Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂತಹ ಸಮಯದಲ್ಲಿ ಕೇಂದ್ರ ಸರಕಾರಿ ನೌಕರರ...

ಇಂತಹ ಸಮಯದಲ್ಲಿ ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ನಿಲ್ಲಿಸುವ ಅಗತ್ಯವಿರಲಿಲ್ಲ: ಮನಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ25 April 2020 2:47 PM IST
share
ಇಂತಹ ಸಮಯದಲ್ಲಿ ಕೇಂದ್ರ ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ನಿಲ್ಲಿಸುವ ಅಗತ್ಯವಿರಲಿಲ್ಲ: ಮನಮೋಹನ್ ಸಿಂಗ್

ಹೊಸದಿಲ್ಲಿ,ಎ.25: ಕೊರೋನ ವೈರಸ್ ವಿರುದ್ಧ ಹೋರಾಟಕ್ಕೆ ಹಣಕಾಸನ್ನು ಕ್ರೋಢೀಕರಿಸಲು ಸರಕಾರಿ ನೌಕರರು, ಪಿಂಚಣಿದಾರರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಗಳ ತುಟ್ಟ್ಟಿಭತ್ಯೆ ಹೆಚ್ಚಳ ಪಾವತಿಯನ್ನು ತಡೆಹಿಡಿಯುವ ಕೇಂದ್ರ ಸರಕಾರದ ನಿರ್ಧಾರವನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಮತ್ತು ಇತರ ಕಾಂಗ್ರೆಸ್ ನಾಯಕರು ಕಟುವಾಗಿ ಟೀಕಿಸಿದ್ದಾರೆ.

 ಕಾಂಗ್ರೆಸ್‌ನ ಸಮಾಲೋಚಕ ತಂಡವು ಶನಿವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ಸೇರಿದ್ದು,ಕೊರೋನ ಬಿಕ್ಕಟ್ಟಿನ ಈ ಸಂದರ್ಭಲ್ಲಿ ಸರಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಪಾವತಿಯನ್ನು ಸ್ತಂಭನಗೊಳಿಸಿದ್ದಕ್ಕಾಗಿ ಮತ್ತು ದಿಲ್ಲಿಯಲ್ಲಿ ಸೆಂಟ್ರಲ್ ವಿಸ್ಟಾ ಯೋಜನೆಯ ಕಾಮಗಾರಿಯನ್ನು ಮಂದುವರಿಸಿರುವುದಕ್ಕಾಗಿ ಸರಕಾರವನ್ನು ಪಕ್ಷವು ಖಂಡಿಸಿದೆ.

ಕಳೆದ ಮಾರ್ಚ್‌ನಲ್ಲಿ ಸರಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಏರಿಕೆ ಮಾಡಲಾಗಿದ್ದ ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ ಪಾವತಿಯನ್ನು ಮುಂದಿನ ವರ್ಷದ ಜುಲೈವರೆಗೆ ತಡೆಹಿಡಿದಿರುವುದಾಗಿ ವಿತ್ತ ಸಚಿವಾಲಯವು ಗುರುವಾರ ಪ್ರಕಟಿಸಿತ್ತು.

‘ನಾವು ಸರಕಾರಿ ನೌಕರರ ಪರ ನಿಲ್ಲಬೇಕಿದೆ. ಈ ಹಂತದಲ್ಲಿ ಸರಕಾರಿ ನೌಕರರು ಮತ್ತು ಸಶಸ್ತ್ರ ಪಡೆಗಳ ಸಿಬ್ಬಂದಿಗಳ ಮೇಲೆ ಕಷ್ಟಗಳನ್ನು ಹೇರುವ ಅಗತ್ಯವಿಲ್ಲ ಎನ್ನುವುದು ನನ್ನ ಪ್ರಾಮಾಣಿಕ ಅಭಿಪ್ರಾಯವಾಗಿದೆ ’ಎಂದು ಮನಮೋಹನ ಸಿಂಗ್ ಹೇಳಿದರು.

 ಸರಕಾರದ ಕ್ರಮವು ಅಮಾನವೀಯ ಮತ್ತು ಸಂವೇದನಾಹೀನ ವಾಗಿದೆ ಎಂದು ಶುಕ್ರವಾರ ಬಣ್ಣಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು,ಕೊರೋನ ವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸರಕಾರವು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸುತ್ತಿಲ್ಲ. ಇದೇ ವೇಳೆ ನೀವು ಸೆಂಟ್ರಲ್ ವಿಸ್ಟಾ ನಿರ್ಮಿಸುತ್ತೀದ್ದಿರಿ. ಆದರೆ ನೀವು ಮಧ್ಯಮ ವರ್ಗದವರಿಂದ ಹಣವನ್ನು ತೆಗೆದುಕೊಂಡು ಅದನ್ನು ಬಡವರಿಗೆ ನೀಡದೆ ನಿಮ್ಮ ಸೆಂಟ್ರಲ್ ವಿಸ್ಟಾ ಯೋಜನೆಗೆ ವ್ಯಯಿಸುತ್ತಿದ್ದೀರಿ ಎಂದು ಹೇಳಿದರು.

ಬುಲೆಟ್ ರೈಲು ಯೋಜನೆ,ಸೆಂಟ್ರಲ್ ವಿಸ್ಟಾ ಯೋಜನೆಗಳಿಗೆ ವೆಚ್ಚವನ್ನು ಸರಕಾರವು ನಿಲ್ಲಿಸಿಲ್ಲ. ನೌಕರರ ತುಟ್ಟಿಭತ್ಯೆಗೆ ಕೈ ಹಚ್ಚುವ ಮುನ್ನ ಈ ಯೋಜನೆಗಳನ್ನು ಅದು ನಿಲ್ಲಿಸಬೇಕಿತ್ತು ಎಂದು ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಹೇಳಿದರೆ,ಅನಗತ್ಯ ಯೋಜನೆಗಳಿಗೆ ಹಣವನ್ನು ವ್ಯಯಿಸುವ ಬದಲು ಅದನ್ನು ವಲಸೆ ಕಾರ್ಮಿಕರಿಗೆ ವರ್ಗಾಯಿಸಬಹುದಿತ್ತು ಎಂದು ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ ಸಿಂಗ್ ಸುರ್ಜೆವಾಲಾ ಹೇಳಿದರು.

20,000 ಕೋ.ರೂ.ಗಳ ಸೆಂಟ್ರಲ್ ವಿಸ್ಟಾ ಯೋಜನೆಯು ರಾಷ್ಟ್ರಪತಿ ಭವನದ ಪ್ರವೇಶದ್ವಾರಗಳಿಂದ ಇಂಡಿಯಾ ಗೇಟ್‌ವರೆಗಿನ ನಾಲ್ಕು ಚ.ಕಿ.ಮೀ.ವಿಸ್ತೀರ್ಣದ ಪ್ರದೇಶದಲ್ಲಿಯ ಹಲವಾರು ಐತಿಹಾಸಿಕ ಕಟ್ಟಡಗಳನ್ನು ನೆಲಸಮಗೊಳಿಸಿ ಪುನರ್‌ನಿರ್ಮಿಸುವ ಉದ್ದೇಶವನ್ನು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X