Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಅಝಾನ್ ನೀಡುವಂತಿಲ್ಲ ಎಂದು ಆದೇಶಿಸಿಲ್ಲ:...

ಅಝಾನ್ ನೀಡುವಂತಿಲ್ಲ ಎಂದು ಆದೇಶಿಸಿಲ್ಲ: ದಿಲ್ಲಿ ಪೊಲೀಸ್ ಸ್ಪಷ್ಟನೆ

ಸುಳ್ಳು ಮಾಹಿತಿ ಹರಡಿದ ಪೊಲೀಸ್ ಪೇದೆ ವಿರುದ್ಧ ಕ್ರಮ

ವಾರ್ತಾಭಾರತಿವಾರ್ತಾಭಾರತಿ25 April 2020 9:09 PM IST
share
ಅಝಾನ್ ನೀಡುವಂತಿಲ್ಲ ಎಂದು ಆದೇಶಿಸಿಲ್ಲ: ದಿಲ್ಲಿ ಪೊಲೀಸ್ ಸ್ಪಷ್ಟನೆ

ಹೊಸದಿಲ್ಲಿ, ಎ.25: ದಿಲ್ಲಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸ್ಥಳೀಯ ಮುಸ್ಲಿಮರೊಂದಿಗೆ "ಇನ್ನು ಅಝಾನ್ ನೀಡುವಂತಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ( ಎಲ್ಜಿ) ಅವರು ಆದೇಶಿಸಿದ್ದಾರೆ" ಎಂದು ಹೇಳಿರುವ ವೈರಲ್ ವಿಡಿಯೋದ ಹಿಂದಿನ ಸತ್ಯ ಕೊನೆಗೂ ಹೊರಬಿದ್ದಿದೆ. ಆ ವಿಡಿಯೋದಲ್ಲಿ ಅಝಾನ್ ನೀಡಬಾರದು ಎಂದು ಎಲ್ಜಿ ಅವರು ನೀಡಿರುವ ಆದೇಶದ ಪ್ರತಿ ತೋರಿಸುವಂತೆ ಸ್ಥಳೀಯ ಮಹಿಳೆಯರು ಕೇಳಿದಾಗ ಪೊಲೀಸ್ ಸಿಬ್ಬಂದಿ "ನಮ್ಮ ಜೊತೆ ಚರ್ಚೆಗಿಳಿಯಬೇಡಿ, ಬೇಕಾದರೆ ರೋಹಿಣಿ ನಗರ ಪೊಲೀಸ್ ಠಾಣೆಗೆ ಬಂದು ಆದೇಶವನ್ನು ನೋಡಿ" ಎಂದು ಹೇಳುತ್ತಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು " ಅಝಾನ್ ನೀಡಲು ಯಾವುದೇ ನಿರ್ಬಂಧ ಇಲ್ಲ. ಲಾಕ್ ಡೌನ್ ಅವಧಿಯಲ್ಲಿ ಯಾವುದೇ ರೀತಿಯಲ್ಲಿ ಜನರು ಯಾವುದೇ ಆರಾಧನಾಲಯಗಳಲ್ಲಿ ಪ್ರಾರ್ಥನೆಗಾಗಿ ಸೇರುವುದನ್ನು ನಿರ್ಬಂಧಿಸಲಾಗಿದೆ " ಎಂದು ಹೇಳಿದ್ದಾರೆ.

