Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಸ ಸಾಗಿಸುವ ಆಟೊ-ಲಾರಿ ಚಾಲಕರಿಗೆ 4...

ಕಸ ಸಾಗಿಸುವ ಆಟೊ-ಲಾರಿ ಚಾಲಕರಿಗೆ 4 ತಿಂಗಳಿಂದ ಸಂಬಳ ಸಿಕ್ಕಿಲ್ಲ!

ಸಂಕಷ್ಟದಲ್ಲಿರುವ ಚಾಲಕರು: ನಿರ್ಲಕ್ಷ್ಯದ ಬಗ್ಗೆ ಚಕಾರವೆತ್ತಿದರೆ ಕೆಲಸ ಕಳೆದುಕೊಳ್ಳುವ ಭೀತಿ

ಮಂಜುನಾಥ ದಾಸನಪುರಮಂಜುನಾಥ ದಾಸನಪುರ25 April 2020 10:01 AM IST
share
ಕಸ ಸಾಗಿಸುವ ಆಟೊ-ಲಾರಿ ಚಾಲಕರಿಗೆ 4 ತಿಂಗಳಿಂದ ಸಂಬಳ ಸಿಕ್ಕಿಲ್ಲ!

ಬೆಂಗಳೂರು: ಕೊರೋನ ಸೋಂಕಿನ ನಡುವೆಯು ನಗರದಲ್ಲಿ ಕಸವನ್ನು ಬೇರೆಡೆಗೆ ಸಾಗಿಸುವಂತಹ ಆಟೊ, ಲಾರಿ ಚಾಲಕರು ಹಾಗೂ ಸಹಾಯಕರಿಗೆ 4 ತಿಂಗಳಿಂದ ಸಂಬಳ ಸಿಕ್ಕಿಲ್ಲ. ಇದರ ನಡುವೆಯೇ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಕೊರೋನ ಸೋಂಕಿನ ಪರಿಸ್ಥಿತಿಯಲ್ಲಿಯೂ ವೈದ್ಯರು, ಪೊಲೀಸರಷ್ಟೇ ಮುಖ್ಯನೆಲೆಯಲ್ಲಿ ನಿಂತು ಪೌರಕಾರ್ಮಿಕರು ಹಾಗೂ ನಗರದಲ್ಲಿರುವ ಕಸವನ್ನು ಬೇರೆಡೆಗೆ ಸಾಗಿಸುವಂತಹ ಆಟೊ, ಲಾರಿ, ಚಾಲಕರ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಇವರ ಬದುಕಿಗೆ ಕನಿಷ್ಠ ಸೌಲಭ್ಯವನ್ನು ನೀಡುತ್ತಿಲ್ಲವೆಂದು ಬೆಂಗಳೂರಿನ ಸಫಾರಿ ಕರ್ಮಚಾರಿಗಳ ಆಯೋಗದ ಸದಸ್ಯ ಆನಂದ್ ಆರೋಪಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಸುಮಾರು 4 ಸಾವಿರ ಮಂದಿ ನಗರದ ಕಸವನ್ನು ಸಾಗಿಸುವಂತಹ ಆಟೊ ಮತ್ತು ಲಾರಿ ಚಾಲಕರಿದ್ದಾರೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಇಡೀ ನಗರದ ಜನತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕಾಗಿ ಮನೆಯಲ್ಲಿದ್ದಾರೆ. ಆದರೆ, ನಗದ ಪೌರಕಾರ್ಮಿಕರು ಹಾಗೂ ಕಸವನ್ನು ಸಾಗಿಸುವಂತಹ ಆಟೊ-ಲಾರಿ ಚಾಲಕರು ಹಾಗೂ ಸಹಾಯಕರು ನಗರವನ್ನು ಆರೋಗ್ಯವಾಗಿಡುವ ದೃಷ್ಟಿಯಿಂದ ಪ್ರತಿದಿನ ಸ್ಚಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಕನಿಷ್ಠ ಸಂಬಳವಿಲ್ಲ: ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಹಾಗೂ ಸಹಾಯಕರಿಗೆ ಹೆಚ್ಚಿನ ಸಂಬಳ, ವಿಶೇಷ ಭತ್ತೆ ನೀಡಬೇಕೆಂದು ಸಾರ್ವಜನಿಕವಲಯದಿಂದ ಒತ್ತಾಯ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಸರಕಾರವು ಆ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ. ಆದರೆ, ನಗರದ ಸ್ವಚ್ಛತೆಯನ್ನು ಕಾಪಾಡುವ ಕಸ ಸಾಗಿಸುವ ವಾಹನಗಳ ಚಾಲಕರಿಗೆ, ಕನಿಷ್ಠ ಅವರಿಗೆ ನ್ಯಾಯಬದ್ಧ್ದವಾಗಿ ಸಿಗಬೇಕಾದ ಸಂಬಳವೇ ಸಿಕ್ಕಿಲ್ಲ. ಕೊಡಬೇಕಾದವರ ನಿರ್ಲಕ್ಷದ ಬಗ್ಗೆ ಚಕಾರವೆತ್ತಿದರೆ ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

