Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ‘ಗಲ್ಫ್ ನ್ಯೂಸ್’ ವರದಿಗಾರ, ಪುತ್ರಿಯರಿಗೆ...

‘ಗಲ್ಫ್ ನ್ಯೂಸ್’ ವರದಿಗಾರ, ಪುತ್ರಿಯರಿಗೆ ಬಿಜೆಪಿ ಐಟಿ ಸೆಲ್ ನಿಂದ ಬೆದರಿಕೆ: ಆರೋಪ

‘ಇಸ್ಲಾಮೋಫೋಬಿಯಾ’ ಟ್ವೀಟ್ ಗಳ ಬಗ್ಗೆ ವರದಿ

ವಾರ್ತಾಭಾರತಿವಾರ್ತಾಭಾರತಿ25 April 2020 8:14 PM IST
share
‘ಗಲ್ಫ್ ನ್ಯೂಸ್’ ವರದಿಗಾರ, ಪುತ್ರಿಯರಿಗೆ ಬಿಜೆಪಿ ಐಟಿ ಸೆಲ್ ನಿಂದ ಬೆದರಿಕೆ: ಆರೋಪ

ದುಬೈ, ಎ. 25: ಯುಎಇ ಮತ್ತು ಕೊಲ್ಲಿ ದೇಶಗಳಲ್ಲಿ ಕೆಲಸ ಮಾಡುತ್ತಿರುವ ಭಾರತೀಯರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕುತ್ತಿರುವ ಇಸ್ಲಾಮಿಕ್ ವಿರೋಧಿ ಸಂದೇಶಗಳನ್ನು ಬಯಲಿಗೆಳೆದಿರುವ ದುಬೈಯ ‘ಗಲ್ಫ್ ನ್ಯೂಸ್’ ಪತ್ರಿಕೆಯ ತನಿಖಾ ವರದಿಗಾರ ಮಝರ್ ಫಾರೂಖಿ, ಬಲಪಂಥೀಯ ಐಟಿ ಸೆಲ್ ಟ್ರೋಲ್ ಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಅವರ ತನಿಖಾ ವರದಿಗಳಿಂದಾಗಿ ಇಸ್ಲಾಮ್ ವಿರೋಧಿ ಬರಹಗಳನ್ನು ಹಾಕಿರುವ ಹಲವರನ್ನು ಕಂಪೆನಿಗಳು ಕೆಲಸದಿಂದ ವಜಾಗೊಳಿಸಿವೆ ಹಾಗೂ ಹಲವು ಪ್ರಕರಣಗಳಲ್ಲಿ ಅವರ ಬಂಧನಗಳೂ ನಡೆದಿವೆ.

 “ನನ್ನ ಮೇಲ್, ವಾಟ್ಸ್‌ಆ್ಯಪ್, ಫೇಸ್‌ಬುಕ್ ಮೆಸೆಂಜರ್ ಮತ್ತು ಟ್ವಿಟರ್ ಖಾತೆಗಳಿಗೆ ಬೈಗುಳದ ಮತ್ತು ಬೆದರಿಕೆಯ ಸಂದೇಶಗಳು ಪ್ರವಾಹದಂತೆ ಹರಿದು ಬರುತ್ತಿವೆ” ಎಂದು ಫಾರೂಖಿ ಹೇಳುತ್ತಾರೆ. ಕೆಲವು ಬೆದರಿಕೆಗಳು ಖಚಿತಪಡಿಸಿದ ಖಾತೆಗಳಿಂದ ಹಾಗೂ ಪ್ರಧಾನಿ ನರೇಂದ್ರ ಮೋದಿ ಫಾಲೋ ಮಾಡುತ್ತಿರುವ ಜನರಿಂದ ಬರುತ್ತಿವೆ ಎಂದು ಅವರು ಹೇಳುತ್ತಾರೆ.

 ಈ ಪೈಕಿ ಹೆಚ್ಚಿನ ಬೆದರಿಕೆಗಳು ಕೆಟ್ಟ ಭಾಷೆಗಳನ್ನು ಒಳಗೊಂಡಿವೆ ಹಾಗೂ ಕೆಲವು ಸಂದೇಶಗಳು ಫಾರೂಖಿಯ ಪುತ್ರಿಯರಿಗೂ ಬೆದರಿಕೆ ಹಾಕಿವೆ.

 ‘ಮೋದಿ ಫಾಲೋ ಮಾಡುತ್ತಿರುವ ಜನರಿಂದ ನಿಂದನೆ, ಬೆದರಿಕೆ’:ಆರೋಪ

 ‘‘ಇದೊಂದು ಸಾಂಕ್ರಾಮಿಕವಿದ್ದಂತೆ. ಇಮೇಲ್, ಎಫ್‌ಬಿ ಮೆಸೆಂಜರ್, ಇನ್‌ಸ್ಟಾಗ್ರಾಮ್, ವಾಟ್ಸ್‌ಆ್ಯಪ್‌ಗಳಲ್ಲಿ ನೂರಾರು ಜನರಿಂದ ನನಗೆ ಸುಮಾರು 5,000 ಸಂದೇಶಗಳು ಬಂದಿವೆ. ಆದರೆ, ಬಳಿಕ ಕಾನೂನು ಕ್ರಮಕ್ಕೆ ಹೆದರಿ ಹೆಚ್ಚಿನವರು ತಮ್ಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ ಅಥವಾ ತಮ್ಮ ಸಂದೇಶಗಳನ್ನು ಡಿಲೀಟ್ ಮಾಡಿದ್ದಾರೆ’’ ಎಂದು ಫಾರೂಖಿಯನ್ನು ಉಲ್ಲೇಖಿಸಿ ‘ನ್ಯಾಶನಲ್ ಹೆರಾಲ್ಡ್’ ವರದಿ ಮಾಡಿದೆ.

‘‘ಇದೆಲ್ಲದರ ನಡುವೆಯೇ, ಬಿಜೆಪಿಯ ಮಾಹಿತಿ ತಂತ್ರಜ್ಞಾನ ಘಟಕವು ನನ್ನ ವಿರುದ್ಧ ಟ್ವಿಟರ್‌ ನಲ್ಲಿ ಆಕ್ರಮಣಕಾರಿ ಅಪಪ್ರಚಾರ ಅಭಿಯಾನವನ್ನು ನಡೆಸುತ್ತಿದೆ. ನೈಜ ಖಾತೆಗಳನ್ನು ಹೊಂದಿರುವ ಜನರು ನನ್ನನ್ನು ನಿಂದಿಸುತ್ತಿದ್ದಾರೆ ಹಾಗೂ ನನ್ನ ಪಾಸ್‌ಪೋರ್ಟನ್ನು ರದ್ದುಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಮತ್ತು ನನ್ನ ಪುತ್ರಿಯರಿಗೆ ಹಾನಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಪೈಕಿ ಕೆಲವರನ್ನು ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ. ನನ್ನ ಪುತ್ರಿಯರ ಚಿತ್ರಗಳನ್ನೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿದ್ದಾರೆ’’ ಎಂದು ಫಾರೂಖಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X