Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಲಾಕ್‌ಡೌನ್: ಬೀದಿ ಬದಿ ವ್ಯಾಪಾರಿಗಳ...

ಲಾಕ್‌ಡೌನ್: ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ

ಯುವರಾಜ್ ಮಾಳಗಿಯುವರಾಜ್ ಮಾಳಗಿ27 April 2020 9:48 AM IST
share
ಲಾಕ್‌ಡೌನ್: ಬೀದಿ ಬದಿ ವ್ಯಾಪಾರಿಗಳ ಬದುಕು ಅತಂತ್ರ

ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹೊರ ರಾಜ್ಯದ ಬೀದಿ ಬದಿ ವ್ಯಾಪಾರಿಗಳ ನಿತ್ಯ ಕರ್ಮಕ್ಕೂ ಇಂದು ಸಂಕಷ್ಟ ಎದುರಾಗಿದೆ.

ಹೊರ ರಾಜ್ಯಗಳಾದ ತಮಿಳುನಾಡು, ಆಂಧ್ರಪದೇಶ ಮತ್ತಿತರ ಪ್ರದೇಶಗಳಿಂದ ಆಗಮಿಸಿ ಹಲವಾರು ವರ್ಷಗಳಿಂದ ತರಕಾರಿ, ಹಣ್ಣು, ಹೂವನ್ನು ಕೆ.ಆರ್.ಮಾರುಕಟ್ಟೆ ಸುತ್ತಲಿನ ಜಾಗದಲ್ಲಿ ಮಾರಾಟ ಮಾಡಿ, ರಾತ್ರಿ ಅಲ್ಲೇ ಮಾರುಕಟ್ಟೆಯ ಅಂಗಡಿ ಮುಂಗಟ್ಟು ಖಾಲಿ ಜಾಗದಲ್ಲೇ ರಾತ್ರಿ ಕಳೆದು, ಬೆಳಗಾದರೆ ಅಲ್ಲೇ ಸಾರ್ವಜನಿಕ ಶೌಚಗೃಹದಲ್ಲಿ ನಿತ್ಯ ಕರ್ಮಗಳನ್ನು ಮುಗಿಸುತ್ತಿದ್ದ ನೂರಾರು ಜನ ವ್ಯಾಪಾರಸ್ಥರ ಜೀವನ ಇಂದು ಅತಂತ್ರಗೊಂಡಿದೆ.

ವ್ಯಾಪಾರಸ್ಥರಿಗೆ ಆರ್ಥಿಕ ಪೆಟ್ಟು: ಸದಾ ಜನ ಜಾತ್ರೆಯಂತೆ ಇರುತ್ತಿದ್ದ ಕೆ.ಆರ್.ಮಾರುಕಟ್ಟೆ ಸಂಪೂರ್ಣ ಸ್ತಬ್ಧವಾಗಿದೆ. ಇನ್ನು ಬಿಬಿಎಂಪಿಯ ಎಂಟು ವಲಯಗಳಲ್ಲಿನ ಬೀದಿ ಬದಿ ವ್ಯಾಪಾರವನ್ನು ಸಂಪೂರ್ಣವಾಗಿ ನಿಷೇಧಿಸಿದ್ದರಿಂದ ದುಡಿಯುವ ದಾರಿ ಕಾಣದೆ ಆಸರೆಯನ್ನೇ ಕಳೆದುಕೊಂಡಂತಾಗಿದೆ. ಸಾಲ ಮಾಡಿ ಜೀವನ ನಡೆಸುವಂತಹ ಪರಿಸ್ಥಿತಿ ಒದಗಿದೆ. ಇದರಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಸಾವಿರಾರು ಮಾರಾಟಗಾರರು ಕಂಗಾಲಾಗಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ ಹಾಗೂ ವಿವಿಧ ಜಿಲ್ಲೆಗಳಲ್ಲಿರುವ ಬೀದಿ ಬದಿಗಳಲ್ಲಿ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಭಾರಿ ಪೆಟ್ಟು ಬಿದ್ದಿದೆ.

ಚದುರಿದ ವ್ಯಾಪಾರ: ಕೆ.ಆರ್.ಮಾರುಕಟ್ಟೆ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿದ್ದ ಹಣ್ಣು, ತರಕಾರಿ, ಹೂವು ವ್ಯಾಪಾರಸ್ಥರು ಇಂದು ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ಜಾಗಗಳನ್ನು ಹುಡುಕಿಕೊಂಡು ವ್ಯಾಪಾರಕ್ಕೆ ಮುಂದಾಗಿದ್ದಾರೆ. ಕೆಲ ಪಾನಿಪುರಿ ಮಾರಾಟಗಾರರು ತರಕಾರಿ ಮಾರಾಟಕ್ಕೆ ಮುಂದಾಗಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದವರು ಇಂದು ಚಾಮರಾಜಪೇಟೆಯ ರಸ್ತೆ ಬದಿಗಳಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದಾರೆ. ಇನ್ನು ಕೆಲವರು ವಿಜಯನಗರ ಸುತ್ತಮುತ್ತಲಲ್ಲಿ, ನ್ಯೂ ತರಗುಪೇಟೆ ಗಲ್ಲಿಗಳಲ್ಲಿ ಹೀಗೆ ಅಲ್ಲಲ್ಲಿ ಚದುರಿಹೋಗಿದ್ದಾರೆ. 

