Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಳಪೆ ಗುಣಮಟ್ಟದ ಪಿಪಿಇ ಕಿಟ್ ಖರೀದಿ?

ಕಳಪೆ ಗುಣಮಟ್ಟದ ಪಿಪಿಇ ಕಿಟ್ ಖರೀದಿ?

ಕೊರೋನ ಸಂಕಷ್ಟದ ನಡುವೆಯೂ ಅಕ್ರಮ

ಸಮೀರ್ ದಳಸನೂರುಸಮೀರ್ ದಳಸನೂರು24 April 2020 11:48 AM IST
share
ಕಳಪೆ ಗುಣಮಟ್ಟದ ಪಿಪಿಇ ಕಿಟ್ ಖರೀದಿ?

ಬೆಂಗಳೂರು: ಮಾರಕ ಕೊರೋನ ಸೋಂಕಿನ ಸಾವು ನೋವಿನ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ಅಧೀನದ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಆ್ಯಂಡ್ ವೇರ್‌ಹೌಸಿಂಗ್ ಸೊಸೈಟಿ (ಕೆಡಿಎಲ್‌ಡಬ್ಲ್ಯುಎಸ್)ಯ ಕೆಲ ಅಧಿ ಕಾರಿಗಳು ಹಣದಾಸೆಗೆ ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗಾಗಿ ಕಳಪೆ ಗುಣಮಟ್ಟದ ವೈಯಕ್ತಿಕ ಸುರಕ್ಷತಾ ಸಾಧನಗಳು(ಪಿಪಿಇ ಕಿಟ್) ಖರೀದಿಸಿ ಅಕ್ರಮವೆಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಕೋವಿಡ್-19 ಸೋಂಕಿತರನ್ನು ರಕ್ಷಿಸಲು ಔಷಧೋಪಚಾರ ನಡೆಸುವ ವೇಳೆ ಸೋಂಕಿತರಿಂದ ವೈರಸ್ ಹರಡದಂತೆ ರಕ್ಷಣೆ ಪಡೆಯಲು ವೈದ್ಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ನೀಡುವ ವೈಯಕ್ತಿಕ ಸುರಕ್ಷತಾ ಸಾಧನಗಳು(ಪಿಪಿಇ ಕಿಟ್) ಅತ್ಯಂತ ಕಳಪೆಯಿಂದ ಕೂಡಿದ್ದು, ಪ್ರಾಣ ಹಾನಿಯೂ ಸಂಭವಿಸಬಹುದು ಎಂದು ಹೇಳಲಾಗುತ್ತಿದೆ.

ಕಳಪೆ ಕಿಟ್ ಹಿಂದಕ್ಕೆ:

ಪ್ಲಾಸ್ಟಿಕ್ ಸರ್ಚ್ ಸಂಸ್ಥೆಯಿಂದ ಸರಬರಾಜು ಮಾಡಿರುವ ಪಿಪಿಇ ಕಿಟ್ ಕಳಪೆಯಿಂದ ಕೂಡಿವೆ ಎಂಬುದರ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ತಕ್ಷಣ ಹಿಂಪಡೆಯುವಂತೆ ಕೆಡಿಎಲ್‌ಡಬ್ಲ್ಯುಎಸ್ ಸಂಸ್ಥೆಯ ಅಪರ ನಿರ್ದೇಶಕ ಐಎಎಸ್ ಅಧಿಕಾರಿ ಮಂಜುಶ್ರೀ ಆದೇಶ ಹೊರಡಿಸಿದ್ದಾರೆ. ಕೆಲ ಉಗ್ರಾಣದಲ್ಲಿ ಸಂಗ್ರಹಿಸಿರುವ ಹಾಗೂ ಇತರೆ ಜಿಲ್ಲೆಗಳಿಗೆ ರವಾನೆ ಮಾಡಿರುವ ಕಿಟ್ ಅನ್ನು ತಕ್ಷಣ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳ ಜತೆ ಚರ್ಚಿಸಿ ಬೆಂಗಳೂರು ಗ್ರಾಮಾಂತರ ಉಗ್ರಾಣಕ್ಕೆ ಹಿಂದಿರುಗಿಸಿ ಡಿಎಚ್‌ಬಿ ಗ್ಲೋಬಲ್ ಸಂಸ್ಥೆಯಿಂದ ಖರೀದಿಸಲಾಗಿರುವ ಪಿಪಿಇ ಕಿಟ್ ತೆಗೆದುಕೊಂಡು ಹೋಗಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ವಿತರಣೆ: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕ ಕಾಯ್ದೆ-2000ರ(ಕೆಟಿಪಿಪಿ ಕಾಯ್ದೆ) ಟೆಂಡರ್ ನಡೆಸದೆ ದರಪಟ್ಟಿ ಆಧಾರದ ಮೇಲೆ ಖಾಸಗಿ ಸಂಸ್ಥೆಗೆ 22 ಕೋಟಿ ರೂ.ವೆಚ್ಚದ 3 ಲಕ್ಷ ಪಿಪಿಇ ಕಿಟ್ ಪೂರೈಸಲು ಖರೀದಿ ಆದೇಶ ನೀಡಲಾಗಿತ್ತು. ಆದರೆ, ಸದರಿ ಸಂಸ್ಥೆಯ ಟೆಂಡರ್ ನಿಯಮಗಳ ಸಾಮರ್ಥ್ಯ ಪರೀಕ್ಷಿಸದೆ ಸಂಸ್ಥೆಯ ಅಧಿಕಾರಿಗಳು ಕೋಟಿಗಟ್ಟಲೆ ಕಮಿಷನ್ ಪಡೆದು ನಿಯಮಬಾಹಿರವಾಗಿ ಖರೀದಿ ಆದೇಶ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಸಂಸ್ಥೆಯು ಸರಬರಾಜು ಮಾಡಿರುವ 1.5 ಲಕ್ಷ ಪಿಪಿಇ ಕಿಟ್ ಅತ್ಯಂತ ಕಳಪೆ ಗುಣಮಟ್ಟದ್ದಾಗಿದೆ. ಈ ಬಗ್ಗೆ ಸಂಸ್ಥೆಗೆ ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿದುಬಂದಿದೆ.

