Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಖಾಸಗಿ ಆಸ್ಪತ್ರೆ ಕೊರೋನ...

ಮಂಗಳೂರು: ಖಾಸಗಿ ಆಸ್ಪತ್ರೆ ಕೊರೋನ ಹಾಟ್‌ಸ್ಪಾಟ್ !

ವಾರ್ತಾಭಾರತಿವಾರ್ತಾಭಾರತಿ27 April 2020 7:55 PM IST
share
ಮಂಗಳೂರು: ಖಾಸಗಿ ಆಸ್ಪತ್ರೆ ಕೊರೋನ ಹಾಟ್‌ಸ್ಪಾಟ್ !

ಮಂಗಳೂರು, ಎ.27: ಕೊರೋನ ಸೋಂಕಿಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಮಂಗಳೂರು ಹೊರ ವಲಯದ ಖಾಸಗಿ ಆಸ್ಪತ್ರೆ ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ. ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಲಶೇಖರದ ಇಬ್ಬರಿಗೆ ಕೊರೋನ ಸೋಂಕು ದೃಢಗೊಳ್ಳುವುದರೊಂದಿಗೆ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಒಟ್ಟು ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಮನಪಾ ವ್ಯಾಪ್ತಿಯ ಕುಲಶೇಖರ ನಿವಾಸಿ 80 ವರ್ಷದ ವೃದ್ಧೆ ಹಾಗೂ ಅವರ 45 ವರ್ಷದ ಪುತ್ರನಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಇತ್ತೀಚೆಗೆ ಪಡೀಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊರೋನ ಸೋಂಕಿನಿಂದ ಮೃತಪಟ್ಟ ವೃದ್ಧೆಯ ಸಮೀಪದ ಬೆಡ್‌ನಲ್ಲಿ ಈ 80 ವರ್ಷದ ವೃದ್ಧೆ ಚಿಕಿತ್ಸೆ ಪಡೆಯುತ್ತಿದ್ದರು. ಪುತ್ರ ಅವರ ಆರೈಕೆ ಮಾಡುತ್ತಿದ್ದು, ಅವರಿಗೂ ಸೋಂಕು ದೃಢಪಟ್ಟಿದೆ. ಈ ನಡುವೆ ನಿನ್ನೆ ಆಸ್ಪತ್ರೆಯ ಸಿಬ್ಬಂದಿಯೊಬ್ಬರಿಗೂ ಕೊರೋನ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯ 190 ಸಿಬ್ಬಂದಿ ಸಹಿತ 200ಕ್ಕೂ ಅಧಿಕ ಜನರ ತಪಾಸಣೆ ನಡೆಸಲಾಗಿದ್ದು, ಎಲ್ಲರನ್ನೂ ಕ್ವಾರಂಟೈನ್‌ಗೊಳಪಡಿಸಲಾಗಿದೆ.

ಎ.19ರಂದು ಬಂಟ್ವಾಳ ಪೇಟೆಯ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಮಹಿಳೆಯ ಅತ್ತೆ ಪಡೀಲ್ ಸಮೀಪದ ಈ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ವಿಚಾರಿಸಲೆಂದು ಹೋಗಿದ್ದ ಸಂದರ್ಭ ಅತ್ತೆಗೂ ಸೋಂಕು ತಗಲಿದೆ ಎನ್ನಲಾಗಿದೆ. ಇದರಿಂದ ಅತ್ತೆ ಎ.23ರಂದು ಮೃತಪಟ್ಟಿದ್ದರು. ಅಂದೇ ಆಸ್ಪತ್ರೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿತ್ತು. ಈ ಮೂಲಕ ಬಂಟ್ವಾಳದ ಒಂದೇ ಕುಟುಂಬದ ಇಬ್ಬರು ಮೃತರಾಗಿದ್ದಾರೆ. ಪ್ರಥಮವಾಗಿ ಮೃತಪಟ್ಟ ಮಹಿಳೆಯಿಂದ ನೆರೆಮನೆಯ ಇಬ್ಬರಿಗೆ ಸೋಂಕು ತಗಲಿತ್ತು. ನಿನ್ನೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇಂದು ದೃಢಗೊಂಡ ಇಬ್ಬರಿಗೆ ಆಸ್ಪತ್ರೆಯಲ್ಲಿ ಸೋಂಕು ತಗಲಿದೆ.

