Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರಾಶ್ರಿತರಿಗೆ ಊಟ ವಿತರಿಸುತ್ತಿರುವ...

ನಿರಾಶ್ರಿತರಿಗೆ ಊಟ ವಿತರಿಸುತ್ತಿರುವ ಶರತ್ ಗೆ ಅಕ್ಕಿ ನೀಡಿ ನೆರವಾದ ಮಂಗಳೂರಿನ ಮಸೀದಿ

ವಾರ್ತಾಭಾರತಿವಾರ್ತಾಭಾರತಿ25 April 2020 7:27 PM IST
share
ನಿರಾಶ್ರಿತರಿಗೆ ಊಟ ವಿತರಿಸುತ್ತಿರುವ ಶರತ್ ಗೆ ಅಕ್ಕಿ ನೀಡಿ ನೆರವಾದ ಮಂಗಳೂರಿನ ಮಸೀದಿ

ಮಂಗಳೂರು,ಎ. 25: ಕೊರೋನ ನಿಯಂತ್ರಣಕ್ಕಾಗಿ ಲಾಕ್‌ಡೌನ್ ವಿಧಿಸಲ್ಪಟ್ಟ ದಿನದಿಂದ ಈವರೆಗೆ ಪ್ರತೀ ದಿನ ಮಧ್ಯಾಹ್ನ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ಅನ್ನದಾನ ಮಾಡುತ್ತಿರುವ ಪಾಂಡೇಶ್ವರ ಸಮೀಪದ ಶಿವನಗರದ 4ನೇ ಮುಖ್ಯ ರಸ್ತೆಯ ನಿವಾಸಿ ಶರತ್ ಕುಮಾರ್‌ಗೆ ನಗರದ ಪಾಂಡೇಶ್ವರದ ಪೊಲೀಸ್ ಲೈನ್‌ನಲ್ಲಿರುವ ಫೌಝಿ ಜುಮಾ ಮಸ್ಜಿದ್ ವತಿಯಿಂದ ಒಂದು ವಾರಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಶುಕ್ರವಾರ ಕೊಡುಗೆಯಾಗಿ ನೀಡಲಾಯಿತು.

ಇದಕ್ಕಾಗಿ ಮಸೀದಿಯ ಅಧ್ಯಕ್ಷ, ಉದ್ಯಮಿ ಮನ್ಸೂರ್ ಅಹ್ಮದ್ ಆಝಾದ್ ಮುತುವರ್ಜಿ ವಹಿಸಿದ್ದರು. ಈ ಸಂದರ್ಭ ಮೇಯರ್ ದಿವಾಕರ್ ಪಾಂಡೇಶ್ವರ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಅಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಮದ್ರಸತುಲ್ ಬದ್ರಿಯ್ಯಿನ್‌ನ ಸದರ್ ಮುಅಲ್ಲಿಂ ರಫೀಕ್ ಮದನಿ ಮತ್ತಿತರರು ಉಪಸ್ಥಿತರಿದ್ದರು.

ಹಸಿವಿನ ಸಂಕಟ ಗೊತ್ತು: ಕೊರೋನ-ಲಾಕ್‌ಡೌನ್‌ನಿಂದ ಪರಿಸರದ ನೂರಾರು ನಿರಾಶ್ರಿತರು ಸಮಯಕ್ಕೆ ಸರಿಯಾಗಿ ಆಹಾರವಿಲ್ಲದೆ ಪರದಾಡುವುದನ್ನು ಕಂಡೆ. ನಾನು ಕೂಡ ಬಡ ಕುಟುಂಬದಲ್ಲಿ ಹುಟ್ಟಿ ಬೆಳೆದವ. ಹಾಗಾಗಿ ಹಸಿವಿನ ಸಂಕಟ ಏನೆಂದು ನನಗೆ ಗೊತ್ತಿತ್ತು. ಜೀವನದಲ್ಲಿ ಕಷ್ಟ ಪಟ್ಟು ಒಂದು ಹಂತ ತಲುಪಿದ ನನಗೆ ಆಹಾರಕ್ಕಾಗಿ ನಿರಾಶ್ರಿತರ ಅಲೆದಾಟ ಸಹಿಸಲು ಆಗಲಿಲ್ಲ. ಸ್ವಂತ ಇನೋವ ಕಾರಿನ ಬಾಡಿಗೆ ನಡೆಸುತ್ತಿರುವ ನನಗೆ ಈ ನಿರಾಶ್ರಿತರಿಗೆ ಏನಾದರು ಮಾಡಬೇಕು ಎಂದು ಬಯಸಿದೆ. ಅದರಂತೆ ಮನೆಯವರ ಮತ್ತು ಸ್ನೇಹಿತರ ಸಹಕಾರದಿಂದ ನಮ್ಮ ಮನೆಯಲ್ಲೇ ಅಡುಗೆ ತಯಾರಿಸಿ ಪ್ಯಾಕ್ ಮಾಡಿ, ಒಂದು ಬಾಟಲಿ ಕುಡಿಯುವ ನೀರಿನೊಂದಿಗೆ ಲಾಕ್‌ಡೌನ್ ಆದ ದಿನದಿಂದ ಪ್ರತೀ ದಿನ ಸುಮಾರು 160 ಮಂದಿಗೆ ಜಾತಿ, ಮತ, ಧರ್ಮ ನೋಡದೆ ಅನ್ನದಾನ ಮಾಡಿದ ತೃಪ್ತಿ ಇದೆ ಎಂದು ಶರತ್ ಕುಮಾರ್ ‘ವಾರ್ತಾಭಾರತಿ’ಗೆ ತಿಳಿಸಿದ್ದಾರೆ.

ನಗರದ ಸ್ಟೇಟ್‌ಬ್ಯಾಂಕ್ ಪರಿಸರ, ಬಿಜೈ ಕೆಎಸ್ಸಾರ್ಟಿಸಿ, ಮಾರ್ಕೆಟ್ ರಸ್ತೆ, ಕೊಟ್ಟಾರ ಮತ್ತಿತರ ಕಡೆ ಸ್ವತಃ ಕಾರಲ್ಲಿ ತೆರಳಿ ಊಟವನ್ನು ಹಂಚುತ್ತಿದ್ದೇವೆ. ನನ್ನ ಈ ಸೇವೆಗೆ ಅಬ್ದುರ್ರವೂಫ್ ಪುತ್ತಿಗೆ, ಶಿವನಗರದ ಮಾಲತಿ ಸಂತೋಷ್ ಶೆಟ್ಟಿ, ಉದಯ ನವೀನ್ ಬಂಗೇರ ಮತ್ತಿತರರು ಕೂಡ ಸಹಕರಿಸುತ್ತಿದ್ದಾರೆ.

ಈ ಮಧ್ಯೆ ಪಾಂಡೇಶ್ವರ ಮಸೀದಿಯ ಅಧ್ಯಕ್ಷ ಮನ್ಸೂರ್ ಅಹ್ಮದ್ ಆಝಾದ್ ಅವರು ಒಂದು ವಾರಕ್ಕೆ ಬೇಕಾಗುಷ್ಟು ಅಕ್ಕಿಯನ್ನು ಉಚಿತವಾಗಿ ನೀಡಿದ್ದಾರೆ. ಜಾತಿ, ಭೇದ ಮರೆತು ನಾವೆಲ್ಲ ಇಂತಹ ಸೇವೆಯಲ್ಲಿ ತೊಡಗಿಸಿಕೊಂಡರೆ ಮಾತ್ರ ನಮಗೆ ತೃಪ್ತಿ ಸಿಗಲಿದೆ ಎಂದು ಶರತ್ ಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X