ಅಧಿಕಾರಿಗಳ ಕೈವಾಡ: ರಾಜ್ಯ ಸರಕಾರದಿಂದ ಕೊರೋನ ನಿರ್ವಹಣೆಗಾಗಿ ಈಗಾಗಲೇ ಸಂಸ್ಥೆಗೆ ನೂರಾರು ಕೋಟಿ ರೂ. ಅನುದಾನ ನೀಡಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಸಂಸ್ಥೆಯ ಕೆಲ ಅಧಿಕಾರಿಗಳು ಪಿಪಿಇ ಕಿಟ್ ಸಂಬಂಧ ಖರೀದಿ ಆದೇಶ ನೀಡಲು ಶೇ.12 ಕಮಿಷನ್ ಪಡೆಯುತ್ತಿದ್ದಾರೆ. ಇಬ್ಬರು ಮಹಿಳೆ ಅಧಿಕಾರಿಗಳಂತೂ ಸಂಸ್ಥೆಯ ಅಪರ ನಿರ್ದೇಶಕರ ಹೆಸರಿನಲ್ಲಿ ಪೂರೈಕೆದಾರರಿಂದ ಹಣ ವಸೂಲಿಗೆ ಇಳಿದಿದ್ದಾರೆ ಎಂದು ಹೇಳಲಾಗುತ್ತಿದೆ.

ಗುಣಮಟ್ಟದ ಕಿಟ್‌ಗಾಗಿ ಪ್ರತಿಭಟನೆ: ಕಳಪೆ ಪಿಪಿಇ ಕಿಟ್ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಐಎಸ್‌ಐ ಮತ್ತಿತರರ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯಕೀಯ ಹಾಗೂ ಅರೆ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ತಮ್ಮ ಪ್ರಾಣದ ಜತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಂಡು ನಮಗೆ ಸುರಕ್ಷಿತ ಮತ್ತು ಗುಣಮಟ್ಟದ ಪಿಪಿಇ ಕಿಟ್ ವಿತರಿಸುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಪಿಪಿಇ ಕಿಟ್‌ನಲ್ಲಿ ಏನಿರುತ್ತೇ?

ವೈದ್ಯರು ಸುರಕ್ಷತೆಗಾಗಿ ನೀಡುವ ಪಿಪಿಇ ಕಿಟ್‌ನಲ್ಲಿ 10 ಬಿಡಿ ಉತ್ಪನ್ನಗಳು ಇರಲಿವೆ. ಕನ್ನಡಕ, ಎನ್95 ಮುಖಗವಸು, ಶಸ್ತ್ರ ಚಿಕಿತ್ಸೆಯ ಮುಖವಾಡಗಳು, ಕೈಗವಸು, ಎರಡು ಪದರದ ನಿಲುವಂಗಿ, ಪಾದರಕ್ಷೆಗಳ ಕವರ್, ತ್ಯಾಜ್ಯ ಬಿಸಾಡುವ ಚೀಲ, ಪ್ಲಾಸ್ಟಿಕ್ ಏಪ್ರಾನ್ ಮತ್ತಿತರರ ಉತ್ಪನ್ನಗಳು ಇರಲಿವೆ.

ಏನಿದು ಕೆಡಿಎಲ್‌ಡಬ್ಲ್ಯುಎಸ್?

ಆರೋಗ್ಯ ಇಲಾಖೆಯ ಅಧೀನದ ಕೆಡಿಎಲ್‌ಡಬ್ಲ್ಯುಎಸ್ ಗುಣಮಟ್ಟದ ಔಷಧಿಗಳನ್ನು ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಉಚಿತವಾಗಿ ಸಕಾಲದಲ್ಲಿ ಪೂರೈಸುವ ಸಂಸ್ಥೆಯಾಗಿದೆ. ಇದಕ್ಕಾಗಿ ಪ್ರತಿ ವರ್ಷ ಬ್ಯಾಂಡೇಜ್ ಕ್ಲಾತ್, ಕಾಟನ್, ಗ್ಲೂಕೋಸ್ ಬಾಟಲ್, ಚುಚ್ಚುಮದ್ದು ಸೇರಿ ವಿವಿಧ ಔಷಧಿಗಳನ್ನು ಪೂರೈಸುತ್ತಿದೆ.

share
ಸಮೀರ್ ದಳಸನೂರು
ಸಮೀರ್ ದಳಸನೂರು
Next Story
X