Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕ್ಷಯರೋಗವು ಕೊರೋನ ವೈರಸ್‌ಗಿಂತಲೂ ಹೆಚ್ಚು...

ಕ್ಷಯರೋಗವು ಕೊರೋನ ವೈರಸ್‌ಗಿಂತಲೂ ಹೆಚ್ಚು ಅಪಾಯಕಾರಿ ಹೇಗೆ?

ವಾರ್ತಾಭಾರತಿವಾರ್ತಾಭಾರತಿ25 April 2020 11:19 PM IST
share
ಕ್ಷಯರೋಗವು ಕೊರೋನ ವೈರಸ್‌ಗಿಂತಲೂ ಹೆಚ್ಚು ಅಪಾಯಕಾರಿ ಹೇಗೆ?

ಕೊರೋನ ವೈರಸ್‌ಗಿಂತಲೂ ಹೆಚ್ಚು ಅಪಾಯಕಾರಿಯಾಗಿರುವ ರೋಗಗಳಲ್ಲಿ ಈಗಾಗಲೇ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿರುವ ಕ್ಷಯರೋಗವೂ ಒಂದು ಎನ್ನುವುದು ನಿಮಗೆ ಗೊತ್ತೇ? ವ್ಯಕ್ತಿಯಲ್ಲಿ ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ ಇತ್ಯಾದಿ ಲಕ್ಷಣಗಳು ಕಂಡು ಬಂದರೆ ಅದು ಕೊರೋನ ವೈರಸ್ ಸೋಂಕನ್ನು ಸೂಚಿಸಬಹುದು. ಅಲ್ಲದೆ ಈಗಾಗಲೇ ಇತರ ಕಾಯಿಲೆಗಳನ್ನು ಹೊಂದಿರುವವರು ಕೊರೋನ ವೈರಸ್ ಸೋಂಕಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಎದುರಿಸುತ್ತಿರುತ್ತಾರೆ.

ಇತರ ದೇಶಗಳೊಂದಿಗೆ ಭಾರತವೂ ಕೊರೋನ ವೈರಸ್‌ನ ತೀವ್ರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆದರೆ ಕ್ಷಯರೋಗವೂ ಒಂದು ಮಾರಣಾಂತಿಕ ರೋಗವಾಗಿದ್ದು, ಸಕಾಲದಲ್ಲಿ ಚಿಕಿತ್ಸೆ ಅಗತ್ಯವಾಗುತ್ತದೆ. ಕೊರೋನ ವೈರಸ್‌ನಂತೆ ಕ್ಷಯವು ಕೂಡ ಸಾಂಕ್ರಾಮಿಕ ರೋಗವಾಗಿದ್ದು,ಸಾಮಾನ್ಯವಾಗಿ ಶ್ವಾಸಕೋಶಗಳ ಮೇಲೆ ದಾಳಿ ಮಾಡುತ್ತದೆ.

ಕ್ಷಯರೋಗ ಅಥವಾ ಟಿಬಿಯಲ್ಲಿ ಸಕ್ರಿಯ ಮತ್ತು ಸುಪ್ತ ಹೀಗೆ ಎರಡು ವಿಧಗಳಿವೆ. ಎದೆನೋವು,ಚಳಿ,ಜ್ವರ,ಹಸಿವು ಕ್ಷೀಣ,ರಾತ್ರಿ ಬೆವರುವಿಕೆ,ಕೆಮ್ಮು,ಕೆಮ್ಮಿದಾಗ ರಕ್ತ ಬರುವುದು,ಅಯಾಚಿತವಾಗಿ ಶರೀರದ ತೂಕ ಕಡಿಮೆಯಾಗುವುದು ಮತ್ತು ಬಳಲಿಕೆ ಇವು ಟಿಬಿಯ ಲಕ್ಷಣಗಳಾಗಿವೆ.

ಶೀತ ಅಥವಾ ಫ್ಲೂದಂತೆ ಗಾಳಿಯ ಮೂಲಕ ಹರಡುವ ಮೈಕೊಬ್ಯಾಕ್ಟೀರಿಯಂ ಟುಬರ್‌ಕುಲೋಸಿಸ್ ವೈರಸ್ ಟಿಬಿಯನ್ನುಂಟು ಮಾಡುತ್ತದೆ. ಈ ವೈರಸ್‌ನಿಂದ ಸೋಂಕಿತ ವ್ಯಕ್ತಿಯು ಸೀನಿದಾಗ ಅಥವಾ ಕೆಮ್ಮಿದಾಗ ಸೂಕ್ಷ್ಮಜೀವಿಗಳನ್ನೊಳಗೊಂಡ ತುಂತುರು ಹನಿಗಳು ಬಿಡುಗಡೆಗೊಳ್ಳುತ್ತವೆ. ಈ ಸೂಕ್ಷ್ಮಜೀವಿಗಳನ್ನು ಉಸಿರಾಡಿಸುವವರಿಗೂ ಟಿಬಿ ಬರಬಹುದು. ಟಿಬಿಯನ್ನು ತಡೆಯುವುದು ಪ್ರಸಕ್ತ ಕಾಲಘಟ್ಟದ ಅಗತ್ಯವಾಗಿದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

