Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗಮಂಗಲ ಕೊರೋನ ಸೋಂಕಿತನ ಉಡುಪಿ...

ನಾಗಮಂಗಲ ಕೊರೋನ ಸೋಂಕಿತನ ಉಡುಪಿ ಸಂಪರ್ಕಿತರು ಕ್ವಾರಂಟೈನ್‌ಗೆ

ಮರವಂತೆ ಪೆಟ್ರೋಲ್ ‌ಬಂಕ್ ಸೀಲ್

ವಾರ್ತಾಭಾರತಿವಾರ್ತಾಭಾರತಿ27 April 2020 9:26 PM IST
share
ನಾಗಮಂಗಲ ಕೊರೋನ ಸೋಂಕಿತನ ಉಡುಪಿ ಸಂಪರ್ಕಿತರು ಕ್ವಾರಂಟೈನ್‌ಗೆ

ಉಡುಪಿ, ಎ.27: ಇಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೊರೋನ ವೈರಸ್ ಸೋಂಕಿಗೆ ಪಾಸಿಟಿವ್ ಆಗಿರುವ ಮುಂಬೈ ಹೊಟೇಲೊಂದರ ಉದ್ಯೋಗಿ 50ರ ಹರೆಯದ ರೋಗಿ ನಂ.505, ಲಾಕ್‌ಡೌನ್ ನಡುವೆಯೇ ಮುಂಬೈಯಿಂದ ಮಂಡ್ಯಕ್ಕೆ ಕ್ಯಾಂಟರ್‌ನಲ್ಲಿ ಪ್ರಯಾಣಿಸುವಾಗ ಉಡುಪಿಯಲ್ಲಿ ಸ್ನಾನ ಹಾಗೂ ತಿಂಡಿಗೆಂದು ಇಳಿದಿರುವುದು ಇದೀಗ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ತಲೆನೋವಿಗೆ ಕಾರಣವಾಗಿದೆ.

ಈತ ಎ.22ರಂದು ನಾಗಮಂಗಲ ತಲುಪಿದ್ದು, 24ಕ್ಕೆ ಕೊರೋನ ಸೋಂಕಿನ ಪರೀಕ್ಷೆಗೊಳಗಾಗಿದ್ದರು. ಇಂದು ಅವರ ಸ್ಯಾಂಪಲ್ ಪಾಸಿಟಿವ್ ಬಂದಿದೆ. ಈ ಸೋಂಕಿತ ಮುಂಬೈಯಿಂದ ಎ.20ರಂದು ಖರ್ಜೂರ ಸಾಗಿಸುವ ಕ್ಯಾಂಟರ್ ನಲ್ಲಿ ಪ್ರಯಾಣ ಬೆಳೆಸಿದ್ದು, ಉಡುಪಿಗೆ ಬಂದು ಇಲ್ಲಿನ ಪೆಟ್ರೋಲ್ ಬಂಕ್ ಬಳಿ ಸ್ನಾನ ವಾಡಿ, ಅಲ್ಲೇ ತಿಂಡಿ ತಿಂದಿದ್ದ ಎನ್ನಲಾಗಿದೆ.

ಇದೀಗ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಆತ ಸ್ನಾನ ಮಾಡಿದ, ತಿಂಡಿ ಸೇವಿಸಿದ ಸ್ಥಳವನ್ನು ಪತ್ತೆ ಹಚ್ಚಿದ್ದು, ಅದು ಮರವಂತೆಯ ಐಓಸಿ ಪೆಟ್ರೋಲ್ ಬಂಕ್ ಎಂದು ಗುರುತಿಸಿದೆ. ಇದೀಗ ಈ ಪೆಟ್ರೋಲ್ ಬಂಕ್‌ನ್ನು ಸೀಲ್ ಮಾಡಲಾಗಿದ್ದು, ಅಲ್ಲಿನ ಎಲ್ಲಾ ಕೆಲಸಗಾರರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಇಂದು ರಾತ್ರಿ ಪತ್ರಿಕೆಗೆ ತಿಳಿಸಿದ್ದಾರೆ.

ಆತ ಇಲ್ಲಿ ಸ್ನಾನ ಮಾಡಿದ್ದು, ಬಳಿಕ ತಾನು ತಂದ ತಿಂಡಿಯನ್ನು ತಿಂದಿದ್ದಾನೆ. ಹೀಗಾಗಿ ಪೆಟ್ರೋಲ್ ಬಂಕ್‌ನ್ನು ಸೀಲ್ ಮಾಡಿ, ಅಲ್ಲಿನ ಮ್ಯಾನೇಜರ್ ಸೇರಿದಂತೆ ಎಲ್ಲಾ ಕೆಲಸಗಾರರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಅಲ್ಲದೇ ಆತ ಸ್ನಾನ ಮಾಡಿದ ಬಳಿಕ ಯಾರ್ಯಾರು ಅಲ್ಲಿ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಯನ್ನೂ ಕಲೆ ಹಾಕಲಾಗುತ್ತಿದೆ. ಅವರನ್ನು ಹಾಗೂ ಬೇರೆ ಯಾರಾದರೂ ಅವರ ಸಂಪರ್ಕಕ್ಕೆ ಬಂದಿದ್ದರೇ ಎಂಬ ಮಾಹಿತಿ ಪಡೆದು ಅವರನ್ನು ಸಹ ಕ್ವಾರಂಟೈನ್‌ನಲ್ಲಿರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X