ಈ ಬಗ್ಗೆ ದಿಲ್ಲಿ ಪೊಲೀಸರೂ ಟ್ವೀಟ್ ಮಾಡಿ " ಎಲ್ಲರೂ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕು, ಮನೆಯಲ್ಲೇ ನಮಾಝ್ ಮಾಡಬೇಕು. ಆದರೆ ಅಝಾನ್ ಅನ್ನು ಎನ್ ಜಿ ಟಿ ಮಾರ್ಗಸೂಚಿ ಪ್ರಕಾರ ನೀಡಬಹುದು " ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬಿಬಿಸಿ ಹಿಂದಿ ಜೊತೆ ಮಾತನಾಡಿರುವ ರೋಹಿಣಿ ವಿಭಾಗದ ಡಿಸಿಪಿ ಎಸ್ ಡಿ ಮಿಶ್ರಾ ಅವರು "ನಾನು ಇವತ್ತು ಬೆಳಗ್ಗೆ ವಿಡಿಯೋ ನೋಡಿದ್ದೇನೆ. ನಿಜವಾಗಿ ಆ ಪೇದೆಗೆ ಅಝಾನ್ ಮತ್ತು ನಮಾಝ್ ನಡುವಿನ ವ್ಯತ್ಯಾಸ ಗೊತ್ತಾಗಿಲ್ಲ. ಹಾಗಾಗಿ ತಪ್ಪು ಮಾಹಿತಿ ನೀಡಿದ್ದಾನೆ. ಲಾಕ್ ಡೌನ್ ಅವಧಿಯಲ್ಲಿ ಸಾಮೂಹಿಕ ನಮಾಝ್ ಅನ್ನು ನಿರ್ಬಂಧಿಸಲಾಗಿದೆ. ಆದರೆ ಅಝಾನ್ ಗೆ ಯಾವುದೇ ನಿರ್ಬಂಧ ಇಲ್ಲ. ಎಲ್ಜಿ ಕಚೇರಿಯಿಂದ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ. ನಾವು ಈ ವಿಷಯವನ್ನು ಎಲ್ಲ ಮಸೀದಿಗಳ ಮೌಲ್ವಿಗಳಿಗೆ ಹೇಳಿದ್ದೇವೆ.  ಸುಳ್ಳು ಮಾಹಿತಿ ಹರಡಿದ್ದಕ್ಕೆ ಪೊಲೀಸ್ ಪೇದೆ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗಿದೆ." ಎಂದು ಹೇಳಿದ್ದಾರೆ.

ದಿಲ್ಲಿಯಲ್ಲಿ ಅಝಾನ್ ( ನಮಾಜ್ ಗೆ ಬರುವಂತೆ ನೀಡುವ ಕರೆ) ನೀಡುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳುವ ಈ ವಿಡಿಯೋ ವ್ಯಾಪಕ ಸಂಶಯ ಹಾಗು ಅಸಮಾಧಾನಕ್ಕೆ ಕಾರಣವಾಗಿತ್ತು. ಈಗ ಈ ಸ್ಪಷ್ಟೀಕರಣಗಳೊಂದಿಗೆ ಸಂಶಯ ನಿವಾರಣೆಯಾಗಿದೆ. 

ಮಸೀದಿಗಳಲ್ಲಿ ದಿನದ ಐದು ಹೊತ್ತು ನಮಾಝ್ ಸಮಯ ಆಗಿದ್ದನ್ನು ತಿಳಿಸಲು ಆಝಾನ್ ಕರೆ ನೀಡಲಾಗುತ್ತದೆ. ಇದಕ್ಕೆ ಎಲ್ಲಿಯೂ ಸರಕಾರ ನಿರ್ಬಂಧ ವಿಧಿಸಿಲ್ಲ. ಲಾಕ್ ಡೌನ್ ಅವಧಿಯಲ್ಲಿ ಮಸೀದಿ ಸಿಬ್ಬಂದಿ ಅಝಾನ್ ನೀಡಿ ಬಳಿಕ ಮಸೀದಿಯ ಧರ್ಮಗುರುಗಳು ಮತ್ತು ಸಿಬ್ಬಂದಿ ಮಾತ್ರ ಮಸೀದಿಯಲ್ಲಿ ನಮಾಜ್ ನಿರ್ವಹಿಸಬಹುದು. ಸಾರ್ವಜನಿಕರು ಮಸೀದಿಗೆ ನಮಾಝ್ ಗೆ ಬರುವಂತಿಲ್ಲ ಎಂಬುದು ಈಗ ದೇಶಾದ್ಯಂತ ಚಾಲ್ತಿಯಲ್ಲಿರುವ ಆದೇಶ.

@AltNews kindly verify this video. Here, cops are claiming that @LtGovDelhi ordered a ban on azaan during ramzan. Is this true, how can azaan violates social distancing??@zoo_bear @free_thinker @thisisjignesh pic.twitter.com/3O4AP4eRkO

— Khushboo Khan (@Khushbookhan_) April 23, 2020

अजान के लिए कोई पाबंदी नहीं है. लॉकडाउन में मस्जिदों में नमाज़ के लिए इकट्ठा होने या किसी अन्य धार्मिक स्थल पर पूजा आदि के लिए लोगों के इकट्ठा होने पर पूरी तरह पाबंदी है. https://t.co/OxYGiqaIrR

— Manish Sisodia (@msisodia) April 24, 2020

Important Information. pic.twitter.com/wCXgaWIqoX

— #DilKiPolice Delhi Police (@DelhiPolice) April 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X