ಸಾಲಗಾರರ ಕಾಟ: ಇನ್ನು ಬನಶಂಕರಿ, ಸಾರಕ್ಕಿ ಸೇರಿ ಬಹುತೇಕ ಬಡಾವಣೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳು, ಸಾಲ ಮಾಡಿ ವ್ಯಾಪಾರ ಮಾಡುತ್ತಿದ್ದವರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶೇ. 10 ರಿಂದ 20 ರಷ್ಟು ಬಡ್ಡಿಗೆ ಹಣ ತಂದು ವ್ಯಾಪಾರ ಮಾಡುತ್ತಿದ್ದವರು ಇಂದು ಸಾಲಗಾರರ ಕಾಟಕ್ಕೆ ತತ್ತರಿಸಿಹೋಗಿದ್ದಾರೆ.

‘50 ರೂ. ದುಡಿಯುವುದು ಕಷ್ಟ’

ಮಕ್ಕಳಿಗೆ ಮದುವೆ ಮಾಡಿ ಸಾಲ ಮಾಡಿದ್ದೇನೆ. ಇದನ್ನು ತೀರಿಸಲು ಹಲವು ವರ್ಷಗಳಿಂದ ಕೆ.ಆರ್.ಮಾರುಕಟ್ಟೆಯಲ್ಲಿ ಬೀದಿ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಮಾರುಕಟ್ಟೆಯಲ್ಲೇ ಮಲಗಿ ನಿತ್ಯ ಕರ್ಮಗಳನ್ನು ಕಳೆಯುತ್ತಿದೆ. ಇದೀಗ ದಿನಕ್ಕೆ 50 ರೂ. ದುಡಿಯುವುದು ಕಷ್ಟವಾಗಿದೆ. ಇನ್ನು ಊರಿಗೆ ವಾಪಸ್ ಹೋಗೋಣ ಎಂದರೂ ಬಸ್ ವ್ಯವಸ್ಥೆ ಇಲ್ಲ. ಫುಟ್‌ಪಾತ್‌ನಲ್ಲೇ ನಮ್ಮ ಜೀವನ ಕಳೆಯುವಂತಾಗಿದೆ. ನಿತ್ಯ ಶೌಚಗೃಹ, ಸ್ನಾನಕ್ಕೂ ಸಂಕಷ್ಟ ಎದುರಾಗಿದೆ ಎಂದು ತರಕಾರಿ ವ್ಯಾಪಾರಸ್ಥೆ ರತ್ನಮ್ಮ ತಮ್ಮ ಆಳಲನ್ನು ತೋಡಿಕೊಂಡಿದ್ದಾರೆ.

ಬಾಗಲಕೋಟೆ ಜಮಖಂಡಿ ತಾಲೂಕು ನಮ್ಮದು. ಹಲವು ವರ್ಷಗಳಿಂದ ಕೆ.ಆರ್.ಮಾರುಕಟ್ಟೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ತರಕಾರಿ ಮಾಡುಕೊಂಡು ಜೀವನ ನಡೆಸುತ್ತಿದೆ. ಈಗ ಅಲ್ಲೂ ಕೂಡ ವ್ಯಾಪಾರಕ್ಕೆ ಅವಕಾಶವಿಲ್ಲದಂತಾಗಿದೆ.

-ಶಾರದಮ್ಮ, ತರಕಾರಿ ವ್ಯಾಪಾರಸ್ಥೆ.

ನಗರದಲ್ಲಿ 80 ರಿಂದ 1 ಲಕ್ಷ ಬೀದಿ ಬದಿ ವ್ಯಾಪಾರಿಗಳಿದ್ದಾರೆ. ಕೇವಲ ತರಕಾರಿ, ಹೂವು, ಹಣ್ಣು ಮಾರಾಟಕ್ಕೆ ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಪಾನಿಪುರಿ, ಫುಟ್‌ಪಾತ್‌ನಲ್ಲಿ ಆಹಾರ ತಯಾರಿಸುವವರು ಸೇರಿ ಇನ್ನುಳಿದ ವ್ಯಾಪಾರಸ್ಥರ ಆರ್ಥಿಕ ನೆರವಿಗೂ ಸರಕಾರ ಮುಂದಾಗಬೇಕು.

 -ರಂಗಸ್ವಾಮಿ, ರಾಜ್ಯಾಧ್ಯಕ್ಷ,

ಬೀದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟ

share
ಯುವರಾಜ್ ಮಾಳಗಿ
ಯುವರಾಜ್ ಮಾಳಗಿ
Next Story
X