 ವಿಶ್ವ ಆರೋಗ್ಯ ಸಂಸ್ಥೆಯ ವರದಿಯಂತೆ ವಿಶ್ವಾದ್ಯಂತ ಒಂದು ಕೋಟಿಗೂ ಅಧಿಕ ಕ್ಷಯರೋಗಿಗಳಿದ್ದಾರೆ. ಇಂದು ಜಗತ್ತು ಕೊರೋನ ವೈರಸ್ ಭೀತಿಯಲ್ಲಿ ಸಿಲುಕಿ ನಲುಗುತ್ತಿದೆ ಮತ್ತು ಈವರೆಗೆ ಅದಕ್ಕೆ ಔಷಧಿಯನ್ನು ಕಂಡುಹಿಡಿಯಲಾಗಿಲ್ಲ. ಗಾಳಿಯ ಮೂಲಕ ಹರಡುವ ಟಿಬಿಯನ್ನು ಗುಣಪಡಿಸಬಹುದಾದರೂ ಅದಿನ್ನೂ ಕಳವಳಕಾರಿ ರೋಗವಾಗಿದೆ ಮತ್ತು ಭಾರತದ ಆರೋಗ್ಯ ರಕ್ಷಣೆ ವ್ಯವಸ್ಥೆಗೆ ಸವಾಲಾಗಿದೆ. ಟಿಬಿಯು ಭಾರತದಲ್ಲಿ ಪ್ರತಿ ದಿನ 1,400ಕ್ಕೂ ಅಧಿಕ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದ್ದು,ಅಂಕಿಅಂಶಗಳು ಕೊರೋನ ವೈರಸ್‌ಗಿಂತ ಹೆಚ್ಚು ಭಯಾನಕವಾಗಿವೆ. ಕೋವಿಡ್-19ರಂತೆ ಟಿಬಿಗೆ ಸಂಬಂಧಿಸಿದಂತೆಯೂ ನಿಖರವಾದ ರೋಗನಿರ್ಣಯ ಮತ್ತು ಅದನ್ನು ಎದುರಿಸಲು ಅಗತ್ಯವಿರುವ ಔಷಧಿಗಳ ಬಗ್ಗೆ ಮಾಹಿತಿಯ ಕೊರತೆಯು ಇದಕ್ಕೆ ಕಾರಣವಾಗಿದೆ. ಕೋವಿಡ್-19ಕ್ಕೆ ನಮ್ಮಲ್ಲಿ ಔಷಧಿಯಿಲ್ಲ. ಟಿಬಿಗೆ ಚಿಕಿತ್ಸೆಯನ್ನು ನೀಡಬಹುದು,ಆದರೂ ಸಾವಿರಾರು ಜನರು ಈ ರೋಗದಿಂದ ಸಾಯುತ್ತಿದ್ದಾರೆ.

ಹೀಗೆ ಟಿಬಿಯು ಮಾರಣಾಂತಿಕ ಕಾಯಿಲೆಗಳಲ್ಲೊಂದಾಗಿದೆ ಮತ್ತು ಕೊರೋನ ವೈರಸ್ ಸೋಂಕು ಹರಡುವಿಕೆ ತಡೆಯಲು ಕ್ರಮಗಳನ್ನು ತೆಗೆದುಕೊಂಡಿರುವ ರೀತಿಯಲ್ಲಿ ಕ್ಷಯರೋಗವನ್ನೂ ತಕ್ಷಣ ನಿರ್ವಹಿಸುವ ಅಗತ್ಯವಿದೆ. ಕೋವಿಡ್-19 ನಮ್ಮ ಕಣ್ಣುಗಳನ್ನು ತೆರೆಸಿದೆ. ಟಿಬಿಗೆ ಸಂಬಂಧಿಸಿ ಉಂಟಾಗುವ ಸಾವುಗಳ ಸಂಖ್ಯೆಯನ್ನು ತಗ್ಗಿಸಲು ಕೊರೋನ ವೈರಸ್‌ನಂತೆ ಈ ರೋಗದ ವಿರುದ್ಧವೂ ಹೋರಾಡಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X