ಬಂಟ್ವಾಳದಿಂದ ಮಂಗಳೂರಿನತ್ತ !

ದ.ಕ. ಜಿಲ್ಲೆಯಲ್ಲಿ ಸದ್ಯ ಬಂಟ್ವಾಳ ಹಾಟ್‌ಸ್ಪಾಟ್ ಆಗಿತ್ತು. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕೊರೋನ ಸೋಂಕಿತರಿಬ್ಬರ ಸಾವು ಜಿಲ್ಲೆಯ ಪಾಲಿಗೆ ಸಾಕಷ್ಟು ಆತಂಕವನ್ನೇ ಸೃಷ್ಟಿಸಿತ್ತು. ಇದಕ್ಕೂ ಮೊದಲು ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲೂ ಒಂದು ಪ್ರಕರಣ ಕಾಣಿಸಿಕೊಂಡಿತ್ತು. (ಸದ್ಯ ಅವರು ಆಸ್ಪತ್ರೆಯಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.) ಇಂದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕುಲಶೇಖರ ನಿವಾಸಿಗಳಿಬ್ಬರಲ್ಲಿ ಕೊರೋನ ಸೋಂಕು ದೃಢಪಡುವುದರೊಂದಿಗೆ ಮಂಗಳೂರು ನಗರಕ್ಕೂ ಸೋಂಕು ವ್ಯಾಪಿಸಿದಂತಾಗಿದೆ.

ಮಂಗಳೂರು ನಗರ ಹೊರ ವಲಯದ ಬೆಳ್ತಂಗಡಿ, ಬಂಟ್ವಾಳ, ತೊಕ್ಕೊಟ್ಟಿನಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿಕೊಳ್ಳುತ್ತಿದ್ದ ಮಂಗಳೂರಿಗರು ಇದೀಗ ತಮ್ಮ ಆಸುಪಾಸಿನಲ್ಲೇ ಪ್ರಕರಣಗಳು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗುತ್ತಿದೆ.
ಕುಲಶೇಖರ ಸಮೀಪದ ಶಕ್ತಿನಗರದ ಕಕ್ಕೆಬೆಟ್ಟು ಪ್ರದೇಶವನ್ನು ಕಂಟೈನ್ಮೆಂಟ್ ರೆನ್ ಆಗಿ ಜಿಲ್ಲಾಡಳಿತ ನಿರ್ಬಂಧಿಸಿದೆ. ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಸೋಮವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಗಡಿ ಗುರುತು ಮಾಡಿದ್ದಾರೆ. ಬಳಿಕ ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಭೇಟಿ ನೀಡಿ ಪರಿಶೀಲಿಸಿದರು.

ಶಕ್ತಿನಗರದ ಪದವು ಗ್ರಾಮದ 22 ಮನೆ ವ್ಯಾಪ್ತಿ ಪ್ರದೇಶಗಳು ಕಂಟೈನ್ಮೆಂಟ್ ವಲಯಕ್ಕೊಳಪಡುತ್ತವೆ. ಅಲ್ಲಿನವರಿಗೆ ಹಾಲು, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ಪಾಲಿಕೆಯಿಂದ ವ್ಯವಸ್ಥೆ ಮಾಡಲಾಗುವುದು.
- ಶಾನಾಡಿ ಅಜಿತ್ ಕುಮಾರ್ ಹೆಗ್ಡೆ,
ಆಯುಕ್ತರು, ಮನಪಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X