ಶಾಸಕ ಭರತ್ ಶೆಟ್ಟಿ ನಡವಳಿಕೆ ಕಾನೂನು ಬಾಹಿರ, ಅಮಾನವೀಯ: ಮಾಜಿ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ- ಶಾಸಕ ಭರತ್ ಶೆಟ್ಟಿ
ಬೆಂಗಳೂರು, ಎ.24: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನು ಬಾಹಿರ ಮಾತ್ರವಲ್ಲ, ಅಮಾನವೀಯವಾದುದು ಕೂಡ. ಈ ಶಾಸಕರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪನವರು ತಕ್ಷಣ ಕ್ರಮ ಕೈಗೊಂಡು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಕೊರೋನ ಸೋಂಕಿತರ ಚಿಕಿತ್ಸೆ ಮತ್ತು ಅಂತ್ಯ ಸಂಸ್ಕಾರದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಹೊಸ ಕಾನೂನು ಜಾರಿಗೊಳಿಸಿದೆ. ಯಡಿಯೂರಪ್ಪ ಅವರು ದಕ್ಷಿಣ ಕನ್ನಡದಲ್ಲಿ ಕೊರೋನಾಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಈ ಕಾನೂನಿನಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನುಬಾಹಿರ ಮಾತ್ರವಲ್ಲ ಅಮಾನವೀಯವಾದುದುಕೂಡಾ.
— Siddaramaiah (@siddaramaiah) April 24, 2020
ಈ ಶಾಸಕರ ವಿರುದ್ಧ @BSYBJP ಅವರು ತಕ್ಷಣ ಕ್ರಮಕೈಗೊಂಡು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ನೀಡಬೇಕು.
2/2 pic.twitter.com/05c67mapGL