ಪೌರಕಾರ್ಮಿಕರಿಗೆ ಆಗಲಿ, ಕಸವನ್ನು ಸಾಗಿಸುವಂತಹ ಲಾರಿ ಚಾಲಕರೇ ಆಗಲಿ, ತಮಗೆ ಸಂಬಳ ಸಿಗಲಿ, ಬಿಡಲಿ, ಮಳೆ, ಚಳಿ ಎನ್ನದೇ ತಮ್ಮ ದಿನದ ಕಾರ್ಯವನ್ನು ಚಾಚೂತಪ್ಪದೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಇವರಿಗೆ ಕನಿಷ್ಠ ಸಂಬಳ ಕೊಡದೆ ಸತಾಯಿಸುತ್ತಿರುವುದು ತುಂಬಾ ನೋವುಂಟು ಮಾಡಿದೆ ಎಂದು ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಆನಂದ್ ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮ ಸಂಬಳವನ್ನು ನಮ್ಮನ್ನು ನೇಮಿಸಿಕೊಂಡಿರುವ ಗುತ್ತಿಗೆದಾರರು ಕೊಡಬೇಕು. ಅವರಿಗೆ ಬಿಬಿಎಂಪಿ ವತಿಯಿಂದ 7-8 ತಿಂಗಳ ಹಣ ಬಿಡುಗಡೆ ಆಗಿಲ್ಲ. ಆದರೂ ಗುತ್ತಿಗೆದಾರರು ಎರಡು ಮೂರು ತಿಂಗಳ ಸಂಬಳ ಕೊಟ್ಟಿದ್ದಾರೆ. ಆದರೆ, ಜನೆವರಿ, ಫೆಬ್ರವರಿ, ಮಾರ್ಚ್ ತಿಂಗಳ ಸಂಬಳ ನಮಗೆ ಸಿಕ್ಕಿಲ್ಲ. ಇದರಿಂದ ಮನೆ ನಡೆಸುವುದು ಕಷ್ಟವಾಗುತ್ತಿದೆ. ಆದರೂ ಪ್ರತಿದಿನ ನಾವು ಕೆಲಸ ಮಾಡುವುದನ್ನು ಬಿಟ್ಟಿಲ್ಲ.

 ಸುನಿಲ್, ಆಟೊ ಚಾಲಕ

ನಗರದ ಕಸವನ್ನು ಬೇರೆಡೆ ಸಾಗಿಸುವಂತಹ ಸುಮಾರು 4 ಸಾವಿರ ಲಾರಿ, ಆಟೋ ಹಾಗೂ ಸಹಾಯಕರಿದ್ದಾರೆ. ಪ್ರತಿಯೊಬ್ಬರಿಗೂ ತಿಂಗಳಿಗೆ 13ರಿಂದ 14ಸಾವಿರ ರೂ. ಸಂಬಳವಿದೆ. ಇವರಿಗೆ 3ರಿಂದ 4ತಿಂಗಳಿಂದ ಸಂಬಳ ಸಿಕ್ಕಿಲ್ಲ. ಗುತ್ತಿಗೆದಾರರಿಗೆ ಬಿಬಿಎಂಪಿ ಹಣ ಬಿಡುಗಡೆ ಮಾಡುತ್ತಿಲ್ಲ. ಒಂದು ವೇಳೆ ಇವರು ಎರಡು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ಬೆಂಗಳೂರಿನ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲ. 

ಆನಂದ್,

ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ

share
ಮಂಜುನಾಥ ದಾಸನಪುರ
ಮಂಜುನಾಥ ದಾಸನಪುರ
Next Story
X