂಗಳೂರು, ಅಮ್ಟೂರು, ಬಂಟ್ವಾಳ ಕಸಬಾ, ಚೆನ್ನೈತೋಡಿ, ಭಂಡಾರಿಬೆಟ್ಟು, ಕಕ್ಯಪದವು ಸಹಿತ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಿಟ್ ಗಳನ್ನು ವಿತರಿಸಲಾಗಿದೆ. ಉಳಿದ ಗ್ರಾಮಗಳ ಅರ್ಹರಿಗೆ ಕಿಟ್ ಗಳು ಸಿದ್ಧಗೊಂಡಿದ್ದು ವಿತರಣಾ ಕಾರ್ಯ ಪ್ರತಿದಿನ ನಡೆಯುತ್ತಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
ವಿತರಣಾ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೋಡ್ರಿಗಸ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಪದ್ಮಶೇಖರ್ ಜೈನ್, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಧನಲಕ್ಷ್ಮಿ, ಚಂದ್ರಶೇಖರ ಮದ್ವ, ಶಿವಪ್ರಸಾದ್ ಕನಪಾಡಿ, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಸದಾಶಿವ ಬಂಗೇರ, ಶ್ರೀಧರ್ ಅಮೀನ್, ಲೋಲಾಕ್ಷ ಶೆಟ್ಟಿ ಸಹಿತ ಗ್ರಾಮ ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ವಲಯ ಕಾಂಗ್ರೆಸ್ ಅಧ್ಯಕ್ಷರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.







