Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹೇಂದ್ರ ಕುಮಾರ್ ರಿಗೆ ಶ್ರದ್ಧಾಂಜಲಿ‌...

ಮಹೇಂದ್ರ ಕುಮಾರ್ ರಿಗೆ ಶ್ರದ್ಧಾಂಜಲಿ‌ ಅರ್ಪಿಸಲು ಇಂದು ರಾತ್ರಿ 8 ಗಂಟೆಗೆ ಮನೆ‌ ಮುಂದೆ ದೀಪ ಹಚ್ಚಿ

'ನಮ್ಮ ಧ್ವನಿ' ಬಳಗ ಕರೆ

ವಾರ್ತಾಭಾರತಿವಾರ್ತಾಭಾರತಿ27 April 2020 5:33 PM IST
share
ಮಹೇಂದ್ರ ಕುಮಾರ್ ರಿಗೆ ಶ್ರದ್ಧಾಂಜಲಿ‌ ಅರ್ಪಿಸಲು ಇಂದು ರಾತ್ರಿ 8 ಗಂಟೆಗೆ ಮನೆ‌ ಮುಂದೆ ದೀಪ ಹಚ್ಚಿ

ಚಿಕ್ಕಮಗಳೂರು, ಎ.27: ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ಬಜರಂಗದಳ ಮಾಜಿ ರಾಜ್ಯ ಸಂಚಾಲಕ, ಚಿಂತಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಅವರಿಗೆ ಶ್ರದ್ಧಾಂಜಲಿ‌ ಅರ್ಪಿಸಲು ಇಂದು (ಎ.27) ರಾತ್ರಿ 8 ಗಂಟೆಗೆ ಮನೆ‌ ಮುಂದೆಯೇ ದೀಪ/ಕ್ಯಾಂಡಲ್ ಹಚ್ಚಿ ಪ್ರಾರ್ಥಿಸಲು 'ನಮ್ಮ ಧ್ವನಿ' ಬಳಗ ಕರೆ ನೀಡಿದೆ.

ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿರುವ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರು, "ನಮ್ಮನಗಲಿದ‌ ಮಹೇಂದ್ರ ಕುಮಾರ್ ಅವರಿಗೆ ಶ್ರದ್ಧಾಂಜಲಿ‌ ಅರ್ಪಿಸಲು ಇಂದು ರಾತ್ರಿ 8 ಗಂಟೆಗೆ ನಮ್ಮ ಮನೆ‌ ಮುಂದೆಯೇ ದೀಪ/ಕ್ಯಾಂಡಲ್ ಹಚ್ಚಿ ಪ್ರಾರ್ಥಿಸಲು‌ ಮಹೇಂದ್ರಕುಮಾರ್ ಅವರು ಕಟ್ಟಿರುವ 'ನಮ್ಮ ಧ್ವನಿ' ಬಳಗ ಮತ್ತು ಗೆಳೆಯರು ನಿರ್ಧರಿಸಿದ್ದಾರೆ. ನಾವೆಲ್ಲರೂ ಇದರಲ್ಲಿ‌ ಪಾಲ್ಗೊಳ್ಳೋಣ" ಎಂದು ತಿಳಿಸಿದ್ದಾರೆ.

ಮಹೇಂದ್ರ ಕುಮಾರ್ ಎನ್ನುವುದು ಶರೀರವಲ್ಲ, ಅದೊಂದು ಕನಸು. ಇಂದು ರಾತ್ರಿ 8 ಗಂಟೆಗೆ ಒಂದು ದೀಪ/ಕ್ಯಾಂಡಲ್ ಹಚ್ಚುವುದರ ಜೊತೆಗೆ ಪ್ರಾರ್ಥನೆ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಮಹೇಂದ್ರ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಅವರು ವಿನಂತಿಸಿದ್ದಾರೆ.

ಪ್ರಪಂಚದಾದ್ಯಂತ ಬೇರೆ ಬೇರೆ ದೇಶಗಳಲ್ಲಿ ಮಹೇಂದ್ರ ಕುಮಾರ್ ಅವರನ್ನು ಪ್ರೀತಿಸುತ್ತಿದ್ದ ಹಾಗೂ ಅವರ ಹೋರಾಟವನ್ನು ಗೌರವಿಸುತ್ತಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಈ ಲಾಕ್ ಡೌನ್ ಕಾರಣದಿಂದ ಕೆಲವೇ ಸ್ನೇಹಿತರನ್ನು ಹೊರತುಪಡಿಸಿ ಉಳಿದ ಯಾರಿಗೂ ಅವರ ಅಂತಿಮ ದರ್ಶನವಾಗಲಿಲ್ಲ ಎನ್ನುವುದು ಬೇಸರದ ಸಂಗತಿ. ಆ ಕಾರಣಕ್ಕಾಗಿ ಇವತ್ತು ರಾತ್ರಿ 8 ಗಂಟೆಗೆ ಅವರನ್ನು ಪ್ರೀತಿಸುತ್ತಿದ್ದ, ಗೌರವಿಸುತ್ತಿದ್ದ, ಹಾಗೂ ಅವರ ಹೋರಾಟವನ್ನು ಒಪ್ಪುತ್ತಿದ್ದ ಎಲ್ಲರೂ ಕೂಡ ನಮ್ಮ ನಮ್ಮ ಮನೆಗಳಲ್ಲಿ ಒಂದು ದೀಪ/ಕ್ಯಾಂಡಲ್ ಬೆಳಗುವುದರ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸೋಣ ಎನ್ನುವುದು ನಮ್ಮ ಆಶಯ. ಸರಿಯಾಗಿ 8 ಗಂಟೆಗೆ ಎಲ್ಲರೂ ಕೂಡ ದೀಪ ಹಚ್ಚುವುದರ ಜೊತೆಗೆ ಪ್ರಾರ್ಥನೆ ಸಲ್ಲಿಸಿ ಆ ಫೋಟೋ ಗಳನ್ನು ಒಂದೇ ಸಮಯಕ್ಕೆ ಫೇಸ್ಬುಕ್, ವಾಟ್ಸಾಪ್, ಟ್ವಿಟ್ಟರ್ ಹಾಗು ಇತರ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದರ ಮುಖಾಂತರ ಮಹೇಂದ್ರ ಕುಮಾರ್ ಅವರಿಗೆ ಗೌರವ ಸಲ್ಲಿಸೋಣ ಹಾಗು ಅವರ ಸಾವನ್ನು ಸಂಭ್ರಮಿಸುತ್ತಿರುವ ಅಲ್ಪಮತಿಗಳ ಹೃದಯದಲ್ಲಿ ದ್ವೇಷ ಅಳಿದು ಪ್ರೀತಿಯ ದೀಪ ಬೆಳಗಿಸುವ ಪ್ರಯತ್ನ ಪಡೋಣ ಎಂದು ದಿನೇಶ್ ಅಮೀನ್ ಮಟ್ಟು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X