Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೇ.10 ವೇತನ ಕಡಿತ ಹಿಂದೆಗೆದುಕೊಳ್ಳಲು...

ಶೇ.10 ವೇತನ ಕಡಿತ ಹಿಂದೆಗೆದುಕೊಳ್ಳಲು ಕೇಂದ್ರಕ್ಕೆ ಏರ್ ಇಂಡಿಯಾ ನೌಕರರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 April 2020 7:47 PM IST
share
ಶೇ.10 ವೇತನ ಕಡಿತ ಹಿಂದೆಗೆದುಕೊಳ್ಳಲು ಕೇಂದ್ರಕ್ಕೆ ಏರ್ ಇಂಡಿಯಾ ನೌಕರರ ಆಗ್ರಹ

ಹೊಸದಿಲ್ಲಿ,ಎ.25: ತಮ್ಮ ವೇತನದಲ್ಲಿ ಶೇ.10ರಷ್ಟು ಕಡಿತ ಮಾಡುವ ನಿರ್ಧಾರವನ್ನು ಹಿಂದೆಗೆದುಕೊಳ್ಳುವಂತೆ ಏರ್ ಇಂಡಿಯಾದ ಎಂಟು ಕಾರ್ಮಿಕ ಒಕ್ಕೂಟಗಳು ನಾಗರಿಕ ವಾಯುಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿವೆ.

ಕೋವಿಡ್-19 ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ನೌಕರರ ವೇತನಗಳಲ್ಲಿ ಕಡಿತ ಮಾಡದಂತೆ ಅಥವಾ ಅವರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರವು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳ ಕಂಪನಿಗಳಿಗೆ ಕೋರಿಕೊಂಡಿದ್ದರೂ ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೂರು ತಿಂಗಳ ಅವಧಿಗೆ ತನ್ನ ಎಲ್ಲ ನೌಕರರ ವೇತನಗಳಲ್ಲಿ ಶೇ.10ರಷ್ಟು ಕಡಿತಗೊಳಿಸುವುದಾಗಿ ಏರ್ ಇಂಡಿಯಾ ಮಾರ್ಚ್‌ನಲ್ಲಿ ಪ್ರಕಟಿಸಿತ್ತು.

ಸರಕಾರದ ನಿರ್ದೇಶಗಳಿಗೆ ವಿರುದ್ಧವಾಗಿರುವ ಏರ್ ಇಂಡಿಯಾ ಆಡಳಿತ ಮಂಡಳಿಯ ನಿರ್ಧಾರವನ್ನು ರದ್ದುಗೊಳಿಸುವಂತೆ ಮತ್ತು ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮನ್ನು ಸಾರ್ವಜನಿಕ ಕ್ಷೇತ್ರದ ಉದ್ಯಮಗಳಿಗೆ ಸಮನಾಗಿ ಪರಿಗಣಿಸುವಂತೆ ಪುರಿಯವರನ್ನು ಕೋರಿರುವ ಕಾರ್ಮಿಕ ಒಕ್ಕೂಟಗಳು,ಇಂಡಿಗೋದ ನಿರ್ಧಾರವನ್ನು ಪ್ರಶಂಸಿಸಿವೆ.

ತನ್ನ ಹಿರಿಯ ಸಿಬ್ಬಂದಿಗಳ ವೇತನಗಳನ್ನು ಕಡಿತಗೊಳಿಸುವುದಾಗಿ ಮಾರ್ಚ್‌ನಲ್ಲಿ ಪ್ರಕಟಿಸಿದ್ದ ಇಂಡಿಗೋ ಗುರುವಾರ ತನ್ನ ನಿರ್ಧಾರವನ್ನು ಹಿಂದೆಗೆದುಕೊಂಡಿತ್ತು.

ಖಾಸಗಿ ವಿಮಾನಯಾನ ಸಂಸ್ಥೆಯೊಂದು ಸರಕಾರದ ನಿರ್ದೇಶಗಳನ್ನು ಗೌರವಿಸುತ್ತಿರುವಾಗ ಏರ್ ಇಂಡಿಯಾ ಅದನ್ನು ಪಾಲಿಸಿ ಮಾದರಿಯಾಗುವುದು ಮಹತ್ವದ್ದಾಗಿದೆ ಎಂದು ಪತ್ರದಲ್ಲಿ ತಿಳಿಸಿರುವ ಕಾರ್ಮಿಕ ಒಕ್ಕೂಟಗಳು,ಏರ್ ಇಂಡಿಯಾ ಆಡಳಿತವು ಸಕಾಲದಲ್ಲಿ ವೇತನವನ್ನು ಪಾವತಿಸಲು ವಿಫಲವಾಗಿದೆ. ಎ.18ರಂದು ಪಾವತಿಸಲಾದ ವೇತನಗಳಲ್ಲಿ ಶೇ.10ರಷ್ಟು ಕಡಿತ ಮಾಡಲಾಗಿದೆ. ಅದರ ಪೈಲಟ್‌ಗಳಿಗೆ ಫೆಬ್ರವರಿ ತಿಂಗಳ ಶೇ.70ರಷ್ಟು ವೇತನ ಇನ್ನಷ್ಟೇ ಪಾವತಿಯಾಗಬೇಕಿದೆ ಎನ್ನುವುದನ್ನು ಪುರಿ ಅವರ ಗಮನಕ್ಕೆ ತಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X